ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ

ಹೊಸನಗರ; ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ ಪ್ರಕರಣವೊಂದನ್ನು ತಹಸೀಲ್ದಾರ್ ಎಚ್.ಜೆ.ರಶ್ಮಿ ಬೇಧಿಸಿದ್ದಾರೆ.

ಹೊಸನಗರ ತಾಲೂಕಿನ ಜಯನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ಹಾಗು ಸರಕಾರಿ ದಸ್ತಾವೇಜುಗಳ ನಕಲಿ ದಾಖಲೆ ಸೃಷ್ಠಿಸಿ ಮಾರುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಸೋಮವಾರ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದರು.

ಈ ವೇಳೆ ಆರೋಪಿಯ ಮನೆಯಲ್ಲಿ 48 ವಿವಿಧ ಸೀಲ್ ನೂರಾರು ನಕಲಿ ಹಕ್ಕುಪತ್ರಗಳು, ಹಕ್ಕುಪತ್ರ ಮುದ್ರಿಸುವ ಕಾಗದ, ನಕಲಿ ಸರಕಾರಿ ದಾಖಲೆಗಳು ಸೇರಿದಂತೆ ಹಲವು ದಾಖಲೆಗಳು ಪತ್ತೆಯಾಗಿವೆ. ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್, ಕರ್ಣಾಟಕ ಬ್ಯಾಂಕ್, ಉಪನೊಂದಣಾಧಿಕಾರಿಗಳ ಕಛೇರಿ, ತಹಸೀಲ್ದಾರ್, ತಾಲೂಕು ಕಛೇರಿ, ನ್ಯಾಯಾಲಯ, ವಿವಿಧ ಗ್ರಾಮ ಪಂಚಾಯಿತಿ ಕಛೇರಿಗಳ ನಕಲಿ ಮೊಹರು ಪತ್ತೆಯಾಗಿವೆ. ಅಲ್ಲದೇ ನಕಲಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ದಾಳಿ ಸಮಯದಲ್ಲಿ ಪಿಎಸ್‌ಐ ಶಂಕರಗೌಡ ಪಾಟೀಲ್ ಮತ್ತು ಸಿಬ್ಬಂದಿಗಳು  ಕಂದಾಯ ಇಲಾಖೆಯ ಶಿರಸ್ತೆದಾರ್ ಮಂಜುನಾಥ್, ಕಂದಾಯ ನಿರೀಕ್ಷಕ ಆಂಜನೇಯ, ಗ್ರಾಮ ಲೆಕ್ಕಾಧಿಕಾರಿ ರೇಣುಕಯ್ಯ, ಚಿರಾಗ್, ನಾಗಪ್ಪ, ಅಮ್ಜದ್ ಖಾನ್, ಶಿವಪ್ಪ ಅಶೋಕ ಇನ್ನೂ ಮುಂತಾದವರು ದಾಳಿಯಲ್ಲಿ ಭಾಗವಹಿಸಿದ್ದರು.

ಕಳೆದ ಹಲವು ದಿನಗಳಿಂದ ತಾಲೂಕಿನಲ್ಲಿ ನಕಲಿ ಹಕ್ಕುಪತ್ರಗಳು ಸೇರಿದಂತೆ ಕೆಲವು ದಸ್ತಾವೇಜುಗಳು ಹರಿದಾಡುತ್ತಿರುವ ಕುರಿತು ಆಗಾಗ್ಗೆ ಆರೋಪಗಳು ಕೇಳಿಬರುತ್ತಿತ್ತು. ನಕಲಿ ದಾಖಲೆಗಳನ್ನು ಸೃಷ್ಠಿಸಿ ಸಾರ್ವಜನಿಕರಿಂದ ಸಾವಿರಾರು ರೂ. ಹಣ ಪಡೆದು ನೈಜ ದಾಖಲೆ ಎಂದು ನಂಬಿಸಲಾಗುತ್ತಿತ್ತು ಎನ್ನಲಾಗಿದೆ. ಆರೋಪಿಯು ಅಮಾಯಕ ಜನರಿಂದ ಪ್ರತಿ ಹಕ್ಕುಪತ್ರಕ್ಕೆ 25 ಸಾವಿರ ರೂ. ಹಣ ಪಡೆಯುತ್ತಿದ್ದ ಎನ್ನಲಾಗಿದೆ. ಆರೋಪಿ ನಾಪತ್ತೆಯಾಗಿದ್ದು, ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

7 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

9 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

12 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

13 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

13 hours ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

13 hours ago