HOSANAGARA | ಮಾಣಿ ಡ್ಯಾಂ – ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರಿನ ಮಾಣಿ ಜಲಾಶಯದ ನೀರಿನ ಮಟ್ಟ ಏರುತ್ತಿದ್ದು ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇದ್ದು ಸುರಕ್ಷತೆ ದೃಷ್ಟಿಯಿಂದ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ.
ಯಡೂರಿನ ಮಾಣಿಯಲ್ಲಿರುವ 594.36 ಮೀ ಗರಿಷ್ಠ ಮಟ್ಟದ ಜಲಾಶಯದಲ್ಲಿ ನೀರಿನ ಮಟ್ಟ ಗುರುವಾರ(ಸೆ 12) ಬೆಳಗ್ಗೆ ತನಕ 591.90 ಮೀ ತಲುಪಿದೆ.2642 ಕ್ಯೂಸೆಕ್ಸ್ ಒಳಹರಿವು ಇದೆ. ಮಳೆ ಮುಂದುರೆದಿದ್ದು ನೀರಿನ ಹರಿವು ಕೂಡ ಇದೇ ರೀತಿ ಮುಂದುವರೆದಲ್ಲಿ ಮಾಣಿ ಜಲಾಶಯದಿಂದ ನೀರನ್ನು ಹೊರಬಿಡಲಾಗುವುದು ಎಂದು ನೊಟೀಸ್ ನಲ್ಲಿ ತಿಳಿಸಲಾಗಿದೆ.
ಅಣೆಕಟ್ಟಿನ ಕೆಳದಂಡೆಯಲ್ಲಿ, ವಾರಾಹಿ, ಹಾಲಾಡಿ ನದಿ ಪಾತ್ರದ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರು ವಗೈರೆ ಜೊತೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ಕರ್ನಾಟಕ ವಿದ್ಯುತ್ ನಿಗಮದ ಮಾಸ್ತಿಕಟ್ಟೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ಕಾಮಗಾರಿ) ಸೂಚಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…