ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಬಂಕಾಪುರ ಪಟ್ಟಣದ ಮಾಜಿ ಪುರಸಭೆ ಸದಸ್ಯರಾದ ಎಂ ವಿ ಪದ್ಮಾ ರವರು ದಸರಾ ಗೊಂಬೆ ಕೂರಿಸುವ ಮೂಲಕ ಮೈಸೂರು ಭಾಗದಲ್ಲಿದ್ದ ಸಂಪ್ರದಾಯವನ್ನು ಹಾವೇರಿ ಜಿಲ್ಲೆಗೂ ವಿಸ್ತರಿಸಿದ್ದಾರೆ.
ಹೌದು. ಸುಮಾರು 3 ಸಾವಿರಕ್ಕೂ ಅಧಿಕ ಗೊಂಬೆಗಳನ್ನು ಕೂರಿಸಿರುವ ಇವರು ನವರಾತ್ರಿಯನ್ನು ವಿಶೇಷವಾಗಿ ಆಚರಿಸುತ್ತಾರೆ. ಇವರ ಮನೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಗೊಂಬೆಗಳನ್ನು ಕೂರಿಸಿದ್ದು ಪ್ರತಿನಿತ್ಯ ಸಂಜೆ ಮುತ್ತೈದೆಯರಿಗೆ ಉಡಿ ತುಂಬಿ ಅರಿಷಿಣ ಕುಂಕುಮ ವಿನಿಮಯ ಮಾಡಿಕೊಳ್ಳಲಾಗುತ್ತದೆ.
ವಿಷ್ಣುವಿನ ದಶಾವತಾರಗಳು, ರಾಮಾಯಣ, ಮಹಾಭಾರತ ಸಂಗೀತೋಪಕರಣಗಳು, ವಿವಿಧ ಹಣ್ಣುಗಳು ತರಕಾರಿಗಳ ಗೊಂಬೆಗಳು ಗಮನ ಸೆಳೆಯುತ್ತವೆ. ಅದರಲ್ಲೂ ಹಲವು ತರದ ಪಕ್ಷಿಗಳ ಗೊಂಬೆಗಳು ಪಕ್ಷಿಲೋಕವನ್ನೇ ಅನಾವರಣಗೊಳಿಸಿವೆ. ಸವದತ್ತಿ ಯಲ್ಲಮ್ಮ,ಯಡೆಯೂರು ಸಿದ್ದಲಿಂಗೇಶ,ಪಂಡಿತ ಪುಟ್ಟರಾಜ ಗವಾಯಿಗಳು ಸೇರಿದಂತೆ ವಿವಿಧ ಮೂರ್ತಿಗಳ ನೋಡುಗರಲ್ಲಿ ಭಕ್ತಿಭಾವ ಹುಟ್ಟಿಸುತ್ತವೆ. ಶಿವ ವಿಷ್ಣು, ವಿಘ್ನೇಶ್ವರ,ಬ್ರಹ್ಮ ಗೌರಿ ಪಾರ್ವತಿ ಕೃಷ್ಣ ಸೇರಿದಂತೆ ವಿವಿಧ ದೇವಾನುದೇವತೆಗಳ ಮೂರ್ತಿಗಳು ಆಕರ್ಷಣೀಯವಾಗಿವೆ.
ಪದ್ಮಾ ಹಿರೇಮಠ ಮೂಲತಃ ತುಮಕೂರಿನವರು. ಅವರು ಮದುವೆಯಾಗಿ ಬಂದಾಗ ತವರು ಮನೆಯವರು ಒಂದು ಗಂಡು ಮತ್ತು ಒಂದು ಹೆಣ್ಣು ಗೊಂಬೆಗಳನ್ನು ಉಡುಗೂರೆಯಾಗಿ ನೀಡಿದ್ದಾರೆ.
ಗೊಂಬೆ ನೋಡಲು ಬರುವ ಮಹಿಳೆಯರು ಗೊಂಬೆಗಳಿಗೆ ಅಕ್ಷತೆ ಹಾಕಿ ಆರತಿ ಮಾಡಿ ಭಕ್ತಿ ಬಾವದಿಂದ ನಮಸ್ಕರಿಸಿ ದೈವಿಭಾವನೆ ಕಾಣುತ್ತಾರೆ.
ಈದಿನ ದುರ್ಗಾಷ್ಟಮಿ ನಿಮಿತ್ಯ ಬಾಲ ಮಕ್ಕಳಿಗೆ ಉಡಿ ತುಂಬವ ಕಾರ್ಯಕ್ರಮ ಬಾಲ ಮುತ್ತೈದೆಯರಿಗೆ ಭಕ್ತಿಯಿಂದ ಉಡಿ ತುಂಬಿ ಮಕ್ಕಳಿಗೆ ನಮಸ್ಕರಿಸಿದರು
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…