ಶಿವಮೊಗ್ಗದಲ್ಲಿ ಭಾರಿ ಮಳೆ – ರಸ್ತೆಗಳು ಜಲಾವೃತ , ಮನೆಗಳಿಗೆ ನುಗ್ಗಿದ ನೀರು
ಶಿವಮೊಗ್ಗ ನಗರ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾನೆವರೆಗೂ ಮಳೆ ಆರ್ಭಟಿಸಿದೆ. ಬೆಳಿಗ್ಗೆಯೂ ಅರ್ಧ ಗಂಟೆ ಕಾಲ ಬಿಡುವು ನೀಡಿದ್ದ ಮಳೆ ಮತ್ತೆ ಬಿರುಸುಗೊಂಡಿದೆ.
ಕುಂಭದ್ರೋಣ ಮಳೆಗೆ ರಾತ್ರಿಯಿಡೀ ಶಿವಮೊಗ್ಗ ನಗರ ಅಕ್ಷರಶಃ ನಲುಗಿದೆ.ನಗರದ ರಸ್ತೆಗಳು ಹಳ್ಳಗಳಾಗಿ ಬದಲಾಗಿವೆ. ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ರಾತ್ರಿಯೆಲ್ಲ ನಿದ್ರೆಗೆಟ್ಟರು. ಮನೆಯಿಂದ ನೀರು ಹೊರ ಹಾಕುವಲ್ಲಿ ಹೈರಾಣಾದರು.
ಮಳೆಯ ಆರ್ಭಟ ಮುಂಜಾನೆವರೆಗೂ ಒಂದೇ ಪ್ರಮಾಣದಲ್ಲಿದ್ದು, ವಿನೋಬ ನಗರ, ಹೊಸಮನೆ, ಕನಕ ನಗರ, ತಮಿಳು ಕಾಲೊನಿ, ಎಲ್ ಬಿಎಸ್ ನಗರ, ಅಶ್ವತ್ಥ ನಗರ, ಕೃಷ್ಣಮಠ ರಸ್ತೆ, ಬಾಪೂಜಿ ನಗರ, ಶರಾವತಿ ನಗರ, ಕಾಶಿಪುರ ಬಡಾವಣೆಗಳು ಜಲಾವೃತವಾಗಿವೆ. ನಗರದ ಮಧ್ಯೆಯೇ ಸಣ್ಣ ಹೊಳೆಗಳು ಉದ್ಭವಿಸಿದಂತೆ ನೀರಿನ ಹರಿವು ಕಂಡುಬಂದಿತು. ಎಲ್ ಬಿಎಸ್ ನಗರ, ಆಲ್ಕೊಳ ಬಡಾವಣೆಯಲ್ಲಿ ವಸತಿ ಪ್ರದೇಶಗಳು ಅಕ್ಷರಶಃ ದ್ವೀಪದಂತಾಗಿವೆ.
ವಿನೋಬ ನಗರದ ವಿಕಾಸ ಶಾಲೆ ಹಿಂಭಾಗ ಮನೆಗೆ ನೀರು ನುಗ್ಗಿದ್ದು, ಒಳಗೆ ಸಿಲುಕಿಕೊಂಡಿದ್ದ ವೃದ್ಧ ದಂಪತಿಯನ್ನು ನಸುಕಿನಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದರು. ಶರಾವತಿ ನಗರ ಮುಖ್ಯ ರಸ್ತೆಯಲ್ಲಿರುವ ಪಾಸಿಟಿವ್ ಮೈಂಡ್ ಆಸ್ಪತ್ರೆಯ ಬೇಸ್ ಮೆಂಟ್ ಸೆಲ್ಲರ್ ನಲ್ಲಿ ನೀರು ತುಂಬಿದೆ. ಇಡೀ ಆಸ್ಪತ್ರೆ ಕಟ್ಟಡ ಜಲಾವೃತವಾಗಿದೆ.
ಹೊಸಮನೆ – ವಿನೋಬನಗರ ಮಧ್ಯದ ಸಣ್ಣ ಸೇತುವೆ ಮೇಲೆ ಮಳೆ ನೀರು ಹರಿಯುತ್ತಿದೆ. ಸಂಪರ್ಕ ಕಡಿತಗೊಂಡಿದೆ ರಸ್ತೆಯ ಅಕ್ಕಪಕ್ಕದ ಸುಮಾರು 12 ಮನೆಗಳಿಗೆ ನೀರು ನುಗ್ಗಿದೆ.
ಗೋಪಾಲಗೌಡ ಬಡಾವಣೆ ಸಿ ಬ್ಲಾಕ್ ನಲ್ಲಿ ರಾಜಕಾಲುವೆ ಉಕ್ಕಿ ಹರಿದು ಮನೆ, ಅಂಗಡಿಗಳಿಗೆ ನೀರು ನುಗ್ಗಿದೆ.
ಟ್ಯಾಂಕ್ ಮೊಹಲ್ಲಾದ ಅಂಗಳಯ್ಯನ ಕೆರೆ ಪ್ರದೇಶ ಜಲಾವೃತವಾಗಿದೆ. ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಬೈಕ್-ಕಾರುಗಳು ನೀರಿನಲ್ಲಿ ಮುಳುಗಿವೆ. ಮನೆಗಳಿಗೆ ನೀರು ನುಗ್ಗಿದೆ. ಮಾರಿಕಾಂಬಾ ದೇವಸ್ಥಾನ ಜಲಾವೃತವಾಗಿದೆ. ಚರಂಡಿ ನೀರು ನುಗ್ಗಿ ದುರ್ವಾಸನೆ ಬೀರುತ್ತಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…