“ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವವೇ ದಶಲಕ್ಷಣ ಮಹಾಪರ್ವ” – ಹೊಂಬುಜಾ ಶ್ರೀ

“ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವವೇ ದಶಲಕ್ಷಣ ಮಹಾಪರ್ವ” – ಹೊಂಬುಜಾ ಶ್ರೀ

ಹೊಂಬುಜ : ದಶಲಕ್ಷಣ ಪರ್ವ ಎನ್ನುವಂತಹದ್ದು ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವ. ಇದರಲ್ಲಿ ಬರುವಂತಹ ಕ್ಷಮಾದಿ ದಶಲಕ್ಷಣ ಧರ್ಮಗಳು ಆತ್ಮನ ಲಕ್ಷಣಗಳಾಗಿದೆ. ಮೊದಲನೇಯದು ಉತ್ತಮ ಕ್ಷಮೆಯಾಗಿದ್ದು ಇದು ಕ್ರೋಧದ ಅಭಾವದಿಂದ ನಿಜವಾದಂತಹ ಸ್ವಾಭಾವವಾದಂತಹ ಕ್ಷಮಾಗುಣ ಪ್ರಕಟವಾಗುವಂತದಾಗಿದೆ ಎಂದು ಪರಮಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೇಳಿದರು.

ಕ್ಷಮೆಯಿಂದ ನಾವು ಇನ್ನೊಬ್ಬರನ್ನು ಕ್ಷಮಿಸುವುದರೊಂದಿಗೆ ನಮಗೆ ಇನ್ನೊಬ್ಬರಿಂದ ಆದಂತಹ ಹಾನಿಯನ್ನು ಸಹ ಆ ಕ್ಷಣದಲ್ಲಿ ಮರೆತರೆ ನಮಗೆ ನಿಜವಾದಂತಹ ಕ್ಷಮಾಗುಣ ನಮ್ಮ ಧರ್ಮದಲ್ಲಿ ಇನ್ನಷ್ಟು ವೃದ್ಧಿಯಾಗುತ್ತದೆ.
ಅದಕ್ಕಾಗಿ ನಾವು ಯಾವಾಗಲೂ ಎಂತಹ ಕಠಿಣ ಪರಿಸ್ಥಿತಿಯಲ್ಲೂ ನಮಗೆ ನಿಂದೆ, ಅಪಮಾನ, ಅವಮಾನ ಮಾಡಲಿ ಯಾವ ಪರಿಸ್ಥಿತಿ ಯಾವುದೇ ಒಬ್ಬ ವ್ಯಕ್ತಿಗೆ ಆ ಸಂದರ್ಭದಲ್ಲಿ ಕ್ಷಮಿಸಿ ಅವನು ಪದೇ ಪದೇ ತಪ್ಪನ್ನು ಮಾಡಿದರೂ ಅವನನ್ನು ಕ್ಷಮಿಸಿ ಮುಂದೆ ನಮ್ಮ ಜೀವನವನ್ನು ನೋಡಿಕೊಳ್ಳಬೇಕು. ವಿಕೃತಿಯನ್ನು ಮಾಡುವವರ ಜೊತೆ ಯಾವುದೇ ರೀತಿಯ ಸಂಬಂಧವನ್ನು ಇಟ್ಟುಕೊಳ್ಳಬಾರದು ಎಂಬುದೇ ಕ್ಷಮಾ ಧರ್ಮವಾಗಿದೆ.


ನೂರಾರು ವರ್ಷ ತಪಸ್ಸು ಮಾಡಿದ ತಪಸ್ವಿಗಿಂತಲೂ ಕ್ಷಣ ಮಾತ್ರದಲ್ಲಿ ಯಾವುದೇ ಒಬ್ಬ ವ್ಯಕ್ತಿ ಮಾಡಿದ ತಪ್ಪನ್ನು ಕ್ಷಮಿಸುವವನೇ ನಿಜವಾದಂತಹ ಮಹಾನ್ ವ್ಯಕ್ತಿಯಾಗಿರುತ್ತಾನೆಂದು ಆಚಾರ್ಯರು ಹೇಳಿರುತ್ತಾರೆ.
ಶ್ರೀ ಪಾರ್ಶ್ವನಾಥ ಸ್ವಾಮಿ, ಶ್ರೀ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪೂಜೆ ನೆರವೇರಿಸಿ, ಶ್ರೀ ಮಹಾವೀರ ತೀರ್ಥಂಕರರ ಸಾನಿಧ್ಯದಲ್ಲಿ ಆರ್ಯಿಕಾ ಶ್ರೀ 105 ಶಿವಮತಿ ಮಾತಾಜಿ ಉಪಸ್ಥಿತಿಯಲ್ಲಿ ಸ್ವಸ್ತಿಶ್ರೀಗಳವರು ಜೈನಾಗಮದಲ್ಲಿ ಮಹಾಪರ್ವ ಎಂದೇ ದಶಲಕ್ಷಣ ಅಥವಾ ಉತ್ತಮ ಹತ್ತು ಧರ್ಮಗಳು ಎಂಬ ಸಿದ್ಧಾಂತಗಳು ಲೋಕಶಾಂತಿಯತ್ತ ಸಾಗುವಂತೆ ಪ್ರೇರೇಪಿಸುತ್ತವೆ ಎಂದರು.


ಶ್ರೀ ನೇಮಿನಾಥ ಸ್ವಾಮಿ, ಶ್ರೀ ಸರಸ್ವತಿ ದೇವಿ, ಶ್ರೀ ಕೂಷ್ಮಾಂಡಿನಿ ದೇವಿ, ಶ್ರೀ ಆದಿನಾಥ ಸ್ವಾಮಿ ಸಾನಿಧ್ಯದಲ್ಲಿ ದಾರ್ಮಿಕ ವಿಧಾನಗಳು ಜರುಗಿದವು. ಶ್ರೀ ಪದ್ಮಾವತಿ ಮಹಿಳಾ ಮಂಡಳ, ಹುಂಚ ಜೈನ ಶ್ರಾವಕರು, ಕುಂದಕುಂದ ವಿದ್ಯಾಪೀಠದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಉತ್ತಮ ಕ್ಷಮಾ ಧರ್ಮದ ತತ್ವಗಳನ್ನು ಮನವರಿಕೆ ಮಾಡಿಕೊಂಡರು. ಮುಂದಿನ ಹತ್ತು ದಿನಗಳ ಪರ್ಯಂತ ನಿಯಮಾನುಸಾರ ಉಪವಾಸ, ಪೂಜೆ, ಸ್ವಾಧ್ಯಾಯ ಮಾಡುವ ಸಂಕಲ್ಪ ಮಾಡಿದರು. ಶ್ರೀಗಳವರ ಪ್ರವಚನ ನಿತ್ಯವೂ ಆಯೋಜಿಸಲ್ಪಟ್ಟಿದೆ ಎಂದು ಹೊಂಬುಜ ಶ್ರೀಮಠದ ಪ್ರಕಟಣೆ ತಿಳಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

7 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

20 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

22 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

1 day ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

1 day ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

1 day ago