ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು
ತೀರ್ಥಹಳ್ಳಿ : ಬಾವಿಗೆ ಬಿದ್ದಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆ ತಾಲೂಕಿನ ಕುಡುಮಲ್ಲಿಗೆಯಲ್ಲಿ ಸೋಮವಾರ(ಅ.7) ನಡೆದಿದೆ.
ಇಂದಿರಾನಗರದ ಚೌಡಿಕಟ್ಟಿ ಹತ್ತಿರದ ಸರ್ಕಾರಿ ಬಾವಿಗೆ ಗುಲಾಬಿ ಪೂಜಾರ್ತಿ (58) ಎಂಬ ಮಹಿಳೆ ಆಯತಪ್ಪಿ ಬಾವಿಗೆ ಬಿದ್ದಿದ್ದಾರೆ.
ಬಾವಿಯಲ್ಲಿ ಇದ್ದಂತಹ ಗಟ್ಟಿ ಮುಟ್ಟಾದ ಗಿಡವನ್ನು ಹಿಡಿದು ಮಹಿಳೆ ಕುಳಿತಿದ್ದಾರೆ. ಸೋಮವಾರ ಮಧ್ಯಾಹ್ನ ಬಾವಿಗೆ ಬಿದ್ದಿದ್ದು ಸಂಜೆಯ ವೇಳೆ ಸ್ಥಳೀಯರಿಗೆ ವಿಷಯ ತಿಳಿದಿದೆ.
ವಿಷಯ ತಿಳಿದು ತೀರ್ಥಹಳ್ಳಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಾಕ ದಳದ ಸಿಬ್ಬಂದಿಗಳು ಮಹಿಳೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಲಾಬಿಯವರಿಗೆ ಸಣ್ಣ ಪುಟ್ಟ ಪೆಟ್ಟಾಗಿದ್ದು ನಂತರ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳಾದ ಸಂತೋಷ್ ಶೆಟ್ಟಿ, ಚಾಲಕರಾದ ಪ್ರಶಾಂತ್ ಕುಮಾರ್ ಹಾಗೂ ಶರತ್ ಎಂ, ಶಶಿಕುಮಾರ್, ನಿಂಗಪ್ಪ ಇಟ್ಟಣ್ಣನವರ್ ಸೇರಿ ಸ್ಥಳೀಯರು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…