ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮ*ಹತ್ಯೆ

BENGALURU, 15 ಅಕ್ಟೋಬರ್ :  ಯಲಹಂಕ ತಾಲ್ಲೂಕಿನ ಸಿಂಗನಾಯಕನಹಳ್ಳಿ ಸಮೀಪದ ಯಡಿಯೂರಪ್ಪ ನಗರದ ಮನೆಯೊಂದರಲ್ಲಿ ಇಬ್ಬರು ಪುಟ್ಟ ಮಕ್ಕಳು ಹಾಗೂ ಮಕ್ಕಳ ತಂದೆ-ತಾಯಿ ಸೇರಿ ನಾಲ್ವರ ಶವಗಳು ಸೋಮವಾರ ಪತ್ತೆಯಾಗಿವೆ.

ಪತಿ ಅವಿನಾಶ್ (33), ಪತ್ನಿ ಮಮತಾ(30), ಮಕ್ಕಳಾದ ಅಧೀಯ(5) ಮತ್ತು ಅನಯಾ (3) ಮೃತರು.

‘ಕಲಬುರಗಿಯ ಕಮಲಾ‍‍ಪುರದ ತಾಂಡಾದ ದಂಪತಿ ಆರು ವರ್ಷಗಳಿಂದ ಯಡಿಯೂರಪ್ಪ ನಗರದಲ್ಲಿ ವಾಸವಾಗಿದ್ದರು. ಅವಿನಾಶ್ ಅವರು ಕ್ಯಾಬ್‌ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮಮತಾ ಅವರು ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಅವಿನಾಶ್ ಅವರ ಸಹೋದರ ಸೋಮವಾರ ಬೆಳಿಗ್ಗೆ ಮನೆಗೆ ಬಂದಾಗ ಯಾರೂ ಮನೆಯ ಬಾಗಿಲು ತೆರೆಯಲಿಲ್ಲ. ಬಾಗಿಲು ಒಡೆದು ಪರಿಶೀಲಿಸಿದಾಗ ನಾಲ್ವರ ಶವ ಪತ್ತೆಯಾಗಿವೆ. ಅವಿನಾಶ್ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ. ಉಳಿದವರು ಸಾವು ಹೇಗಾಯಿತು ಎಂಬುದು ಇನ್ನೂ ಗೊತ್ತಾಗಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‌ಪಿ ಸಿ.ಕೆ.ಬಾಬಾ ಮಾಹಿತಿ ನೀಡಿದರು.

‘ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಅವಿನಾಶ್‌ ಅವರ ಸಹೋದರರಿಂದ ಮಾಹಿತಿ ಪಡೆದುಕೊಳ್ಳಲಾಗಿದೆ. ಅವಿನಾಶ್‌ ಅವರು ಭಾನುವಾರ ಕ್ಯಾಬ್‌ ಚಾಲನೆಗೆ ತೆರಳಿದ್ದರು. ವಾಪಸ್ ಬಂದ ಬಳಿಕ ಈ ಘಟನೆ ನಡೆದಿದೆ ಎನ್ನಲಾಗಿದೆ’ ಎಂದೂ ತಿಳಿಸಿದರು.

ಮಕ್ಕಳ ಕತ್ತು ಹಿಸುಕಿ ಕೊಲೆ?:

ತಾಯಿಯೇ ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದು ನಂತರ ಆಕೆಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ’ ಎಂದು ಮೂಲಗಳು ತಿಳಿಸಿವೆ.

ಹಲವು ಬಾರಿ ಕರೆ ಮಾಡಿದ್ದ ಪತಿ: ‘ಭಾನುವಾರ ಕ್ಯಾಬ್‌ ಚಾಲನೆಗೆ ತೆರಳಿದ್ದ ಅವಿನಾಶ್‌ ಅವರು ಪತ್ನಿಗೆ ಹಲವು ಬಾರಿ ಮಾಡಿದ್ದರು. ಎಷ್ಟು ಬಾರಿ ಕರೆ ಮಾಡಿದರೂ ಆಕೆ ಕರೆಯನ್ನು ಸ್ವೀಕರಿಸಿರಲಿಲ್ಲ. ಇದರಿಂದ ಅನುಮಾನಗೊಂಡ ಅವಿನಾಶ್ ಅವರು ಪಕ್ಕದ ಮನೆಯವರಿಗೆ ಕರೆ ಮಾಡಿ ಪರಿಶೀಲಿಸುವಂತೆ ತಿಳಿಸಿದ್ದರು. ಅವರು ಮನೆ ಬಳಿಗೆ ತೆರಳಿ ಬಾಗಿಲು ಬಡಿದರೂ ಬಾಗಿಲು ತೆರೆಯಲಿಲ್ಲ. ನಂತರ, ಅವಿನಾಶ್‌ಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ತಕ್ಷಣವೇ ಮನೆಗೆ ಬಂದ ಅವಿನಾಶ್ ಅವರು ಪತ್ನಿ ಹಾಗೂ ಮಕ್ಕಳ ಸ್ಥಿತಿಕಂಡು, ಪತ್ನಿಯ ಮೃತದೇಹವನ್ನು ಕೆಳಕ್ಕಿಳಿಸಿ ಅದೇ ಹಗ್ಗದಿಂದ ತಾವೂ ನೇಣಿಗೆ ಶರಣಾಗಿದ್ದಾರೆ’ ಎಂದು ಪೊಲೀಸರು ಹೇಳಿದರು.

ದಂಪತಿ ಮಧ್ಯೆ ಕೌಟುಂಬಿಕ ಕಲಹ ಇತ್ತು. ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಆರ್ಥಿಕ ಸಂಕಷ್ಟವೇ ಆತ್ಮಹತ್ಯೆಗೆ ಕಾರಣ?

‘ಅವಿನಾಶ್ ಅವರು ತನ್ನ ಮಾವನಿಗೆ ಕಳೆದ ವಾರ ಕರೆ ಮಾಡಿದ್ದರು. ಕ್ರೆಡಿಟ್ ಕಾರ್ಡ್ಗೆ ಹಣ ತುಂಬಬೇಕು ಎಂದು ಹೇಳಿದ್ದರು. ಅದಕ್ಕೆ ಅವರು ಸದ್ಯ ನನ್ನ ಬಳಿ ಹಣ ಇಲ್ಲ ಮುಂದೆ ನೋಡುತ್ತೇನೆ ಎಂದು ಹೇಳಿದ್ದರು. ಪತಿಯ ಆರ್ಥಿಕ ಸ್ಥಿತಿಕಂಡು ಮಮತಾ ಅವರು ಮಕ್ಕಳನ್ನೂ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದು’ ಎಂದು ಶಂಕಿಸಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival…

17 hours ago

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು Bhadravathi police dramatically…

1 day ago

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ A container lorry allegedly driven recklessly under…

1 day ago

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher…

2 days ago

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike…

2 days ago

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500…

2 days ago