ಕುಖ್ಯಾತ ದ್ವಿಚಕ್ರ ವಾಹನ ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು
ಬಂಕಾಪುರ : ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಕಳ್ಳರನ್ನು ಬಂಕಾಪುರ ಪೊಲೀಸ್ ಠಾಣೆ ಪಿಎಸ್ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಬಂಧಿಸಿ ಹೆಡೆಮುರಿ ಕಟ್ಟಿ 14 ಬೈಕ್ ಸಮೇತ ಆರು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಕಾಪೂರ, ಶಿಗ್ಗಾಂವ, ರಾಣೆಬೆನ್ನೂರು ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದ್ವಿ ಚಕ್ರ, ವಾಹನಗಳು ಕಳ್ಳತನ ಪ್ರಕರಣಗಳು ನಡೆಯುತಿದ್ದ ಹಿನ್ನಲೆ ಮೇಲಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಬಂಕಾಪುರ ಪಿಎಸ್ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿ 5.50 ಲಕ್ಷ ಮೌಲ್ಯದ 14 ಬೈಕ್ ಹಾಗೂ 20 ಸಾವಿರ ರೂ ಮೌಲ್ಯದ ಆಯಿಲ್ ಪಂಪ್ ಗಳನ್ನು ವಶಕ್ಕೆ ಪಡೆದು ಆರು ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿತರಾದ ವಿನಾಯಕ , ಕರಬಸಪ್ಪ , ಮಧು , ಆನಂದಗೌಡ ,ಕುಮಾರಗೌಡ, ವಿಜಯಕುಮಾರ ರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಗಳಾದ ಹನಮಂತಪ್ಪ, ಚಂದ್ರಕಾಂತ ರವರು ಪರಾರಿಯಾಗಿದ್ದಾರೆ.
ಆರೋಪಿತರಿಗೆ ದಸ್ತಗೀರ ಮಾಡಿ ಕಳ್ಳತನ ಮಾಡಿದ ದ್ವಿ ಚಕ್ರ ವಾಹನಗಳನ್ನು ಮತ್ತು ಆಯಿಲ್ ಮಷೀನ್ ವಸ್ತುಗಳನ್ನು ವಶಪಡಿಸಿಕೊಂಡು ಆರೋಪಿತರಿಗೆ ಮಾನ್ಯ ನ್ಯಾಯಾಲಯಕ್ಕೆ ಹಾಜರಪಡಿಸಿದ್ದು. ನ್ಯಾಯಾಂಗ ಬಂಧನದಲ್ಲಿರುತ್ತಾರೆ.
ಆರೋಪಿತರನ್ನು ಪತ್ತೆ ಮಾಡಿದ ನಿಂಗಪ್ಪ ಕರಕಣ್ಣನವರ ಪಿಎಸ್ಐ ಬಂಕಾಪೂರ ಪೊಲೀಸ್ ಠಾಣೆ ಹಾಗೂ ಪತ್ತೆ ಕಾರ್ಯದಲ್ಲಿ ತೊಡಗಿದ ಸಿಬ್ಬಂದಿಗಳಾದ ಎಸ್ ಎಮ್ ವನಹಳ್ಳಿ ಪಿಎಸ್ಐ 2 , ಬಿ ಎನ್ ಅಗಸಿಮನಿ ಎ.ಎಸ್.ಐ. ಕೆ ರಜನಿ ಮಎಎಸ್ಐ, ಎ ಕೆ ನದಾಪ, ಗೊವಿಂದ ಲಮಾಣಿ, ಪ್ರವೀಣ ಕೋಟಿಹಾಳ, ಜಬೀವುಲ್ಲಾ ದೊಡ್ಡಮನಿ, ಕರಬಸಪ್ಪ ಹಾವಣಗಿ, ಬೀರಪ್ಪ ಕಳ್ಳಿಮನಿ, ಶಂಕರ ಗೊಂದಳಿ, ನಿಂಗಪ್ಪ ಪೂಜಾರ,ವಾಸು ಹೆಗಡೆ, ಷಣ್ಮುಖ ಲಮಾಣಿ, ಮತ್ತು ತಾಂತ್ರಿಕ ಸಿಬ್ಬಂದಿಗಳಾದ ಸತೀಶ ಮಾರಕಟ್ಟೆ ಮಾರುತಿ ಹಾಲಬಾವಿ ನೇದವರಿಗೆ ಇದ್ದರು.
ಹಾವೇರಿಯ ಪೊಲೀಸ್ ಅಧೀಕ್ಷಕರಾದ ಅಂಶುಕುಮಾರ್ ಈ ಪ್ರಕರಣವನ್ನು ಪತ್ತೆ ಮಾಡಿದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…