ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ – ಸುಮಂಗಳ ದೇವರಾಜ್
ಹುಂಚ : ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಇದರಿಂದ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹುಂಚ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಹೇಳಿದರು.
ಸ್ವಚ್ಚತೆಯೆಡೆಗೆ ದಿಟ್ಟ ಹೆಜ್ಜೆ ಎಂಬ ಧ್ಯೇಯ ವಾಕ್ಯದಡಿ ಹುಂಚಾ ಗ್ರಾಪಂ ವತಿಯಿಂದ ಹೊಂಬುಜ ಜೈನ ಮಠ , ಪದ್ಮಾಂಬಾ ಪ್ರೌಡ ಶಾಲೆ ಬಳಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಪ್ರತಿಯೊಬ್ಬರು ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಇಡೀ ನಗರ ಸ್ವಚ್ಛವಾಗುತ್ತದೆ. ಈ ಮೂಲಕ ಇಡೀ ಜಿಲ್ಲೆಯನ್ನು ಸ್ವಚ್ಛವಾಗಿಟ್ಟುಕೊಳ್ಳಲು ಸಾಧ್ಯವಾಗಲಿದೆ ಎಂದರು.
ವಿದ್ಯಾರ್ಥಿಗಳು ತಾವು ಬಳಸುವ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯಬಾರದು. ತಮ್ಮ ಮನೆ, ಶಾಲೆಯ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಇದು ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗಿರದೇ ಇದನ್ನು ದಿನನಿತ್ಯ ಹಾಗೂ ನಿರಂತರವಾಗಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂಧರ್ಭದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಕುಮಾರ್ , ತಾಪಂ NREG ರಾಜೇಂದ್ರ , ಅಧಿಕಾರಿ ಗ್ರಾಪಂ ಸದಸ್ಯರಾದ ದೇವೇಂದ್ರ ಹುಂಚ , ಪಿಡಿಓ ರಮೇಶ್ ,ಸ್ವಸಹಾಯ ಸಂಘದ ಸದಸ್ಯರು , ಗ್ರಾಪಂ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಇದ್ದರು.ಗ್ರಾಪಂ
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…