ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಬಂಕಾಪುರ ಪಟ್ಟಣದ ಮಾಜಿ ಪುರಸಭೆ ಸದಸ್ಯರಾದ ಎಂ ವಿ ಪದ್ಮಾ ರವರು ದಸರಾ ಗೊಂಬೆ ಕೂರಿಸುವ ಮೂಲಕ ಮೈಸೂರು ಭಾಗದಲ್ಲಿದ್ದ ಸಂಪ್ರದಾಯವನ್ನು ಹಾವೇರಿ ಜಿಲ್ಲೆಗೂ ವಿಸ್ತರಿಸಿದ್ದಾರೆ.
ಹೌದು. ಸುಮಾರು 3 ಸಾವಿರಕ್ಕೂ ಅಧಿಕ ಗೊಂಬೆಗಳನ್ನು ಕೂರಿಸಿರುವ ಇವರು ನವರಾತ್ರಿಯನ್ನು ವಿಶೇಷವಾಗಿ ಆಚರಿಸುತ್ತಾರೆ. ಇವರ ಮನೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಗೊಂಬೆಗಳನ್ನು ಕೂರಿಸಿದ್ದು ಪ್ರತಿನಿತ್ಯ ಸಂಜೆ ಮುತ್ತೈದೆಯರಿಗೆ ಉಡಿ ತುಂಬಿ ಅರಿಷಿಣ ಕುಂಕುಮ ವಿನಿಮಯ ಮಾಡಿಕೊಳ್ಳಲಾಗುತ್ತದೆ.
ವಿಷ್ಣುವಿನ ದಶಾವತಾರಗಳು, ರಾಮಾಯಣ, ಮಹಾಭಾರತ ಸಂಗೀತೋಪಕರಣಗಳು, ವಿವಿಧ ಹಣ್ಣುಗಳು ತರಕಾರಿಗಳ ಗೊಂಬೆಗಳು ಗಮನ ಸೆಳೆಯುತ್ತವೆ. ಅದರಲ್ಲೂ ಹಲವು ತರದ ಪಕ್ಷಿಗಳ ಗೊಂಬೆಗಳು ಪಕ್ಷಿಲೋಕವನ್ನೇ ಅನಾವರಣಗೊಳಿಸಿವೆ. ಸವದತ್ತಿ ಯಲ್ಲಮ್ಮ,ಯಡೆಯೂರು ಸಿದ್ದಲಿಂಗೇಶ,ಪಂಡಿತ ಪುಟ್ಟರಾಜ ಗವಾಯಿಗಳು ಸೇರಿದಂತೆ ವಿವಿಧ ಮೂರ್ತಿಗಳ ನೋಡುಗರಲ್ಲಿ ಭಕ್ತಿಭಾವ ಹುಟ್ಟಿಸುತ್ತವೆ. ಶಿವ ವಿಷ್ಣು, ವಿಘ್ನೇಶ್ವರ,ಬ್ರಹ್ಮ ಗೌರಿ ಪಾರ್ವತಿ ಕೃಷ್ಣ ಸೇರಿದಂತೆ ವಿವಿಧ ದೇವಾನುದೇವತೆಗಳ ಮೂರ್ತಿಗಳು ಆಕರ್ಷಣೀಯವಾಗಿವೆ.
ಪದ್ಮಾ ಹಿರೇಮಠ ಮೂಲತಃ ತುಮಕೂರಿನವರು. ಅವರು ಮದುವೆಯಾಗಿ ಬಂದಾಗ ತವರು ಮನೆಯವರು ಒಂದು ಗಂಡು ಮತ್ತು ಒಂದು ಹೆಣ್ಣು ಗೊಂಬೆಗಳನ್ನು ಉಡುಗೂರೆಯಾಗಿ ನೀಡಿದ್ದಾರೆ.
ಗೊಂಬೆ ನೋಡಲು ಬರುವ ಮಹಿಳೆಯರು ಗೊಂಬೆಗಳಿಗೆ ಅಕ್ಷತೆ ಹಾಕಿ ಆರತಿ ಮಾಡಿ ಭಕ್ತಿ ಬಾವದಿಂದ ನಮಸ್ಕರಿಸಿ ದೈವಿಭಾವನೆ ಕಾಣುತ್ತಾರೆ.
ಈದಿನ ದುರ್ಗಾಷ್ಟಮಿ ನಿಮಿತ್ಯ ಬಾಲ ಮಕ್ಕಳಿಗೆ ಉಡಿ ತುಂಬವ ಕಾರ್ಯಕ್ರಮ ಬಾಲ ಮುತ್ತೈದೆಯರಿಗೆ ಭಕ್ತಿಯಿಂದ ಉಡಿ ತುಂಬಿ ಮಕ್ಕಳಿಗೆ ನಮಸ್ಕರಿಸಿದರು
’ಪೋಸ್ಟ್ಮ್ಯಾನ್ ನ್ಯೂಸ್’ ಮಾಧ್ಯಮದ ಹಿಂದಿರುವ ಓರ್ವ ಅಪ್ಪಟ ಸುದ್ದಿಪ್ರೇಮಿ ಹಾಗೂ ಪತ್ರಕರ್ತ. “ನಮ್ಮೂರ ಸುದ್ದಿಗಳು ಜಗತ್ತಿಗೆ ತಲುಪಬೇಕು” ಎಂಬ ಆರು ವರ್ಷಗಳ ಕನಸಿನ ಕೂಸೇ ಈ ನಮ್ಮ ಪೋಸ್ಟ್ಮ್ಯಾನ್ ನ್ಯೂಸ್.
