ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ

ಗಣಪತಿ ತರಲು ಹೊರಟ  ವಾಹನವೊಂದು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತರಿಕೆರೆ ತಾಲೂಕಿನಲ್ಲಿ ನಡೆದಿದೆ.

ಗಣಪತಿ ಮೂರ್ತಿಯನ್ನು ತರಲು ಟಾಟಾ ಏಸ್ ವಾಹನದಲ್ಲಿ ಹೋಗುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಾಪ್ಪಿದ್ದಾರೆ,ಗಾಯಗೊಂಡ ಇನ್ನಿಬ್ಬರು ಯುವಕರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿದ್ದಾರೆ.

ಇಂದು ಬೆಳಿಗ್ಗೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಈ ಘಟನೆ ನಡೆದಿದೆ. ಧನುಷ್(20) ಹಾಗೂ ಶ್ರೀಧರ್(20) ಮೃತ ದುರ್ಧೈವಿಯಾಗಿದ್ದಾರೆ.

ನಡೆದಿದ್ದೇನು..!?

ಲಿಂಗದಹಳ್ಳಿ ಗ್ರಾಮದ ಒಂಬತ್ತು ಯುವಕರು ಇಂದು ಬೆಳಗ್ಗೆ ಏಳು ಗಂಟೆಗೆ ಗಣಪತಿ ತರಲೆಂದು 15 ಕಿ.ಮೀ. ದೂರದ ತರೀಕೆರೆ ಪಟ್ಟಣಕ್ಕೆ ಟಾಟಾ ಏಸ್ ಲಗೇಜ್ ಆಟೋದಲ್ಲಿ ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ಟಾಟಾ ಏಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಇದರಲ್ಲಿದ್ದ ಉಳಿದ ಮೂರು ಯುವಕರಿಗೂ ಗಂಭೀರ ಗಾಯಗಳಾಗಿವೆ. ಅವರನ್ನು ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು ತೀವ್ರವಾದ ರಕ್ತಸ್ರಾವವಾಗಿದೆ.

ಚಾಲಕ ಮನೋಜ್ ಹಾಗೂ ಮತ್ತೋರ್ವನನ್ನು ಮೆಗ್ಗಾನ್ ತುರ್ತುಘಟಕಕ್ಕೆ ರವಾನಿಸಲಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿರುವ ಲಿಂಗದಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

13 hours ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

15 hours ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

15 hours ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

1 day ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

2 days ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

2 days ago