ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಹೊಸನಗರ: ಅತಿ ಶೀಘ್ರದಲ್ಲೇ ಪಂಚಾಯತಿ ಚುನಾವಣೆಗಳು ಘೋಷಣೆಯಾಗುವ ಕಾಲ ಸನ್ನಿಹಿತವಾದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ರಾಜ್ಯಾಧ್ಯಕ್ಷ , ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲು ಕರೆ ನೀಡಿದ್ದು ಆ ಮೂಲಕ ರಾಜ್ಯಾದ್ಯಂತ ಸಂಘಟನೆಗೆ ಪಕ್ಷ ಮುಂದಾಗಿದ್ದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ರಾಮಕೃಷ್ಣ ತಿಳಿಸಿದರು.

ಬುಧವಾರ ಪಟ್ಟಣದ ಶೀತಲ್ ಹೋಟಲ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪಕ್ಷದ ನೂತನ ಕಾರ್ಯಕರ್ತರ ಸದಸ್ಯತ್ವ ನೊಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಇಂದಿನಿಂದಲೇ ಪಂಚಾಯತಿ ಚುನಾವಣೆ ಎದುರಿಸಲು ಕಾರ್ಯಕರ್ತರು ತಯಾರಿ ನಡೆಸಲಿ ಎಂದರು.

ರಾಜಕಾರಣದಲ್ಲಿ ಏರಿಳಿತಗಳು ಸಾಮಾನ್ಯ. ಇದರಿಂದ ಪಕ್ಷದ ಕಾರ್ಯಕರ್ತರು ಎಂದೂ ವಿಚಲಿತರಾಗಬಾರದು. ಈ ಬಾರಿ ಹೆಚ್ಡಿಕೆಗೆ ಕೇಂದ್ರದಲ್ಲಿ ಪ್ರಮುಖ ಸಚಿವ ಸ್ಥಾನ ದೊರೆತಿದೆ. ಇದರಿಂದ ಜೆಡಿಎಸ್ ಪಕ್ಷ ಸಂಘಟನೆಗೆ ಸಹಕಾರಿ ಆಗಲಿದ್ದು, ಕಾರ್ಯಕರ್ತರು, ಮುಖಂಡರು ಅವರ ಬೆಂಬಲಕ್ಕೆ ಸದಾ ನಿಲುವಂತೆ ಅವರು ಕರೆ ನೀಡಿದರು.

ಪಕ್ಷದ ತಾಲೂಕು ಮಾಜಿ ಅಧ್ಯಕ್ಷ ಎಂ.ವಿ.ಜಯರಾಂ ಮಾತನಾಡಿ, ಕೋಮುವಾದಿಗಳನ್ನು ಸದಸ್ಯತ್ವದಿಂದ ದೂರವೇ ಇಡಬೇಕು. ಜನರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸುವಂತ ಹಾಗು ಸಮಾಜವಾದಿ ತಳಹದಿ ಅರಿತುಕೊಂಡ ಯುವಕರಿಗೆ ಸದಸ್ಯತ್ವದಲ್ಲಿ ಹೆಚ್ಚು ಮಾನ್ಯತೆ ನೀಡಬೇಕು. ಅವಕಾಶವಾದಿಗಳಿಗೆ ಪಕ್ಷದಲ್ಲಿ ಎಂದೂ ಮಣೆ ಹಾಕಬಾರದಾಗಿ ತಿಳಿಸಿದರು.


ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮಾತನಾಡಿ, ವಿಧಾನಸಭೆಗೆ ಮಧ್ಯಾಂತರ ಚುನಾವಣೆ ನಡೆಯುವ ಸಾಧ್ಯತೆ ಹೆಚ್ಚಾಗಿ ಕಂಡು ಬರುತ್ತಿದ್ದು, ಪಕ್ಷದ ಹಿರಿಯ ಸದಸ್ಯರಿಗೆ ಗೌರವ ಕೊಡುವ ಸಂಪ್ರದಾಯವನ್ನು ನೂತನ ಕಾರ್ಯಕರ್ತರು ಬೆಳಸಿಕೊಂಡಾಗ ಮಾತ್ರವೇ ಸಂಘಟನೆ ಸದೃಡತೆ ಕಾಣಲು ಸಾಧ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.


ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್ ಮಾತನಾಡಿ, ಮುಂಬರುವ ದಿನಗಳಲ್ಲಿ ರಾಜ್ಯ ಸರ್ಕಾರದ ಅಧಿಕಾರದ ಚುಕ್ಕಾಣಿ ಹಿಡಿಯಲು ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆಗಳ ಫಲಿತಾಂಶ ಪಕ್ಷದ ಮೇಲೆ ಗಂಭೀರ ಪರಿಣಾಮ ಬೀರಲಿದ್ದು, ಹಿರಿಯ ಮುಖಂಡರ ಸಲಹೆ, ಮಾರ್ಗದರ್ಶನದಲ್ಲಿ ಹೋಬಳಿ ಮಟ್ಟದಲ್ಲಿ ಪಕ್ಷದ ನೂತನ ಸಮಿತಿ ರಚನೆಗೆ ಮುಂದಾಗಿ ಎಂಬ ಸಲಹೆ ನೀಡಿದರು.

ಈ ವೇಳೆ ಪಕ್ಷದ ಅಲ್ಪಸಂಖ್ಯಾತ ಘಟಕದ ತಾಲೂಕು ನೂತನ ಅಧ್ಯಕ್ಷರಾಗಿ ಫಾರೂಕ್ ಹಾಗು ಯುವ ಘಟಕದ ತಾಲೂಕು ಅಧ್ಯಕ್ಷ ರಾಗಿ ಸಂದೀಪ್ ನೇಮಕಗೊಂಡರು.

ಇದಕ್ಕೂ ಮೊದಲು ಇತ್ತೀಚಿಗೆ ನಿಧನರಾದ ಪಕ್ಷದ ಹಿರಿಯ ಕಾರ್ಯಕರ್ತ ಹೆಚ್.ಆರ್. ಪ್ರಕಾಶ್ ಹಾಗು ಪಿಕಾರ್ಡ್ ಬ್ಯಾಂಕ್ ಮಾಜಿ ನಿರ್ದೇಶಕ, ತಳಲೆ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಮಳವಳ್ಳಿ ಗೋಪಾಲ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಸಭೆಯಲ್ಲಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಜಿ.ಎಸ್. ವರದರಾಜ್, ಕಾರ್ಯದರ್ಶಿ ನಾಗೇಶ್, ತಾಲೂಕು ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್, ಪ್ರಮುಖರಾದ ರಮಾನಂದ ಮುಡಬಾಗಿಲು,ಜಯನಗರ ಷಣ್ಮುಖ, ವಾಸಪ್ಪಗೌಡ, ಕಲ್ಲೂರು ಈರಣ್ಣ,ಪ.ಪಂ.ಮಾಜಿ ಅಧ್ಯಕ್ಷ ಚಂದ್ರಣ್ಣ, ತಾಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷೆ ಸುಮತಿ ಪೂಜಾರ್, ಅರಳಿಕೊಪ್ಪ ಗಣಪತಿ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

2 hours ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

8 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago