ಕೆಲಸ ಕೊಡಿಸುವುದಾಗಿ ಹೇಳಿ ಪತ್ರಕರ್ತನೊಬ್ಬ ಅಂಧರೊಬ್ಬರಿಗೆ 2 ಲಕ್ಷದ 30 ಸಾವಿರ ರೂ. ವಂಚಿಸಿರುವುದು ಆರೋಪ ಕೇಳಿ ಬಂದಿದೆ.
ಈ ಕುರಿತು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಂಧ ಬಸವರಾಜ್ ತನ್ನ ಮಗ ಗಗನ್ ದೀಪ್ಗೆ ನಗರಸಭೆಯಲ್ಲಿ ಕೆಲಸ ಖಾಲಿಯಿದೆ. ಇಲ್ಲವೆಂದರೆ ಪತ್ರಕರ್ತರ ಕಚೇರಿಯೊಂದರಲ್ಲಿ ಕೆಲಸ ಆಗಲಿದೆ ಎಂದು ತಿಳಿಸಿದ್ದರು. ಡಾಟಾ ಆಪರೇಟರ್ ಕೆಲಸಕ್ಕೆ 7-8 ಲಕ್ಷ ರೂ. ಬೇಡಿಕೆ ಇದೆ ಎಂದಿದ್ದರು. ಬೇಡ ಎಂದಾಗ ನಿಮ್ಮ ಹತ್ತಿರ ಎಷ್ಟು ಇದ್ದರೂ ಕೊಡಿ ಎಂದು ಹೇಳಿ 2 ಲಕ್ಷ ರೂ. ಹಣ ಪಡೆದಿದ್ದರು. ಹಣ ಪಡೆದ ನಂತರ ಮೊಬೈಲ್ ಹಾಗೂ ಇತರೆ ಸಂಪರ್ಕಗಳನ್ನ ಪತ್ರಕರ್ತರು ಕಡಿತ ಗೊಳಿಸಿಕೊಂಡಿರುವುದಾಗಿ ತಿಳಿಸಿದರು.
ಇದನ್ನ ಕೇಳಲು ಮನೆಗೆ ಹೋದಾಗ ಸರ್ಕಾರಿ ಕೆಲಸ ಬೇಗ ಆಗುತ್ತಾ ಅಂತ ಹೇಳಿದ ಪತ್ರಕರ್ತರು. ಠಾಣೆ, ಎಸ್ಪಿ ಎಲ್ಲರ ಮುಂದೆ ಹೋದರೂ ದಿನಾಂಕ ಕೊಡ್ತಾರೆ. ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಡಿವೈಎಸ್ಪಿ ಎದುರೇ ಕುಳಿತು ಮುಚ್ಚಳಿಕೆ ಮತ್ತು ಚೆಕ್ ಕೊಟ್ಟಿದ್ದಾರೆ. ಆದರೆ ಯಾವ ಹಣವೂ ಬರ್ತಾ ಇಲ್ಲ. ನ.05 ರಂದು ಮಗಳ ಮದುವೆ ಇದೆ. ಜವಳಿ ತೆಗೆದಿಲ್ಲ. ಠಾಣೆಯಲ್ಲೂ ಎಫ್ಐಆರ್ ಆಗಿಲ್ಲ ಎಂದು ದೂರಿದರು.
ಕಸ್ತೂರಿ ಬಾಯಿ, ಮಣಿ ಬಾಯಿ ಮಾಲ್ತೇಶ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…