ಭತ್ತದ ಗದ್ದೆಯಲ್ಲಿ ಕಂದುಜಿಗಿ ಹುಳು ಬಾಧೆಗೆ ನೂರಾರು ಎಕರೆ ಬೆಳೆ ನಾಶ – ಈ ಹುಳುವಿನ ಹತೋಟಿ ಕ್ರಮ ಏನೇನು.!? ಇಲ್ಲಿದೆ ಸಂಪೂರ್ಣ ಮಾಹಿತಿ..!

ಕಳೆದ ಬೇಸಿಗೆಯಲ್ಲಿ ಸೈನಿಕ ಹುಳುಬಾಧೆ, ಮಳೆಗಾಲದಲ್ಲಿ ಅತಿವೃಷ್ಟಿಯಿಂದ ಜೋಳ ಬೆಳೆ ಕಳೆದುಕೊಂಡ ರೈತರೀಗ ಕಂದುಜಿಗಿ ಹುಳು ಬಾಧೆಯಿಂದ ಭತ್ತದ ಬೆಳೆಯನ್ನೂ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕುವ ಆತಂಕದಲ್ಲಿದ್ದಾರೆ.

ಭತ್ತದ ಬೆಳೆಯಿಂದ ಲಾಭ ಕಡಿಮೆ. ಹೀಗಾಗಿ ಹೆಚ್ಚು ಬೆಲೆಯ ಕೀಟನಾಶಕ ಸಿಂಪಡಿಸುವುದು ಕಷ್ಟಸಾಧ್ಯ. ಸಾಮಾನ್ಯ ಕೀಟನಾಶಕಗಳನ್ನು ಸಿಂಪಡಿಸುವುರಿಂದ ಹತೋಟಿ ಸಾಧ್ಯವಿಲ್ಲ. ಹೀಗಾಗಿ ಕೃಷಿ ಇಲಾಖೆ ರಿಯಾಯಿತಿ ದರದಲ್ಲಿ ಪರಿಣಾಮಕಾರಿ ಗುಣಮಟ್ಟದ ಕೀಟನಾಶಕವನ್ನು ಒದಗಿಸಿ ರೈತರ ಹಿತ ಕಾಯಬೇಕಿದೆ.

ಶಿವಮೊಗ್ಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭತ್ತದ ಬೆಳೆಗೆ ಕಂದುಜಿಗಿ ಹುಳು ಬಾಧೆ ಕಂಡುಬಂದಿರುತ್ತದೆ. ಸಾಮಾನ್ಯವಾಗಿ ಕಂದುಜಿಗಿ ಹುಳು ಅತಿ ಶೀಘ್ರದಲ್ಲಿ ಲಕ್ಷಗಟ್ಟಲೇ ಸಂಖ್ಯೆಯಲ್ಲಿ ಅಭಿವೃದ್ಧಿಯಾಗಿ ಭತ್ತದ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತದೆ ಆದ್ದರಿಂದ ರೈತರು ಎಚ್ಚರಿಕೆ ವಹಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕಂದುಜಿಗಿ ಹುಳುವಿನ ಬಾಧೆಯಲ್ಲಿ ಹುಳುಗಳು ಸಸ್ಯದ ಬುಡ ಭಾಗದಲ್ಲಿ ರಸ ಹೀರಿ ಬೆಳೆಯನ್ನು ಸುಟ್ಟಂತೆ ಮಾಡಿ ಸಂಪೂರ್ಣವಾಗಿ ನಾಶಪಡಿಸುತ್ತದೆ. ಗರಿಗಳ ಅಂಚು ಹಳದಿ ಬಣ್ಣಕ್ಕೆ ತಿರುಗಿ ತೆಂಡೆಗಳು ಕ್ರಮೇಣ ಒಣಗಿದಂತಾಗಿ ಭತ್ತದ ತಾಕಿನಲ್ಲಿ ಅಲ್ಲಲ್ಲಿ ವೃತ್ತಾಕಾರದಲ್ಲಿ ಬೆಳೆ ಸುಟ್ಟಂತೆ ಕಾಣುತ್ತದೆ.

