RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ

ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಗಣೇಶ ಮೂರ್ತಿಯನ್ನು ಸಮಿತಿಯವರು ಶಿವಮೊಗ್ಗ ರಸ್ತೆಯ ವಿದ್ಯಾ ನಗರದಿಂದ ಮೆರವಣಿಗೆ ಮೂಲಕ ಕರೆತಂದು ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಿ ಮಹಾ ಮಂಗಳಾರತಿ ತೀರ್ಥಪ್ರಸಾದ ನೆರವೇರಿತು.

ವಿದ್ಯಾ ನಗರದಿಂದ ವಿನಾಯಕ ವೃತ್ತದವರೆಗೂ ಮೆರವಣಿಗೆ ಮೂಲಕ ಗಣೇಶ ಮೂರ್ತಿಯನ್ನು ಕರೆತಂದು ವಿನಾಯಕ ವೃತ್ತದಲ್ಲಿ ಹಿಂದೂ  ಭಗವಧ್ವಜಾರೋಹಣ ನೆರವೇರಿಸಿ ಗಣಪತಿ ದೇವಸ್ಥಾನದ ಹಿಂಭಾಗದ ಭೂಪಾಳಂ ಚಂದ್ರಶೇಖರಯ್ಯ ಸಭಾ ಭವನದ ತಿಲಕ ಮಂಟಪದಲ್ಲಿ ಪ್ರತಿಷ್ಟಾಪನಾ ಪೂಜೆ ನೆರವೇರಿಸಲಾಯಿತು.

ವಿನಾಯಕ ವೃತ್ತದಲ್ಲಿ ಹಿಂದೂ ಭಗವಾಧ್ವಜವನ್ನು ಟಿ ಆರ್ ಕೃಷ್ಣಪ್ಪ ಮತ್ತು ರಥೇಶ್ವರಪ್ಪ ಗೌಡರವರು ದ್ವಜಾರೋಹಣ ನೆರವೇರಿಸಿದರು.

ಈ ಸಂಧರ್ಭದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ ಮತ್ತು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟಸೇನಾ ಸಮಿತಿಯ ಎಂ.ಬಿ.ಮಂಜುನಾಥ, ಎಂ.ಸುರೇಶ್‌ಸಿಂಗ್, ದೇವಸ್ಥಾನ ಸಮಿತಿ ಅಧ್ಯಕ್ಷ ಈಶ್ವರಶೆಟ್ಟಿ, ಎನ್.ಸತೀಶ್, ಜಯಲಕ್ಷ್ಮಿ, ಸುಧೀಂದ್ರ ಪೂಜಾರಿ, ತೀರ್ಥೇಶ್‌ ಅಡಿಕಟ್ಟು, ಲಕ್ಷ್ಮಣ ಬಳ್ಳಾರಿ, ಶೈಲಾ ಆರ್.ಪ್ರಭು, ಶ್ರೀನಿವಾಸ್, ಆಟೋ ಲಕ್ಷ್ಮಣ, ಸುಧೀರ್ ಪಿ.ಕಗ್ಗಲಿ ಲಿಂಗಪ್ಪ, ಕೆ.ಗಣೇಶ್‌ಪ್ರಸಾದ್, ಮಾಲ್ಗೂಡಿ ಶೇಖರ್, ಹೆಚ್.ಎನ್.ಚೋಳರಾಜ್, ನಾಗರಾಜ ಪವಾರ್, ಈಶ್ವರ ಮಳಕೊಪ್ಪ, ಭೀಮರಾಜ್, ಹೆಚ್.ಎನ್.ಉಮೇಶ್, ಪ್ರಕಾಶ್‌ಶೆಟ್ಟಿ, ಎಸ್.ದಾನಪ್ಪ, ಯೋಗೀಶ್, ಶ್ರೀನಿವಾಸ್‌ಆಚಾರ್, ಹೆಚ್.ಎನ್.ಉಮೇಶ್, ಶ್ರೀಧರ, ಆರ್.ರಾಘವೇಂದ್ರ, ಮುರುಳಿಧರ ಕೆರೆಹಳ್ಳಿ, ರವೀಂದ್ರ ಕೆರೆಹಳ್ಳಿ, ವಾಸುಶೆಟ್ಟರು ಗವಟೂರು, ಕೆ.ಎ.ನಾರಾಯಣ ಬೇಕರಿ, ವೈ.ಜೆ.ಕೃಷ್ಣ, ಸಂತೋಷ, ಸುಹಾಸ್, ರಂಜನ್, ಚಿಪ್ಪಳ್ಳಿ ರಾಘವೇಂದ್ರ, ಡಿ.ಈ.ರವಿಭೂಷಣ, ಸಂದೀಪಶೆಟ್ಟಿ, ಮಂಜುನಾಥ ಆಚಾರ್, ಪ್ರಶಾಂತ್, ಮಂಜುನಾಥ, ಭಾಸ್ಕರ್‌ಶೆಟ್ಟಿ, ಚಂದ್ರ ಡ್ರೈವರ್ ಮಲ್ಲಾಪುರ ಇನ್ನಿತರರು, ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

13 hours ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

15 hours ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

15 hours ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

1 day ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

2 days ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

2 days ago