ಕುಂಸಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ನೀಡಿ ಗೃಹ ಸಚಿವರು
ಗೃಹ ಸಚಿವ ಡಾ. ಜಿ.ಪರಮೇಶ್ವರ್ ಕುಂಸಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ ಠಾಣೆಯ ಸುತ್ತಲು ಓಡಾಡಿ, ಕಡತಗಳನ್ನು ಪರಿಶೀಲಿಸಿ ಪೊಲೀಸ್ ಸಿಬ್ಬಂದಿಗೆ ಸಲಹೆ ನೀಡುವುದರ ಜೊತೆಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಶಿವಮೊಗ್ಗದಿಂದ ಕಾಗೋಡು ತಿಮ್ಮಪ್ಪ ರವರನ್ನು ಭೇಟಿಯಾಗಲು ಸಾಗರಕ್ಕೆ ತೆರಳುವ ಮಾರ್ಗ ಮಧ್ಯೆ ಕುಂಸಿ ಪೊಲೀಸ್ ಠಾಣೆಗೆ ಗೃಹ ಸಚಿವ ಡಾ. ಪರಮೇಶ್ವರ್ ಹಠಾತ್ ಭೇಟಿ ನೀಡಿದ್ದರು.
ಪೊಲೀಸ್ ಠಾಣೆಯ ಒಳಾಂಗಣವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪರಿಶೀಲಿಸಿದರು. ಪ್ರತಿ ಕೊಠಡಿ, ಮೂಲ ಸೌಕರ್ಯ, ಟೇಬಲ್ ಮೇಲಿದ್ದ ಕಡತಗಳನ್ನು ಪರಿಶೀಲಿಸಿದರು. ಠಾಣೆಯಲ್ಲಿರುವ ಸೆಲ್ಗಳನ್ನು ವೀಕ್ಷಿಸಿದರು.ಅಪರಾಧ ಮತ್ತು ಠಾಣೆಯ ನಿರ್ವಹಣೆ ಸಂಬಂಧದ ಕಡತಗಳನ್ನು ಪರಿಶೀಲಿಸಿದರು. ಈ ಸಂದರ್ಭ ಠಾಣೆ ಸಿಬ್ಬಂದಿಗೆ ಕೆಲವು ಸಲಹೆ ನೀಡಿದರು. ಅಲ್ಲದೆ ಕೆಲವು ಕಡತಗಳನ್ನು ಸರಿಯಾಗಿ ನಿರ್ಹವಣೆ ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ವಿವಿಧ ಪ್ರಕರಣ ಸಂಬಂಧ ಸೀಜ್ ಆಗಿರುವ ವಾಹನಗಳನ್ನು ವೀಕ್ಷಿಸಿದರು. ಇವುಗಳ ದಾಖಲೆಗಳನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ಗೃಹ ಸಚಿವ ಡಾ.ಪರಮೇಶ್ವರ್ ಸಿಡಿಮಿಡಿಗೊಂಡರು. ಇನ್ನು, ಠಾಣೆಯಲ್ಲಿರುವ ಕ್ರೈಮ್ ಟೇಬಲ್ ಅಪ್ಡೇಟ್ ಮಾಡದ್ದಕ್ಕೆ ಸಿಬ್ಬಂದಿಗೆ ತರಾಟೆಗೆಗೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಬಲ್ಕಿಶ್ ಬಾನು, ಪೂರ್ವ ವಲಯ ಐಜಿಪಿ ರಮೇಶ್ ಬಾನೋತ್, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸೇರಿದಂತೆ ಹಲವರು ಇದ್ದರು.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…