ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ದಾಳಿ – ಅಕ್ರಮ ಮದ್ಯ ವಶಕ್ಕೆ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಮರಸ ಗ್ರಾಮದಲ್ಲಿ ಅಂಗಡಿಯೊಂದರಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿ ಆಧರಿಸಿ, ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಬಕಾರಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ.ಮರಸ ಗ್ರಾಮದ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಂತ ಮಾಹಿತಿ ಆಧರಿಸಿ ಅಬಕಾರಿ ಇನ್ಸ್ ಪೆಕ್ಟರ್ ಸಂದೀಪ್ ಕುಮಾರ್ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ.
ಈ ದಾಳಿಯ ವೇಳೆಯಲ್ಲಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡಲು ಇರಿಸಲಾಗಿದ್ದಂತ 22 ಟೆಟ್ರಾ ಪ್ಯಾಕೇಟ್ ಅಂದರೆ 1.8 ಲೀಟರ್ ಮದ್ಯವನ್ನು ಸೀಜ್ ಮಾಡಿದ್ದಾರೆ.
ಈ ಸಂಬಂಧ ಅಂಗಡಿಯ ಮಾಲೀಕರನ್ನು ವಶಕ್ಕೆ ಪಡೆದು, ಆ ಬಳಿಕ ವಿಚಾರಣೆ ನಡೆಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಮರಸ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರಿಗೆ ಬಿಗ್ ಶಾಕ್ ಅನ್ನು ಸಾಗರ ತಾಲ್ಲೂಕಿನ ಅಬಕಾರಿ ಇನ್ಸ್ ಪೆಕ್ಟರ್ ಸಂದೀಪ್ ಕುಮಾರ್ ನೀಡಿದ್ದಾರೆ.
ಇಂದು ನಡೆದಂತ ಈ ದಾಳಿಯಲ್ಲಿ ಅಬಕಾರಿ ಕಾನ್ಸ್ ಸ್ಟೇಬಲ್ ಮುದಾಸೀರ್ ಅಹ್ಮದ್, ಪುಟ್ಟಪ್ಪ ಹಾಜರಿದ್ದರು.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…