RIPPONPETE | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ
ರಿಪ್ಪನ್ಪೇಟೆ : ಕಾಡಾನೆಗಳ ದಾಳಿಯಿಂದ ಅನ್ನದಾತರು ಕಂಗೆಟಿದ್ದು,ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಜನತೆ ಬೇಸತ್ತಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು ಲಕ್ಷಾಂತರ ರೂ ಬೆಳೆ ನಾಶವಾಗಿದೆ.
ಹೊರಬೈಲು, ಮತ್ತಿಕೊಪ್ಪಪ, ಗಾಮನಗದ್ದೆಯಲ್ಲಿ ಕಳೆದ ಅನೇಕ ದಿನಗಳಿಂದ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದೆ. ಶುಂಠಿ ಏರಿ ಮೇಲೆ ನಿರಂತರವಾಗಿ ಓಡಾಡುವುದರಿಂದ ಶುಂಠಿ ಏರಿ ಒಡೆದು ಬೆಳೆ ಹಾನಿಯಾಗಿದೆ. ಸಣ್ಣ ಸಣ್ಣ ಅಡಿಕೆ ಗಿಡಗಳನ್ನು ಮುರಿದು ಹಾಕುವುದಲ್ಲದೆ, ಸಣ್ಣ ಮರಗಳಿಗೆ ಮೈ ಉಜ್ಜಿಕೊಳ್ಳುವುದರಿಂದ ಮರಗಳು ಮುರಿದು ನಷ್ಟವಾಗುತ್ತಿದೆ.
ಪ್ರತಿನಿತ್ಯವೂ ಜಮೀನಿಗೆ ನುಗ್ಗಿ ದಾಂಧಲೆ ಮಾಡುತ್ತಿದ್ದು, ಸಂಜೆಯಾಗುತ್ತಿದ್ದಂತೆ ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕುವಂತಾಗಿದೆ. ಡೈರಿಗೆ ಹಾಲು ಹಾಕುವವರು, ದಿನನಿತ್ಯದ ಕೆಲಸ ಕಾರ್ಯಗಳಿಗೆ ಪಟ್ಟಣಗಳಿಗೆ ಹೋಗಿ ಬರುವವರು, ಶಾಲಾ ಮಕ್ಕಳು ಆತಂಕದಲ್ಲಿಯೇ ಸಂಚರಿಸುವಂತಾಗಿದೆ. ಗದ್ದೆ ಹೊಲಗಳಲ್ಲಿ ಕೆಲಸ ಮಾಡಲು ಹೆದರುವ ಸ್ಥಿತಿ ನಿರ್ಮಾಣವಾಗಿದೆ.
ಸಿರಿಗೆರೆ ವಲಯ ಅರಣ್ಯಾಧಿಕಾರಿ ಕಚೇರಿ ಸಿಬ್ಬಂದಿಗಳ ಗಮನಕ್ಕೆ ತಂದಿದ್ದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ.ನಿರಂತರವಾಗಿ ಹಾನಿ ಮಾಡುತ್ತಿರುವ ಆನೆ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಮೂಲಗಳ ಪ್ರಕಾರ ಸೆ.29 ರ ಭಾನುವಾರ ಬೆಳ್ಳೂರು ಗ್ರಾಮದಲ್ಲಿರುವ ಐಬಿ ಯಲ್ಲಿ ರೈತರ ಸಭೆಯನ್ನು ಕರೆಯಲಾಗಿದ್ದು ಅರಣ್ಯಾಧಿಕಾರಿಗಳ ವಿರುದ್ದ ರೈತರು ರಸ್ತೆಗಿಳಿದು ಪ್ರತಿಭಟಿಸುವ ಲಕ್ಷಣಗಳು ಗೋಚರಿಸುತ್ತಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…