ಪತ್ನಿಯನ್ನು ಮನೆಗೆ ಕಳಿಸಿಕೊಡಲು ಒಪ್ಪದ ಮಾವನ ಅಡಿಕೆ ತೋಟವನ್ನು ಧ್ವಂಸಗೊಳಿಸಿದ ಅಳಿಯ
ತನ್ನ ಪತ್ನಿಯನ್ನ ಮನೆಗೆ ವಾಪಸ್ ಕಳಿಸಿಲ್ಲ ಎಂಬ ಸಿಟ್ಟಿಗೆ ಮಾವ ಬೆಳಸಿದ್ದ ಅಡಿಕೆ ತೋಟದಲ್ಲಿ ಅಡಿಕೆ ಸಸಿಗಳನ್ನ ಅಳಿಯನೊಬ್ಬ ಕಡಿದು ಹಾಕಿದ ಘಟನೆ ಬಗ್ಗೆ ವರದಿಯಾಗಿದೆ.
ಹಾನಗಲ್ ತಾಲ್ಲೂಕಿನ ಬಸಾಪುರದಲ್ಲಿ ಮಾವನ ಜಮೀನಿನಲ್ಲಿ ಬೆಳೆದಿದ್ದ 106 ಅಡಿಕೆ ಗಿಡಗಳನ್ನು ಕಡಿದು ನಾಶಪಡಿಸಿದ್ದರ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ದೂರುದಾರರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ವ್ಯಕ್ತಿಯೊಬ್ಬರಿಗೆ ತಮ್ಮ ಮಗಳನ್ನ ಕೊಟ್ಟಿದ್ದರು. ವಿವಿಧ ವಿಚಾರಗಳಿಗೆ ಅಳಿಯನ ವಿರುದ್ಧ ಈ ಕುಟುಂಬ ಸಿಟ್ಟಾಗಿತ್ತು. ಅಲ್ಲದೆ ಮಗಳು ತವರು ಮನೆಗೆ ವಾಪಸ್ ಆಗಿದ್ದರು.
ಈ ವಿಷಯದಲ್ಲಿ ಅಳಿಯ ತನ್ನ ಪತ್ನಿಯನ್ನ ವಾಪಸ್ ಕುಳಹಿಸುವಂತೆ ಒತ್ತಾಯಿಸಿದ್ದ. ಆದರೆ ಮಾವ ಮದ್ಯವ್ಯಸನ ಬಿಟ್ಟು ಬಿಡುವಂತೆ ಒತ್ತಾಯಿಸಿದ್ದರು. ಈ ನಡುವೆ ಸಿಟ್ಟಿಗೆದ್ದ ಅಳಿಯ ಇದೇ 23 ರ ರಾತ್ರಿ 106 ಅಡಿಕೆ ಸಸಿಗಳನ್ನ ಕಡಿದು ಹಾಕಿದ್ದಾನೆ ಎಂದು ದೂರಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…
ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…