ಬೆಂಕಿ ಅವಘಡ – ಮನೆಗೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ
ಆಕಸ್ಮಿಕ ಬೆಂಕಿಗೆ ತುತ್ತಾಗಿ ವಾಸದ ಮನೆ ಭಾಗಶಃ ಸುಟ್ಟು ಹೋದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೈಸೆ ಗ್ರಾಮದ ಹೂಕೊಪ್ಪಲು ಎಂಬಲ್ಲಿ ನಡೆದಿದೆ.
ವಿಶಾಲಾಕ್ಷಿಯವರಿಗೆ ಸೇರಿದ ಮನೆಗೆ ಮಧ್ಯಾಹ್ಮ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿಗೆ 95 ಸಾವಿರ ಹಣ, ಬಟ್ಟೆ, 30 ಗ್ರಾಂ ತೂಕದ ಬಂಗಾರ, ಅಡಿಕೆ ಸೇರಿದಂತೆ ಒಟ್ಟು ರೂ. 4.5 ಲಕ್ಷ ನಷ್ಟ ಉಂಟಾಗಿದೆ.
ಮನೆಯವರು ಹತ್ತಿರದ ಜಮೀನಿನಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮನೆ ಯಿಂದ ಹೊಗೆ ಹೊರಗೆ ಹೋಗುತ್ತಿದ್ದುದನ್ನು ಗಮನಿಸಿ ಅವರು ಓಡೋಡಿ ಬಂದಿದ್ದಾರೆ. ಬಳಿಕ ಸ್ಥಳೀಯರ ಸಹಕಾರದಿಂದ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಶಾಲಾಕ್ಷಿ ಎಂಬುವವರು 5 ವರ್ಷದ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಮೂವರು ಚಿಕ್ಕ ಮಕ್ಕಳನ್ನು ಹೊಂದಿದ್ದಾರೆ. ಕಷ್ಟಪಟ್ಟು ಬದುಕುತ್ತಿದ್ದ ಅವರಿಗೆ ಈ ದುರಂತ ಅಸಹಾಯಕನ್ನಾಗಿ ಮಾಡಿದೆ.
ಸ್ಥಳಕ್ಕೆ ಗ್ರಾಪಂ ಸದಸ್ಯರಾದ ಅರುಣ ಬೈಸೆ, ಕೆ.ಬಿ.ಕುಮಾರ್, ಕರುಣಾಕರ ಶೆಟ್ಟಿ, ಪೊಲೀಸ್ ಮತ್ತು ಕಂದಾಯ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…