ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ದೆವ್ವ – ಪೊಲೀಸರಿಂದ ಖಡಕ್ ವಾರ್ನಿಂಗ್
ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಗರದ ಕಾರ್ಗಲ್ನಲ್ಲಿ ಭೂತದ ಕಾಟದ ಕಾರಣ ಇಬ್ಬರು ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ ಎಂದು ಫೋಟೋಗಳ ಸಹಿತ ಸುದ್ದಿ ಹರಿದಾಡಿ ಜನ ಆತಂಕಿತರಾದ ಹಿನ್ನೆಲೆ ತನಿಖೆ ನಡೆಸಿದ ಪೊಲೀಸ್ ಇಲಾಖೆ, ಈ ಸುಳ್ಳು ಸುದ್ದಿ ಹರಡಿ ಕುಚೋದ್ಯ ಮಾಡಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ.
ಅ. 27 ರಂದು ರಾತ್ರಿ ತಾಲೂಕಿನ ಕಾರ್ಗಲ್ನ ಸಮೀಪ ಕಂಚಿಕೈ ರಸ್ತೆಯಲ್ಲಿ ಎರಡು ಜನ ಬೈಕ್ ಸವಾರರಿಗೆ ದೆವ್ವ ಎದುರಾಗಿ ಅಪಘಾತವಾಗಿದೆ. ಒಬ್ಬರಿಗೆ ತುಂಬಾ ಸೀರಿಯಸ್ ಆಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಮತ್ತು ಇನ್ನೊಬ್ಬರು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿರುತ್ತಾರೆಂದು ಪೋಟೋ ಮತ್ತು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗಿತ್ತು.
ಈ ಕುರಿತಾಗಿ ಸಾಗರ ಉಪವಿಭಾಗದ ಕಾರ್ಗಲ್ ಪೊಲೀಸ್ ಠಾಣೆ ಅಧಿಕೃತ ಪ್ರಕಟಣೆ ನೀಡಿದ್ದು, ಇದು ಸುಳ್ಳು ಸುದ್ದಿಯಾಗಿದೆ. ಸಾರ್ವಜನಿಕರು ಭಯಪಡುವ ಅವಶ್ಯಕತೆ ಇರುವುದಿಲ್ಲ.
ಈ ರೀತಿಯ ಯಾವುದೇ ಪ್ರಕರಣಗಳು ಬೆಳಕಿಗೆ ಬಂದಿಲ್ಲ. ಇಂತಹ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದು, ಫಾರ್ವರ್ಡ್ ಮಾಡುವುದು, ಶೇರ್ ಮಾಡುವುದು ಕಾನೂನು ರೀತಿಯ ಅಪರಾಧವಾಗಿದೆ. ಈ ರೀತಿ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…