ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ

ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕ್ರೂರವಾಗಿ ಹಲ್ಲೆಗೀಡಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯವಾಗಿದ್ದು, ಇಂದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿವೆ.

ಆರೋಪಿಗಳ ಮೊಬೈಲ್ ನಿಂದ ರಿಟ್ರೀವ್ ಮಾಡಿದಾಗ ಫೋಟೋಗಳು ಸಿಕ್ಕಿದ್ದು, ಅದರಲ್ಲಿ ರೇಣುಕಾಸ್ವಾಮಿ ಕೈಮುಗಿದು ಕಣ್ಣೀರು ಸುರಿಸಿ ಅಂಗಲಾಚುತ್ತಿರುವ ಫೋಟೋ ಮತ್ತು ಆರೋಪಿಗಳಿಂದ ಹಲ್ಲೆಗೀಡಾಗಿ ಜೀವ ಬಿಡುವ ಹೊತ್ತಿನಲ್ಲಿ ಅನಾಥವಾಗಿ ಬಿದ್ದಿರುವ ಫೋಟೋಗಳು ಪೊಲೀಸರಿಗೆ ಸಿಕ್ಕಿದೆ.ಪಟ್ಟಣಗೆರೆ ಶೆಡ್ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೋ ಇದಾಗಿದೆ.

ಕೊಲೆಯಾದ ರೇಣುಕಾಸ್ವಾಮಿ ಫೋಟೋಗಳನ್ನು ಪ್ರಕರಣದಲ್ಲಿ A10 ಆರೋಪಿಯಾಗಿರುವ ವಿನಯ್ ಮೊಬೈಲ್ನಲ್ಲಿ ಸೆರೆಹಿಡಿದಿದ್ದನು. ಫೋಟೋ ಕ್ಲಿಕ್ಕಿಸಿ ಬಳಿಕ ಸ್ಮಾರ್ಟ್ಫೋನ್ನಿಂದ ಡಿಲೀಟ್ ಮಾಡಿದ್ದನು. ಆದರೆ ವಿಧಿ ವಿಜ್ಞಾನ ತಂಡ(FSL) ಟೀಂ ಡಿಲೀಟ್ ಆದ ಫೋಟೋಗಳನ್ನ ರಿಟ್ರೀವ್ ಮಾಡಿದೆ. ವಿನಯ್ ಫೋನ್ನಲ್ಲಿದ್ದ 10ಕ್ಕೂ ಹೆಚ್ಚು ಫೋಟೋಗಳನ್ನು ರಿಟ್ರೀವ್ ಮಾಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾಗೌಡ ಸೇರಿ 17 ಮಂದಿ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ 3,991 ಪುಟಗಳ ಆರೋಪ ಪಟ್ಟಿಯನ್ನು ನಿನ್ನೆ ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರು ಸಲ್ಲಿಸಿದ್ದಾರೆ.

ರೇಣುಕಾ ಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶಗಳನ್ನು, ಫೋಟೋಗಳನ್ನು ಕಳೆದ ಕೆಲ ತಿಂಗಳಿನಿಂದ ಕಳುಹಿಸಿದ್ದರು. ಈ ಕಾರಣಕ್ಕೆ ದರ್ಶನ್ ಸಿಟ್ಟಾಗಿ ಅವರ ನಿರ್ದೇಶನದಂತೆ ರೇಣುಕಾಸ್ವಾಮಿಯನ್ನು ಪುಸಲಾಯಿಸಿ ಚಿತ್ರದುರ್ಗದಿಂದ ಬೆಂಗಳೂರಿನ ಪಟ್ಟಣಗೆರೆ ಶೆಡ್ ಗೆ ಕರೆತಂದು ಕ್ರೂರವಾಗಿ ಹಿಂಸೆ ನೀಡಿ ಹತ್ಯೆ ಮಾಡಿದ್ದಾರೆ ಎಂಬ ಆರೋಪವಿದೆ.

ಸ್ಪೆಷಲ್ ಕೋರ್ಟ್ ಅಥವಾ ಪಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆಗೆ ಪ್ರಯತ್ನ: ದೋಷಾರೋಪಣ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆಯಾದ ಬೆನ್ನಲ್ಲೇ ಈ ಪ್ರಕರಣದ ತ್ವರಿತ ವಿಚಾರಣೆಗೆ ಪೊಲೀಸರು ಪ್ರತ್ಯೇಕ ಕೋರ್ಟ್ ರಚಿಸಲು, ಸ್ಪೆಷಲ್ ಕೋರ್ಟ್ ಅಥವಾ ಪಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆಗೆ ಪ್ರಯತ್ನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

13 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

13 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

13 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

16 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

19 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

20 hours ago