ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು – ದೀಪಾವಳಿಗೆ ಬಂಪರ್ ಉಡುಗೊರೆ

ನಟ ದರ್ಶನ್ ಗೆ ದೀಪಾವಳಿ ಉಡುಗೊರೆ – ಮಧ್ಯಂತರ ಜಾಮೀನು ಮಂಜೂರು

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11 ರಂದು ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್​ ಸುಮಾರು ಐದು ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಇದೀಗ ಕೊನೆಗೂ ದೀಪಾವಳಿಗೆ ದರ್ಶನ್​ಗೆ ಸಿಹಿ ದೊರೆತಿದೆ. ಕರ್ನಾಟಕ ರಾಜ್ಯ ಹೈಕೋರ್ಟ್ ದರ್ಶನ್​ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್​ಗೆ ದೀಪಾವಳಿ ಶುಭ ತಂದಿದೆ. ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್​ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಆರು ವಾರಗಳ ಅವಧಿಯ ಮಧ್ಯಂತರ ಜಾಮೀನು ನೀಡಲಾಗಿದ್ದು, ಮಧ್ಯಂತರ ಜಾಮೀನಿಗೆ ಸಾಕಷ್ಟು ಷರತ್ತುಗಳನ್ನು ಮಾನ್ಯ ನ್ಯಾಯಾಲಯ ವಿಧಿಸಿದೆ.

ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್​ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಹೈಕೋರ್ಟ್​ನಲ್ಲಿ ಅರ್ಜಿ ಹಾಕಿದ್ದರು. ಆದರೆ ಹೈಕೋರ್ಟ್​ನಲ್ಲಿ ದರ್ಶನ್ ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು. ದರ್ಶನ್​ಗೆ ತೀವ್ರ ಬೆನ್ನುನೋವಿನ ಸಮಸ್ಯೆ ಇದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರು, ದರ್ಶನ್​ರ ಆರೋಗ್ಯ ಸಮಸ್ಯೆಯ ಕುರಿತು ವರದಿ ನೀಡಲು ಮೆಡಿಕಲ್ ಬೋರ್ಡ್ ಸ್ಥಾಪನೆ ಮಾಡಬೇಕೆಂಬ ವಾದವನ್ನು ನ್ಯಾಯಾಲಯದ ಮುಂದೆ ಮಂಡಿಸಿದ್ದರು. ಅಲ್ಲದೆ ಈಗ ಸಲ್ಲಿಸಲಾಗಿರುವ ವೈದ್ಯ ವರದಿಯಲ್ಲಿ ದರ್ಶನ್​ಗೆ ಆಗಬೇಕಿರುವ ಶಸ್ತ್ರಚಿಕಿತ್ಸೆ, ಗುಣವಾಗಲು ತೆಗೆದುಕೊಳ್ಳುವ ಸಮಯ ನಿಖರವಾಗಿಲ್ಲವೆಂದು ವಾದಿಸಿದ್ದರು.

ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ವಿಶ್ವೇಶ್ವರ ಭಟ್ ಅವರು, ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಇದೀಗ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ. ಆದರೆ ಆರು ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ. ದರ್ಶನ್​ಗೆ ಹೆಚ್ಚಿನ ಷರತ್ತುಗಳನ್ನೇನೂ ನ್ಯಾಯಾಧೀಶರು ವಿಧಿಸಿಲ್ಲ. ಎಸ್​ಪಿಪಿ ಮನವಿ ಮೇರೆಗೆ ಪಾಸ್​ಪೋರ್ಟ್​ ವಶಕ್ಕೆ ನೀಡುವಂತೆ ಸೂಚಿಸಲಾಗಿದೆ. ಇದರ ಜೊತೆಗೆ ದರ್ಶನ್ ಇಚ್ಛಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ಒಂದು ವಾರದ ಒಳಗಾಗಿ ನ್ಯಾಯಾಲಯಕ್ಕೆ ಚಿಕಿತ್ಸೆಯ ವಿವರಗಳನ್ನು ಸಲ್ಲಿಸಬೇಕಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

22 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

22 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

2 days ago