ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಉಂಬ್ಳೆಬೈಲು ರೇಂಜ್ ನ ಚೌಡಿಕಟ್ಟೆಯ ಬಳಿ ಕಡವೆ ಪ್ರಾಣಿಯನ್ನ ಶಿಕಾರಿ ಮಾಡಿದ ನಾಲ್ವರನ್ನ ಅರಣ್ಯ ಇಲಾಖೆಯವರು ಬಂಧಿಸಿ, ನ್ಯಾಯಾಂಗ ಬಂಧನಕೊಳಪಡಿಸಿದ್ದಾರೆ.
ವನ್ಯಜೀವಿ ಬೇಟೆಯಾಡಿದ ಪ್ರಕರಣದ ಅಡಿಯಲ್ಲಿ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ. ಎl) ಶಿವ ಬಿನ್ ರಾಜಪ್ಪ,(28), ಗೊಂದಿ ಗ್ರಾಮ ವಾಸಿ, ಹಿರಿಯೂರು ಅಂಚೆ, ಭದ್ರಾವತಿ ತಾಲ್ಲೂಕು ಎ2) ವೆಂಕಟೇಶ ಬಿನ್ ಮುನಿಯಪ್ಪ, (60), ಗೊಂದಿ ಗ್ರಾಮ ವಾಸಿ, ಹಿರಿಯೂರು ಅಂಚೆ, ಭದ್ರಾವತಿ ತಾಲ್ಲೂಕು ಎ3) ಮಂಜಪ್ಪ ಬಿನ್ ನಾಗಪ್ಪ, (45) ಚೌಡಿಕಟ್ಟೆ ಭೈರಾಪುರ ಗ್ರಾಮ ವಾಸಿ, ನರಸಿಂಹರಾಜ ಪುರ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ. ಎ4) ವಿನೋದ ಬಿನ್ ಮಂಜಪ್ಪ ಸಿ,( 19), ಚೌಡಿಕಟ್ಟೆ ಭೈರಾಪುರ ಗ್ರಾಮ ವಾಸಿ, ನರಸಿಂಹರಾಜ ಪುರ ತಾಲ್ಲೂಕು & ಚಿಕ್ಕಮಗಳೂರು ಜಿಲ್ಲೆ. ರವರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ಬೈಕ್ ನ್ನವಶಕ್ಕೆ ಪಡೆಯಲಾಗಿದೆ.
ನಾಲ್ವರನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಕಾರ್ಯಚರಣೆಯಲ್ಲಿ ಭದ್ರಾವತಿ ಡಿಸಿಎಫ್ ಆಶೀಶ್ ರೆಡ್ಡಿ, IFS ಹಾಗೂ ಚನ್ನಗಿರಿ ACF ರತ್ನಪ್ರಭ, ರವರ ಮಾರ್ಗದರ್ಶನದಲ್ಲಿ ಆರ್ ಎಫ್ ಒ ಗಿಡ್ಡಸ್ವಾಮಿ, DRFO ಪವನ್ , ಸಂಜು BF ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್