ಸ್ವರ್ಣ ಗೌರಿ ಹಬ್ಬದ ಸಂಭ್ರಮ
ಇಂದು ದೇಶದೆಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ನಡೆಯುತ್ತಿದೆ. ಅದರಂತೆ ಇಂದು ಗೌರಿಯನ್ನು ದೇವಾಲಯಗಳಲ್ಲಿ, ಮನೆ-ಮನೆಗಳಲ್ಲಿ ಪ್ರತಿಷ್ಟಾಪಿಸಿ, ಅತ್ಯಂತ ಸಡಗರ ಸಂಭ್ರಮದಿಂದ ಪೂಜಿಸಲಾಗುತ್ತಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ಮನೆ ಮಂದಿಯಲ್ಲಾ ಇಂದು ಗೌರಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.
ರಿಪ್ಪನ್ ಪೇಟೆ ಬ್ರಾಹ್ಮಣ ಸಂಘದ ಶ್ರೀರಾಮ ಸಭಾಭವನದಲ್ಲಿ ಕೊಡೂರು ವಿಜಯೇಂದ್ರ ಭಟ್ ಇವರ ನೇತೃತ್ವದಲ್ಲಿ ಶ್ರೀ ಸ್ವರ್ಣ ಗೌರಿ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂಧರ್ಭದಲ್ಲಿ ಪದ್ಮ ಸುರೇಶ್ , ಅಮಿತಾ ಬಲ್ಲಾಳ್ , ಸೌಮ್ಯ ಅರುಣ್ ಕುಮಾರ್, ಸರಸ್ವತಿ ಪ್ರೇಮ್ ಚಂದ್ರ, ಅಶ್ವಿನಿ ರವಿಶಂಕರ್, ಉಮಾ ಪ್ರಸನ್ನ, ಅಂಜಲಿ ಪವನ್ ಕುಮಾರ್, ಹಾಗೂ ಇನ್ನು ಮುಂತಾದವರು ಇದ್ದರು.
ಶಿವಮೊಗ್ಗ ಜಿಲ್ಲಾದ್ಯಂತ ಇಂದು ಸ್ವರ್ಣ ಗೌರಿಯನ್ನು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಲಾಯಿತು. ಹೇಗಿತ್ತು ಸ್ವರ್ಣಗೌರಿ ಹಬ್ಬ…..? ನೋಡೋಣ ಬನ್ನಿ
ವಿಘ್ನ ನಿವಾರಕ ಗಣಪನ ಹಬ್ಬದ ಮುನ್ನ ದಿನ, ತಾಯಿ ಗೌರಿ ಹಬ್ಬವನ್ನು, ಸಂಪ್ರದಾಯವಾಗಿ ದೇಶದೆಲ್ಲೆಡೆ ಆಚರಿಸಲಾಗುತ್ತದೆ. ತವರಿನೊಂದಿಗಿನ ಅವಿನಾಭಾವ ಸಂಬಂಧದ ಸಂಕೇತವಾಗಿರುವ ಗೌರಿ ಹಬ್ಬ ಬಂತೆಂದರೆ ಹೆಣ್ಣು ಮಕ್ಕಳಿಗೆ ಸಂಭ್ರಮ. ಮದುವೆಯಾಗಿರಲಿ, ಆಗಿರದೆ ಇರಲಿ, ಹೆಣ್ಣು ಮಕ್ಕಳಿಗೆ ಗೌರಿ ಹಬ್ಬದಲ್ಲಿ ಹೆತ್ತವರು ಅಥವಾ ಸೋದರ ಸಂಬಂಧಿಗಳು ಉಡುಗೊರೆ ನೀಡಿ ನೂರ್ಕಾಲ ಬಾಳೆಂದು ಹಾರೈಸುವುದು ರೂಢಿ. ಹೇಳಿ ಕೇಳಿ ಇದು ಮಹಿಳೆಯರದೇ ಹಬ್ಬವಾಗಿರೋದ್ರಿಂದ, ಮಹಿಳೆಯರೇ, ಗೌರಿಯನ್ನು ಪೂಜಿಸಿ, ಆರತಿ ಬೆಳಗಿ, ನಮಸ್ಕರಿಸುತ್ತಾರೆ.