ಸ್ಥಳೀಯ ಪತ್ರಿಕೆಗಳಿಂದ ಹಿಡಿದು ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೂ ಮಾಧ್ಯಮದ ನಾನಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದು. ಆದರೆ, ಈ ಪಯಣದಲ್ಲಿ ನನಗೊಂದು ಕೊರತೆ ಸದಾ ಕಾಡುತ್ತಿತ್ತು; ಅದೇನೆಂದರೆ, ‘ನಿಜವಾದ ಸ್ಥಳೀಯ ಧ್ವನಿಗೆ ಅಲ್ಲಿ ಸೂಕ್ತ ವೇದಿಕೆ ಇರಲಿಲ್ಲ’. ಆ ಶೂನ್ಯವನ್ನು ತುಂಬಲು ಹುಟ್ಟಿಕೊಂಡ ಪರ್ಯಾಯ ವೇದಿಕೆಯೇ “ಪೋಸ್ಟ್ಮ್ಯಾನ್ ನ್ಯೂಸ್.”
ಇಲ್ಲಿ ‘ಸುದ್ದಿ’ ಎಂದರೆ ಕೇವಲ ಸುದ್ದಿ ಮಾತ್ರ. ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಅತ್ಯಂತ ಸ್ಪಷ್ಟ: “ಸುದ್ದಿಯನ್ನು ಪ್ರಾಮಾಣಿಕವಾಗಿ ಹೇಳಬೇಕು, ತೀರ್ಪು ಕೊಡುವ ಕೆಲಸ ನಮಗಲ್ಲ.”
ಕೆಲವೊಮ್ಮೆ ನಮ್ಮ ವರದಿಗಳಿಗೆ ಬರುವ ಪ್ರತಿಕ್ರಿಯೆಗಳು ಬೇರೆಯದೇ ಬಣ್ಣ ಪಡೆಯಬಹುದು, ಆದರೆ ಅದಕ್ಕೆ ನನ್ನ ಏಕೈಕ ಉತ್ತರ ಕೇವಲ ನನ್ನ ಕೆಲಸದ ಮೂಲಕ ಮಾತ್ರ.
’ಪೋಸ್ಟ್ಮ್ಯಾನ್ ನ್ಯೂಸ್’ ಇಂದು ಕೇವಲ ಒಂದು ಸುದ್ದಿ ಪುಟವಾಗಿ ಉಳಿದಿಲ್ಲ, ಅದೊಂದು ಜಾಗೃತಿಯ ಚಳವಳಿಯಾಗಿ ರೂಪುಗೊಳ್ಳುತ್ತಿದೆ. ಕೇವಲ ವರದಿ ಮಾಡುವುದಷ್ಟೇ ನಮ್ಮ ಉದ್ದೇಶವಲ್ಲ; ನಮ್ಮೂರಿನ ಘಟನೆಗಳು, ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು, ಜ್ವಲಂತ ಸಮಸ್ಯೆಗಳು ಮತ್ತು ಸಾಧನೆಗಳನ್ನು ಹೊರಲೋಕಕ್ಕೆ ಪರಿಚಯಿಸುವ ‘ಸೇತುವೆ’ಯಾಗಬೇಕೆಂಬುದು ನಮ್ಮ ಹೆಬ್ಬಯಕೆ. ಹಣ ಪಡೆದು, ಕಾಸಿಗಾಗಿ ಸುದ್ದಿ ಮಾಡುವ ಅಭ್ಯಾಸವೂ ನಮಗಿಲ್ಲ, ಆ ಹವ್ಯಾಸವೂ ನಮಗಿಲ್ಲ. ಸತ್ಯ ಮತ್ತು ನೈಜತೆಯೇ ನಮ್ಮ ಬಂಡವಾಳ.
ನಮ್ಮ ಅಂತಿಮ ಗುರಿ ಒಂದೇ — “ಸಣ್ಣ ಊರುಗಳ ಸತ್ಯ ಕಥೆಗಳು, ಅತಿ ದೊಡ್ಡ ಮಟ್ಟದಲ್ಲಿ ಜಗತ್ತಿನ ಕಿವಿಗೆ ತಲುಪಬೇಕು.”
ತಮ್ಮ ಪ್ರೀತಿ ಮತ್ತು ಬೆಂಬಲ ಸದಾ ಹೀಗೆಯೇ ಇರಲಿ.
ಸ್ನೇಹಪೂರ್ವಕವಾಗಿ,
ರಫಿ ರಿಪ್ಪನ್ಪೇಟೆ
ಸಂಪಾದಕರು, ಪೋಸ್ಟ್ಮ್ಯಾನ್ ನ್ಯೂಸ್