ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ
ಹೊಸನಗರ : ಒಂದೇ ಕುಟುಂಬದ ಮೇಲೆ ಎರಡೆರಡು ಬಾರಿ ಹೆಜ್ಜೇನು ದಾಳಿಯಾಗಿ 7 ಮಂದಿ ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ಶನಿವಾರ ನಡೆದಿದೆ.
ಶನಿವಾರ ಬೆಳಗ್ಗೆ ಚಿಕ್ಕಪೇಟೆ ಸೇತುವೆ ಬಳಿಯ ಬಾಷಾ ಎಂಬುವವರ ಮನೆ ಸಮೀಪ ಬಾಷಾ, ಅವರ ಪತ್ನಿ ಆಸ್ಮಾ, ಇಬ್ಬರು ಮಕ್ಕಳಾದ ಆರೀಫ್ ಮತ್ತು ಅನೀಫ್ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಕೂಡಲೇ ನಗರ ಆಸ್ಪತ್ರೆಗೆ ದಾಖಲಿಸಿ ನಾಲ್ವರಿಗೆ ಚಿಕಿತ್ಸೆ ನೀಡಲಾಯಿತು.
ಸಂಜೆ 5 ಗಂಟೆ ವೇಳೆಗೆ ಅದೇ ಜಾಗದಲ್ಲಿ ಹೆಜ್ಜೇನು ಮತ್ತೆ ದಾಳಿ ನಡೆಸಿದೆ. ಬೆಳಗ್ಗೆ ದಾಳಿಗೆ ಒಳಗಾಗಿದ್ದ ಬಾಷಾ ಪುತ್ರ ಆರೀಫ್ ಮೇಲೆ, ಪಕ್ಕದ ಮನೆ ಯಾಸಿನ್ ಮೇಲೆ ಮತ್ತೆ ಹೆಜ್ಜೇನು ದಾಳಿ ನಡೆಸಿದೆ. ಈ ವೇಳೆ ಹಾಸಿಗೆ ದುರಸ್ತಿಗಾಗಿ ಬಂದಿದ್ದ ಶಿವಮೊಗ್ಗದ ಮಂಜುನಾಥ ಬಡಾವಣೆ ನಿವಾಸಿ ಹುಸೇನ್ ಸಾಬ್ (68) ಮತ್ತು ಅವರ ಪುತ್ರ ಬಾಬಾ ಸಾಬ್ ಎಂಬುವವರ ಮೇಲೆ ಕೂಡ ಹೆಜ್ಜೇನು ದಾಳಿ ನಡೆಸಿದೆ.
ವೃದ್ಧ ಹುಸೇನ್ ಸಾಬ್ ಮೇಲೆ ತೀವ್ರ ದಾಳಿಯಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ. ಕೂಡಲೇ ನಗರ ಆಸ್ಪತ್ರೆಗೆ ದಾಖಲಿಸಲಾಯಿತು. ಭಾರೀ ಪ್ರಮಾಣದಲ್ಲಿ ಜೇನು ಕಚ್ಚಿದ್ದರಿಂದ ಸ್ಥಳೀಯರ ಸಹಕಾರದಿಂದ ಅವರ ದೇಹದಿಂದ 500ಕ್ಕೂ ಹೆಚ್ಚು ಮುಳ್ಳು ಹೊರತೆಗೆಯಲಾಗಿದೆ. ಬಳಿಕ ಹೊಸನಗರ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…