ಶಿವಮೊಗ್ಗದಲ್ಲಿ ಭಾರಿ ಮಳೆ – ರಸ್ತೆಗಳು ಜಲಾವೃತ , ಮನೆಗಳಿಗೆ ನುಗ್ಗಿದ ನೀರು
ಶಿವಮೊಗ್ಗ ನಗರ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾನೆವರೆಗೂ ಮಳೆ ಆರ್ಭಟಿಸಿದೆ. ಬೆಳಿಗ್ಗೆಯೂ ಅರ್ಧ ಗಂಟೆ ಕಾಲ ಬಿಡುವು ನೀಡಿದ್ದ ಮಳೆ ಮತ್ತೆ ಬಿರುಸುಗೊಂಡಿದೆ.
ಕುಂಭದ್ರೋಣ ಮಳೆಗೆ ರಾತ್ರಿಯಿಡೀ ಶಿವಮೊಗ್ಗ ನಗರ ಅಕ್ಷರಶಃ ನಲುಗಿದೆ.ನಗರದ ರಸ್ತೆಗಳು ಹಳ್ಳಗಳಾಗಿ ಬದಲಾಗಿವೆ. ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ರಾತ್ರಿಯೆಲ್ಲ ನಿದ್ರೆಗೆಟ್ಟರು. ಮನೆಯಿಂದ ನೀರು ಹೊರ ಹಾಕುವಲ್ಲಿ ಹೈರಾಣಾದರು.
ಮಳೆಯ ಆರ್ಭಟ ಮುಂಜಾನೆವರೆಗೂ ಒಂದೇ ಪ್ರಮಾಣದಲ್ಲಿದ್ದು, ವಿನೋಬ ನಗರ, ಹೊಸಮನೆ, ಕನಕ ನಗರ, ತಮಿಳು ಕಾಲೊನಿ, ಎಲ್ ಬಿಎಸ್ ನಗರ, ಅಶ್ವತ್ಥ ನಗರ, ಕೃಷ್ಣಮಠ ರಸ್ತೆ, ಬಾಪೂಜಿ ನಗರ, ಶರಾವತಿ ನಗರ, ಕಾಶಿಪುರ ಬಡಾವಣೆಗಳು ಜಲಾವೃತವಾಗಿವೆ. ನಗರದ ಮಧ್ಯೆಯೇ ಸಣ್ಣ ಹೊಳೆಗಳು ಉದ್ಭವಿಸಿದಂತೆ ನೀರಿನ ಹರಿವು ಕಂಡುಬಂದಿತು. ಎಲ್ ಬಿಎಸ್ ನಗರ, ಆಲ್ಕೊಳ ಬಡಾವಣೆಯಲ್ಲಿ ವಸತಿ ಪ್ರದೇಶಗಳು ಅಕ್ಷರಶಃ ದ್ವೀಪದಂತಾಗಿವೆ.
ವಿನೋಬ ನಗರದ ವಿಕಾಸ ಶಾಲೆ ಹಿಂಭಾಗ ಮನೆಗೆ ನೀರು ನುಗ್ಗಿದ್ದು, ಒಳಗೆ ಸಿಲುಕಿಕೊಂಡಿದ್ದ ವೃದ್ಧ ದಂಪತಿಯನ್ನು ನಸುಕಿನಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದರು. ಶರಾವತಿ ನಗರ ಮುಖ್ಯ ರಸ್ತೆಯಲ್ಲಿರುವ ಪಾಸಿಟಿವ್ ಮೈಂಡ್ ಆಸ್ಪತ್ರೆಯ ಬೇಸ್ ಮೆಂಟ್ ಸೆಲ್ಲರ್ ನಲ್ಲಿ ನೀರು ತುಂಬಿದೆ. ಇಡೀ ಆಸ್ಪತ್ರೆ ಕಟ್ಟಡ ಜಲಾವೃತವಾಗಿದೆ.
ಹೊಸಮನೆ – ವಿನೋಬನಗರ ಮಧ್ಯದ ಸಣ್ಣ ಸೇತುವೆ ಮೇಲೆ ಮಳೆ ನೀರು ಹರಿಯುತ್ತಿದೆ. ಸಂಪರ್ಕ ಕಡಿತಗೊಂಡಿದೆ ರಸ್ತೆಯ ಅಕ್ಕಪಕ್ಕದ ಸುಮಾರು 12 ಮನೆಗಳಿಗೆ ನೀರು ನುಗ್ಗಿದೆ.
ಗೋಪಾಲಗೌಡ ಬಡಾವಣೆ ಸಿ ಬ್ಲಾಕ್ ನಲ್ಲಿ ರಾಜಕಾಲುವೆ ಉಕ್ಕಿ ಹರಿದು ಮನೆ, ಅಂಗಡಿಗಳಿಗೆ ನೀರು ನುಗ್ಗಿದೆ.
ಟ್ಯಾಂಕ್ ಮೊಹಲ್ಲಾದ ಅಂಗಳಯ್ಯನ ಕೆರೆ ಪ್ರದೇಶ ಜಲಾವೃತವಾಗಿದೆ. ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಬೈಕ್-ಕಾರುಗಳು ನೀರಿನಲ್ಲಿ ಮುಳುಗಿವೆ. ಮನೆಗಳಿಗೆ ನೀರು ನುಗ್ಗಿದೆ. ಮಾರಿಕಾಂಬಾ ದೇವಸ್ಥಾನ ಜಲಾವೃತವಾಗಿದೆ. ಚರಂಡಿ ನೀರು ನುಗ್ಗಿ ದುರ್ವಾಸನೆ ಬೀರುತ್ತಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…