ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದ ಜಾಮೀಯಾ ಮಸೀದಿ ಆವರಣದಲ್ಲಿ ಈದ್ ಮಿಲಾದ್ ಸಮಿತಿ ಹಾಗೂ ರಿಪ್ಪನ್ಪೇಟೆ ರೋಟರಿ ಕ್ಲಬ್ ಸಹಯೋಗದಲ್ಲಿ ಈದ್ ಮಿಲಾದ್ ಪ್ರಯುಕ್ತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಮಾತನಾಡಿ, ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸಬಹುದು.ರಕ್ತಕ್ಕೆ ಪರ್ಯಾಯ ಯಾವುದೇ ವಸ್ತು ಇಲ್ಲ. ರಕ್ತದಾನ ಮಾಡುವುದರಿಂದ ಮೂವರಿಗೆ ಜೀವದಾನ ಮಾಡಿದಂತಾಗುತ್ತದೆ. ಇದರಿಂದ ರಕ್ತದಾನಿಗಳ ಆರೋಗ್ಯವೂ ಸುಧಾರಿಸುತ್ತದೆ ಹಾಗಾಗಿ ಆರೋಗ್ಯವಂತ ಎಲ್ಲರೂ ನಿಯಮಿತವಾಗಿ ರಕ್ತದಾನ ಮಾಡಿ ಎಂದು ಹೇಳಿದರು.
ಪ್ರಸ್ತುತ ದಿನಮಾನದಲ್ಲಿ ಸಮಾಜದಲ್ಲಿ ಅಶಾಂತಿ ಮೂಡಿದ್ದು ಯುವ ಪೀಳಿಗೆ ದ್ವೇಷ ಸಮಾಜದತ್ತ ವಾಲುತಿದ್ದು ಯುವಕರನ್ನು ಹೆಚ್ಚು ಹೆಚ್ಚಾಗಿ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸುವುದರಿಂದ ಒಂದು ಸುಂದರವಾದ ಸೌಹಾರ್ದ ಸಮಾಜ ಕಟ್ಟಲು ಸಾಧ್ಯವಾಗುತ್ತದೆ ಎಂದರು.
ರೋಟರಿ ಕ್ಲಬ್ ಅಧ್ಯಕ್ಷ ರಾಮಚಂದ್ರ ಮಾತನಾಡಿ ಆರೋಗ್ಯವಂತರು 60 ವರ್ಷಗಳ ತನಕ ರಕ್ತದಾನ ಮಾಡಬಹುದು. ರಕ್ತದಾನದಿಂದ ಆರೋಗ್ಯ ಉತ್ತಮವಾಗಿರುತ್ತದೆ. ಅನೇಕ ರೋಗಗಳಿಂದಲೂ ಮುಕ್ತವಾಗಬಹುದು. ದೇಹದಲ್ಲಿ ಹೊಸ ರಕ್ತ ಉತ್ಪಾದನೆಯಾಗಲಿದೆ ಎಂದು ಹೇಳಿದರು.
ಇದೇ ಸಂಧರ್ಭದಲ್ಲಿ ರಿಪ್ಪನ್ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ರವರನ್ನು ಈದ್ ಮಿಲಾದ್ ಸಮಿತಿ ಕೆಂಚನಾಲ ಹಾಗೂ ರಿಪ್ಪನ್ಪೇಟೆ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂಧರ್ಭದಲ್ಲಿ ಜಾಮೀಯಾ ಮಸೀದಿ ಅಧ್ಯಕ್ಷರಾದ ಅಬ್ದುಲ್ ಘನಿಸಾಬ್ , ರೋಟರಿ ಸಂಸ್ಥೆಯ ಕಾರ್ಯದರ್ಶಿ ಸಬಾಸ್ಟಿಯನ್ ಮ್ಯಾಥ್ಯೂಸ್ ,ಗ್ರಾಪಂ ಸದಸ್ಯ ಮಹಮ್ಮದ್ ಷರೀಫ್ ಸಾಬ್ , ಪದಾಧಿಕಾರಿಗಳಾದ ರಾಧಾಕೃಷ್ಣ , ರಾಮಚಂದ್ರ , ಡಾಕಪ್ಪ ,ಈದ್ ಮಿಲಾದ್ ಸಮಿತಿ ಅಧ್ಯಕ್ಷ ಸಲೀಂ , ಮುಖಂಡರಾದ ವಜೀರ್ ಸಾಬ್ ,ಖಲೀಲ್ ಷರೀಫ್, ಅಕ್ಬರ್ ,ದೂದ್ ಪೀರ್ , ತಬ್ರೇಜ್ ಹಾಗೂ ಇನ್ನಿತರರಿದ್ದರು.
ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…