ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ
ರಿಪ್ಪನ್ಪೇಟೆ : ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ರವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರ ಮೇಲೆ ಸುಖಾಸುಮ್ಮನೆ ಆರೋಪ ಮಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು.
ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆ ಎಸ್ ಈಶ್ವರಪ್ಪ ಈಗಾಗಲೇ ಬಿಜೆಪಿ ಪಕ್ಷವನ್ನು ತೊರೆದಿದ್ದಾರೆ ಅವರು ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡುವ ಅಗತ್ಯತೆ ಇಲ್ಲ, ಕುಟುಂಬ ರಾಜಕಾರಣದಿಂದ ಶುದ್ದೀಕರಣವಾಗಬೇಕು ಎನ್ನುವ ಕೆ ಎಸ್ ಈಶ್ವರಪ್ಪ ರವರು ತಮ್ಮ ಮಗನಿಗೆ ಹಾವೇರಿ ಲೋಕಸಭಾ ಟಿಕೆಟ್ ಸಿಗಲಿಲ್ಲವೆಂದು ಮುನಿಸಿಕೊಂಡು ಪಕ್ಷ ಬಿಟ್ಟು ಹೋಗಿಲ್ವಾ ಅದು ಕುಟುಂಬ ರಾಜಕಾರಣ ಅಲ್ವಾ ಹೀಗೆ ಸುಖಾಸುಮ್ಮನೆ ನಮ್ಮ ಪಕ್ಷದ ಹಾಗೂ ನಮ್ಮ ರಾಜ್ಯಾಧ್ಯಕ್ಷರ ಬಗ್ಗೆ ಆರೋಪ ಮಾಡುವುದು ಕೆ ಎಸ್ ಈಶ್ವರಪ್ಪ ರಂತಹ ಹಿರಿಯರಿಗೆ ಶೋಭೆ ತರುವುದಿಲ್ಲ ಎಂದರು.
ಕೆ ಎಸ್ ಈಶ್ವರಪ್ಪನವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದರು , ಉಪ ಮುಖ್ಯಮಂತ್ರಿ , ಇಂಧನ ಹಾಗೂ ಗ್ರಾಮಿಣಾಭಿವೃದ್ದಿ ಯಂತಹ ಪ್ರಭಾವಿ ಖಾತೆಗಳನ್ನು ಪಕ್ಷ ಅವರಿಗೆ ನೀಡಿದೆ ಇಷ್ಟೆಲ್ಲಾ ಆಗಿದ್ದರೂ ಈಗ ಪಕ್ಷದಿಂದ ಹೊರಹೋಗಿ ಮತ್ತೆ ಪಕ್ಷದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವುದ ಸರಿಯಲ್ಲ ಎಂದು ಹೇಳಿದರು.
ಈ ಸಂಧರ್ಭದಲ್ಲಿ ರಿಪ್ಪನ್ಪೇಟೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ , ಗ್ರಾಪಂ ಸದಸ್ಯರಾದ ಪಿ ರಮೇಶ್ ,ಮಂಜುಳಾ ಕೆ ರಾವ್ , ಸುಂದರೇಶ್ ಹಾಗೂ ಇನ್ನಿತರರಿದ್ದರು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…