ಕೆಲಸ ಕೊಡಿಸುವುದಾಗಿ ಹೇಳಿ ಪತ್ರಕರ್ತನೊಬ್ಬ ಅಂಧರೊಬ್ಬರಿಗೆ 2 ಲಕ್ಷದ 30 ಸಾವಿರ ರೂ. ವಂಚಿಸಿರುವುದು ಆರೋಪ ಕೇಳಿ ಬಂದಿದೆ.
ಈ ಕುರಿತು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಂಧ ಬಸವರಾಜ್ ತನ್ನ ಮಗ ಗಗನ್ ದೀಪ್ಗೆ ನಗರಸಭೆಯಲ್ಲಿ ಕೆಲಸ ಖಾಲಿಯಿದೆ. ಇಲ್ಲವೆಂದರೆ ಪತ್ರಕರ್ತರ ಕಚೇರಿಯೊಂದರಲ್ಲಿ ಕೆಲಸ ಆಗಲಿದೆ ಎಂದು ತಿಳಿಸಿದ್ದರು. ಡಾಟಾ ಆಪರೇಟರ್ ಕೆಲಸಕ್ಕೆ 7-8 ಲಕ್ಷ ರೂ. ಬೇಡಿಕೆ ಇದೆ ಎಂದಿದ್ದರು. ಬೇಡ ಎಂದಾಗ ನಿಮ್ಮ ಹತ್ತಿರ ಎಷ್ಟು ಇದ್ದರೂ ಕೊಡಿ ಎಂದು ಹೇಳಿ 2 ಲಕ್ಷ ರೂ. ಹಣ ಪಡೆದಿದ್ದರು. ಹಣ ಪಡೆದ ನಂತರ ಮೊಬೈಲ್ ಹಾಗೂ ಇತರೆ ಸಂಪರ್ಕಗಳನ್ನ ಪತ್ರಕರ್ತರು ಕಡಿತ ಗೊಳಿಸಿಕೊಂಡಿರುವುದಾಗಿ ತಿಳಿಸಿದರು.
ಇದನ್ನ ಕೇಳಲು ಮನೆಗೆ ಹೋದಾಗ ಸರ್ಕಾರಿ ಕೆಲಸ ಬೇಗ ಆಗುತ್ತಾ ಅಂತ ಹೇಳಿದ ಪತ್ರಕರ್ತರು. ಠಾಣೆ, ಎಸ್ಪಿ ಎಲ್ಲರ ಮುಂದೆ ಹೋದರೂ ದಿನಾಂಕ ಕೊಡ್ತಾರೆ. ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಡಿವೈಎಸ್ಪಿ ಎದುರೇ ಕುಳಿತು ಮುಚ್ಚಳಿಕೆ ಮತ್ತು ಚೆಕ್ ಕೊಟ್ಟಿದ್ದಾರೆ. ಆದರೆ ಯಾವ ಹಣವೂ ಬರ್ತಾ ಇಲ್ಲ. ನ.05 ರಂದು ಮಗಳ ಮದುವೆ ಇದೆ. ಜವಳಿ ತೆಗೆದಿಲ್ಲ. ಠಾಣೆಯಲ್ಲೂ ಎಫ್ಐಆರ್ ಆಗಿಲ್ಲ ಎಂದು ದೂರಿದರು.
ಕಸ್ತೂರಿ ಬಾಯಿ, ಮಣಿ ಬಾಯಿ ಮಾಲ್ತೇಶ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…