RIPPONPETE | ಕಾರು ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ

RIPPONPETE | ಕಾರು ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ

ರಿಪ್ಪನ್‌ಪೇಟೆ : ಇಲ್ಲಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಬುಕ್ಕಿವರೆ ಗ್ರಾಮದ ಬಳಿಯಲ್ಲಿ ಕಾರು ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.

ಬುಕ್ಕಿವರೆ ಸಮೀಪ ತಿರುವಿನಲ್ಲಿ ಶಿವಮೊಗ್ಗ ಮೂಲದ ಕುಟುಂಬದವರು ಪ್ರಯಾಣಿಸುತಿದ್ದ ಕಾರು ಹಾಗೂ ಬೊಲೆರೋ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಈ ಘಟನೆಯಲ್ಲಿ ಕಾರಿನ ಚಾಲಕ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.

ಅಪಘಾತ ಸ್ಥಳದಲ್ಲಿದ್ದ ಸ್ಥಳೀಯರು ಗಾಯಾಳುಗಳನ್ನು ಕೋಣಂದೂರು ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival…

16 hours ago

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು Bhadravathi police dramatically…

1 day ago

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ A container lorry allegedly driven recklessly under…

1 day ago

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher…

1 day ago

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike…

2 days ago

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500…

2 days ago