ಅಕ್ರಮವಾಗಿ ಸಾಗಿಸುತಿದ್ದ 37 ಗೋವುಗಳ ರಕ್ಷಣೆ
ಶಿಕಾರಿಪುರ ತಾಲೂಕು ಶಿರಾಳಕೊಪ್ಪದಿಂದ ಮಂಗಳೂರಿನ ಬಿ.ಸಿ ರಸ್ತೆಗೆ ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ 407 ಐಷರ್ ವಾಹನವನ್ನ ಬಜರಂಗದಳ ಯುವಕರು ತಡೆದು ಜಯನಗರ ಪೊಲೀಸ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ವಾಹನವನ್ನ ಉಷ ನರ್ಸಿಂಗ್ ಹೋಮ್ ವೃತ್ತದ ಬಳಿ ಹಿಂದೂ ಸಂಘಟನೆಗಳು ತಡೆದಿದ್ದಾರೆ. ನಂತರ 112 ಪೊಲೀಸರಿಗೆ ಕರೆಯಲಾಗಿದೆ. 407 ಐಷರ್ ವಾಹನದಲ್ಲಿ ಟಾರ್ಪಲ್ ಮುಚ್ಚಿ ಸಾಗಿಸಲಾಗುತ್ತಿತ್ತು. ಟಾರ್ಪಲ್ ಸಮೇತ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನ ತಂದು ನಿಲ್ಲಿಸಲಾಗಿದೆ.
ಟಾರ್ಪಲ್ ಬಿಚ್ಚಿ ನೋಡಿದಾಗ ಹೋರಿ ಕರ ಎತ್ತುಗಳನ್ನ ಹಿಂಸಾತ್ಮಕವಾಗಿ ಕಟ್ಟಿಹಾಕಿ ಸಾಗಿಸುವ ಪ್ರಯತ್ನ ನಡೆದಿದೆ. ಠಾಣೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
ಜಯನಗರ ಪೊಲೀಸ್ ಠಾಣೆಯ ಎದುರು ವ್ಯಕ್ತಿಯೊಬ್ಬ ಓಡಲು ಯತ್ನಿಸಿ ಹೈಡ್ರಾಮ ಮಾಡಿದ್ದಾನೆ. ವಾಹನದ ಒಳಗಡೆ ಕುಳಿತಿದ್ದ ವ್ಯಕ್ತಿಯು ತಪ್ಪಿಸಿಕೊಳ್ಳಲು ಯತ್ನಿಸಿದ್ದು ನಂತರ ಪೊಲೀಸರು ಆತನನ್ನ ಠಾಣೆಯ ಒಳಗೆ ಕೂರಿಸಿಕೊಂಡಿದ್ದಾರೆ. ಈತನೆ ಹಸುಗಳನ್ನ ಸಾಗಿಸುವ ಮಿಡ್ಲುಮ್ಯಾನ್ ಎಂದು ಹಿಂದೂ ಸಂಘಟನೆ ಆರೋಪಿಸಿದೆ. 37 ಹಸುಗಳನ್ನ ಕ್ಯಾಂಟರ್ ನಲ್ಲಿ ಸಾಗಿಸುವ ಯತ್ನ ನಡೆದಿದ್ದು ಅವುಗಳನ್ನ ಮಹಾವೀರ ಗೋಶಾಲೆಗೆ ಬಿಡಲಾಗಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…