ವಿಶೇಷ ಪೂಜಾ ಸಾಮಾಗ್ರಿಗಳೊಂದಿಗೆ ಅಣಿಯಾದ ಮಹಿಳೆಯರು, ಗೌರಿಗೆ ಆರತಿ ಬೆಳಗಿ, ತಾಯಿ, ನಮ್ಮನ್ನು ರಕ್ಷಿಸು, ಹರಸು ಎಂದು ಆರತಿ ಬೆಳಗಿ, ಭಕ್ತಿಯ ಹಾಡುಗಳನ್ನು ಹಾಡುತ್ತಾ, ಪೂಜೆ ಸಲ್ಲಿಸುತ್ತಾರೆ. ಅದರಂತೆ, ಇಂದು ನಗರದ ವಿವಿಧ ದೇವಾಲಯದಲ್ಲಿಯೂ ಕೂಡ ಸ್ವರ್ಣ ಗೌರಿಯನ್ನು, ವಿಶೇಷ ಅಲಂಕಾರಗಳಿಂದ ಪ್ರತಿಷ್ಟಾಪಿಸಿ, ಹೂಗಳಿಂದ ಅಲಂಕರಿಸಿ, ಪೂಜಿಸಲಾಯಿತು. ಕೊರೋನಾ ಸೋಂಕು ಭೀತಿ ಬಳಿಕ ಕಳೆದೆರೆಡು ವರ್ಷಗಳ ಬಳಿಕ ಇಂದು ಸ್ವರ್ಣಗೌರಿ ಹಬ್ಬವನ್ನು ಅತ್ಯಂತ ವೈಭವದಿಂದ, ಬಾಗಿನ ಅರ್ಪಿಸಿ ಪೂಜೆ ನೆರವೇರಿಸಲಾಯಿತು.
ತನ್ನನ್ನು ನಂಬಿದ ಭಕ್ತರ ಇಷ್ಟಾರ್ಥಗಳನ್ನು, ಈಡೇರಿಸುವ ಗಣಪ ಭೂಲೋಕಕ್ಕೆ ಇಳಿದು ಬರುತ್ತಿದ್ದಾನೆ. ವಿಘ್ನನಾಶಕನ ಬರುವಿಕೆಗೆ ಒಂದು ದಿವಸ ಮುಂಚೆಯೇ ಅವನ ಹೆಮ್ಮೆಯ ಅಮ್ಮ, ಸ್ವರ್ಣಗೌರೀಯೂ ಧರೆಗೆ ಬಂದಿಳಿದಿದ್ದಾಳೆ. ಹೀಗಾಗಿ ನಗರದ ವಿವಿಧ ದೇವಾಲಯದಲ್ಲಿ, ಸುಮಂಗಲಿಯರು ಉಡಿ ತುಂಬಿ ಸಂಭ್ರಮಿಸಿದರು. ಕಳೆದ 75 ವರ್ಷಗಳಿಂದ ಇಲ್ಲಿ ಗೌರಿಯನ್ನು ಇಲ್ಲಿ ಪ್ರತಿಷ್ಠಾಪಿಸಲಾಗುತ್ತಿದ್ದು, ವಿಶೇಷವಾಗಿ ಇಲ್ಲಿ ಮಹಿಳೆಯರೇ ಗೌರಿಯನ್ನು ಪೂಜಿಸಿ, ಬಾಗಿನ ಅರ್ಪಿಸಿ ಪೂಜೆ ಸಲ್ಲಿಸುವುದು ವಾಡಿಕೆ. ಅದರಂತೆ, ಇಂದು ಗೌರಿಯನ್ನು ಪೂಜಿಸಲು ಮಹಿಳೆಯರು ದೇವಾಲಯದಲ್ಲಿ ಸಾಲಾಗಿ ನಿಂತು ಭಕ್ತಿಯಿಂದ ಪೂಜೆ ಸಲ್ಲಿಸುತ್ತಿದ್ದು, ಕಂಡು ಬಂದಿದೆ. ಬಾಗಿನ, ವಿಶೇಷ ಪೂಜಾ ಸಾಮಾಗ್ರಿಗಳೊಂದಿಗೆ ಆಗಮಿಸಿದ್ದ ಮಹಿಳೆಯರು, ದೇವಾಲಯದಲ್ಲಿ ತಮ್ಮ ಸಂಭಂದಿಕರಿಗೆ ಬಾಗಿನ ನೀಡಿ, ಉಡಿ ತುಂಬಲಾಗಿದೆ.
ಒಟ್ಟಿನಲ್ಲಿ, ಇಂದು, ನಗರದಲ್ಲಿ, ಮನೆ ಮನೆಗಳಲ್ಲಿ, ದೇವಾಲಯಗಳಲ್ಲಿ, ಸಡಗರ ಮತ್ತು ಸಂಭ್ರಮದಿಂದ ಗೌರಿ ಹಬ್ಬವನ್ನು ಆಚರಿಸಲಾಯಿತು. ಜಗತ್ತಿನ ಎಲ್ಲಾ ಅಡ್ಡಿ ಆತಂಕಗಳನ್ನು ಅದರಲ್ಲೂ, ಈ ಬಾರಿಯ ರೋಗ ರುಜ್ಜೀನಗಳ ಕಾಟ ನಿವಾರಿಸಿ, ಕೆಲಸ ಕಾರ್ಯಗಳೆಲ್ಲಾ ನಿರ್ವಿಘ್ನವಾಗಿ ನಡೆಯಲೆಂದು ಆಶೀರ್ವದಿಸಲು, ಭಾದ್ರಪದ ಮಾಸ ಶುಕ್ಲ ಪಕ್ಷ ಚತುರ್ಥಿಯಂದು, ವಿಘ್ನವಿನಾಯಕ, ಗೌರಿ ಸುತ ಗಣಪ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆಗೊಳ್ಳಲಿದ್ದಾನೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…