ರಿಪ್ಪನ್ಪೇಟೆಯ ಇತಿಹಾಸ ಪ್ರಸಿದ್ದ ಗಣೇಶೋತ್ಸವ ಸಂಭ್ರಮ – 11 ದಿನ ಏನೆಲ್ಲಾ ಕಾರ್ಯಕ್ರಮಗಳಿರುತ್ತವೆ ಗೊತ್ತಾ..!!? ಈ ಸುದ್ದಿ ನೋಡಿ
ರಿಪ್ಪನ್ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟಸೇನಾ ಸಮಿತಿಯ 57 ನೇ ವರ್ಷದ 11 ದಿನಗಳ ಶ್ರೀವರಸಿದ್ದಿವಿನಾಯಕ ಸ್ವಾಮಿಯ ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ , ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರೀಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದ ತಿಲಕ್ ಮಹಾಮಂಟಪದ ಭೂಪಾಳಂ ಚಂದ್ರಶೇಖರಯ್ಯ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ರಾಮಚಂದ್ರ ಬಳೆಗಾರ್ ಮತ್ತು ಪ್ರಧಾನ ಕಾರ್ಯದರ್ಶಿ ಲಕ್ಷಣ ಬಳ್ಳಾರಿ ವಿವರಿಸಿದರು.
ಏನೇನು ಕಾರ್ಯಕ್ರಮಗಳಿರುತ್ತೇ..!??
- ಸೆ.08 ರ ಭಾನುವಾರ ರಾತ್ರಿ 8.30 ಕ್ಕೆ `ಸಂತೃಪ್ತಿ’ ಆಂಧಕಲಾವಿದರ ತಂಡ ಇವರಿಂದ ರಸಮಂಜರಿ ಕಾರ್ಯಕ್ರಮ.
- ಸೆ.09 ರಂದು ಸೋಮವಾರ ರಾತ್ರಿ 8.30 ಗಂಟೆಗೆ ಯಕ್ಷಸಮೂಹ ಯಕ್ಷಗಾನಕಲಾ ಪ್ರತಿಷ್ಠಾನ ನೀಲಾವರ ಇವರಿಂದ ಯಕ್ಷಗಾನ ಪ್ರದರ್ಶನ,
- ಸೆ.10 ರಂದು ಮಂಗಳವಾರ ರಾತ್ರಿ 8.30 ಶ್ರೀಶಾರದಾ ರಾಮಕೃಷ್ಣ ವಿದ್ಯಾಲಯ ಹಾಗೂ ಶ್ರೀ ಬಸವೇಶ್ವರ ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮ,
- ಸೆ.11 ರಂದು ಬುದವಾರ ರಾತ್ರಿ 8.30 ಕ್ಕೆ ಗವಟೂರು ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಂದ ಮನರಂಜನಾ ಕಾರ್ಯಕ್ರಮ
- ಸೆ.12 ರಂದು ರಾತ್ರಿ 8.30 ಕ್ಕೆ ಹೆಸರಾಂತ ಜಾನಪದ ಆಯ್ದ ಅಹ್ವಾನಿತ ತಂಡಗಳಿಂದ `ಬಳೆಕೋಲಾಟ’ಸ್ಪರ್ದೆ ಹಾಗೂ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾದಲ್ಲಿನ ಸೇವೆಯನ್ನು ಪರಿಗಣಿಸಿ ಅರ್ಚಕರಾದ ರವಿ ಭಟ್ಟರು ಹಾಗೂ ವಿನಾಯಕ ಸೌಂಡ್ಸ್ ನ ದಾನಪ್ಪ ರವರಿಗೆ ಅಭಿನಂದನಾ ಕಾರ್ಯಕ್ರಮ
- ಸೆ .13 ರ ರಾತ್ರಿ 08.30 ಕ್ಕೆ ಕಲಾ ಸ್ಪೂರ್ತಿ ಹವ್ಯಾಸಿ ನಾಟಕ ತಂಡದವರಿಂದ ‘ಮನೆ ಒಕ್ಲ್’ ಎಂಬ ಹಾಸ್ಯಮಯ ನಾಟಕ ಪ್ರದರ್ಶನ
- ಸೆ 14 ರ ರಾತ್ರಿ 08.30 ಕ್ಕೆ ಹಂಸವೇಣಿ ಶಿಕ್ಷಕ ವೃಂದ ಬಟ್ಟೆಮಲ್ಲಪ್ಪ ಇವರಿಂದ ಕರೋಕೆ ಸಾಂಗ್ ಮತ್ತು ಮನೋರಂಜನಾ ಕಾರ್ಯಕ್ರಮ
- ಸೆ.15 ರ ರಾತ್ರಿ 08.30 ಕ್ಕೆ ಅರೆಹೊಳೆ ಪ್ರತಿಷ್ಠಾನ ನಂದಗೋಕುಲ ಕಲಾವಿದರು ಮಂಗಳೂರು ಇವರಿಂದ ನೃತ್ಯ ವೈಭವ ಕಾರ್ಯಕ್ರಮ
- ಸೆ.16 ರಾತ್ರಿ 08.30 ಕ್ಕೆ ರಿಪ್ಪನ್ಪೇಟೆ ಕೊಪ್ಪ ಹೊಸನಗರ ವಿದ್ಯಾರ್ಥಿಗಳಿಂದ `ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್’’ ಇವರಿಂದ ನೃತ್ಯ ರೂಪಕ,
- ಸೆ.17 ರಂದು ಮದ್ಯಾಹ್ನ 12.30 ಕ್ಕೆ ಶ್ರೀ ಸ್ವಾಮಿಯ ವಿಸರ್ಜನಾ ಪೂಜೆ ನಂತರ ಸಂಜೆ 03 ಗಂಟೆಗೆ ಶ್ರೀ ಸ್ವಾಮಿಯ ವಿಸರ್ಜನಾ ಮೆರವಣಿಗೆ ಪ್ರಾರಂಭಗೊಳ್ಳುತ್ತದೆ.
ಈ ರಾಜಬೀದಿ ಉತ್ಸವದಲ್ಲಿ ವಿಶೇಷ ವಾದ್ಯ ಡೋಳ್ಳುಕುಣಿತ ತಮಟೆ ಬಡಿತ ವಿವಿಧ ಗ್ರಾಮಗಳ ಜಾನಪದ ತಂಡದವರ ಭಜನೆ ಈ ವರ್ಷದ ವಿಶೇಷ ಅಕರ್ಷಣೆ ಭದ್ರಾವತಿ ಅರಕೆರೆ ವೀರಗಾಸೆ ಶಿಗ್ಗಾಂವ್ ಜಾಂಜಾ ಪಥಾಕ್, ಕೀಲುಕುದುರೆ,ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರ ಕಲಾ ಪ್ರದರ್ಶನಗೊಳ್ಳಲಿದೆ.ಇದರೊಂದಿಗೆ ರಾತ್ರಿ 10-30 ರಿಂದ ವಿನಾಯಕ ವೃತ್ತದಲ್ಲಿ ಎನ್ ಆರ್ ಪುರದ ಅಭಿನವ ಮ್ಯೂಸಿಕಲ್ ಇವೆಂಟ್ಸ್ ತಂಡದವರಿಂದ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಸಕಲ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ದರ್ಶನಾಶೀರ್ವಾದ ಪಡೆಯುವಂತೆ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್