ಸಾಮಾನ್ಯವಾಗಿ ಇದನ್ನು ಜಿಗಿಸುಡು ಅಥವಾ ಹಾಪರ್ ಬರ್ನ್ ಎಂದು ಕರೆಯುತ್ತಾರೆ. ದಿನಗಳೆದಂತೆ ಮರಿಹುಳುಗಳಿಗೆ ರೆಕ್ಕೆಗಳು ಬಂದು ಮುಂದಿನ ತಾಕುಗಳಿಗೆ ಜಿಗಿದು ಆ ಬೆಳೆಯನ್ನೂ ಸಹ ನಾಶಪಡಿಸುತ್ತದೆ.

ಹತೋಟಿ ಕ್ರಮಗಳು:

ಹುಳುವಿನ ಹತೋಟಿಗೆ ಮಾನೋಕ್ರೋಟೋಫಾಸ್ 36 ಎಸ್ ಎಲ್ ಪ್ರತಿ ಲೀಟರ್ ನೀರಿಗೆ 2 ಮಿಲಿ ಅಥವಾ ಕ್ಲೋರೋಪೈರಿಫಾಸ್ 20 ಇಸಿ ಪ್ರತಿ ಲೀಟರ್ ನೀರಿಗೆ 2 ಮಿಲಿ ಅಥವಾ ಇಮಿಡಾ ಕ್ಲೋಪ್ರಿಡ್ 17.8 ಎಸ್ ಎಲ್ 0.6 ಮಿಲಿ ಪ್ರತಿ ಲೀಟರ್ ನೀರಿಗೆ ಅಥವಾ ಬುಫ್ರೋಫೆಜಿನ್ ಪ್ರತಿ ಲೀಟರ್ ನೀರಿಗೆ 2 ಮಿಲಿ ಬೆರಸಿ ಗಿಡದ ಬುಡಭಾಗ ನೆನೆಯುವಂತೆ ಸಿಂಪಡಿಸಬೇಕು.

ಎಕರೆಗೆ 300 ರಿಂದ 350 ಲೀಟರ್ ಸಿಂಪರಣಾ ದ್ರಾವಣ ಬೇಕಾಗುತ್ತದೆ. ತೆನೆ ಬರುವ ಮೊದಲು ಇದರ ಬಾಧೆ ಕಂಡು ಬಂದಲ್ಲಿ ಎಕರೆಗೆ 5 ಕೆಜಿ ಫೋರೇಟ್ ಅಥವಾ 8 ಕೆಜಿ ಕಾರ್ಬೋಫ್ಯೂರಾನ್ ಹರಳನ್ನು ಬಳಸಿ ತಡೆಯಬಹುದಾಗಿದೆ.

ಸಿಂಪರಣೆ ಮಾಡುವಾಗ ಗದ್ದೆಯಲ್ಲಿನ ನೀರನ್ನು ಸಂಪೂರ್ಣವಾಗಿ ಬಸಿದು ಹೊರ ತೆಗೆಯಬೇಕು. ಗದ್ದೆಯಿಂದ ಗದ್ದೆಗೆ ನೀರು ಹಾಯಿಸಬಾರದು ಮತ್ತು ಯೂರಿಯಾ ರಸಗೊಬ್ಬರ ಬಳಸಬಾರದು. ಯಾವುದೇ ಕಾರಣಕ್ಕೂ ಬಾಧೆಗೊಳಗಾದ ಭತ್ತದ ಬೆಳೆಗೆ ಮಿಥೈಲ್ ಪ್ಯಾರಾಥಿಯಾನ್ ಅಥವಾ ಸಿಂಥೆಟಿಕ್ ಪೈರಿಥ್ರಾಯ್ಡ್ ರಾಸಾಯನಿಕಗಳನ್ನು ಬಳಸಬಾರದು.

ಪ್ರತಿ 10 ಸಾಲಿಗೆ (8 ರಿಂದ 10 ಅಡಿ) ಪೂರ್ವ-ಪಶ್ಚಿಮವಾಗಿ ಪಾತಿ ಮಾಡಿ (ಇಕ್ಕಲು ತೆಗೆದು) ಗಾಳಿಯಾಡುವಿಕೆ ಉತ್ತಮಗೊಳಿಸಿ ಗಿಡದ ಬುಡಕ್ಕೆ ಸಿಂಪರಣೆ ಮಾಡುವುದು. ದಿನನಿತ್ಯ ಗದ್ದೆಯ ಪರಿವೀಕ್ಷಣೆ ಅತಿ ಮುಖ್ಯ.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಕರೆ ನೀಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

7 hours ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

9 hours ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

9 hours ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

1 day ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

1 day ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

1 day ago