ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಕಾರ್ಯಕ್ರಮ: ಎಂ ಎನ್ ಸುಧಾಕರ್.

ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಕಾರ್ಯಕ್ರಮ: ಎಂ ಎನ್ ಸುಧಾಕರ್

ಹೊಸನಗರ: ಯಾವುದೇ ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಒಂದು ಒಳ್ಳೆಯ ಕಾರ್ಯಕ್ರಮವಾಗಿದೆ ಈ ನಿಟ್ಟಿನಲ್ಲಿ ಹೊಸನಗರ ಜಿಮ್ಮಿ ಜಾರ್ಜ್ ವಾಲಿಬಾಲ್ ಸಂಸ್ಥೆ ರಾಷ್ಟ್ರೀಯ ತರಬೇತುದಾರರಾದ ದಿವಂಗತ ಜಾನ್ ವಿಲ್ಸನ್ ಗೋನ್ ಸಾಲ್ವಿಸ್ ಅವರು ಸ್ಮರಣಾರ್ಥ ಈ ಒಂದು ವಾಲಿಬಾಲ್ ತರಬೇತಿ ಶಿಬಿರವನ್ನ ಹಮ್ಮಿಕೊಳ್ಳಲಾಗಿದೆ ಎಂದು ಜಿಮ್ಮಿ ಜಾರ್ಜ್ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷರಾದ ಎಂ ಎನ್ ಸುಧಾಕರ್ ತಿಳಿಸಿದರು.


ಉಚಿತ ವಾಲಿಬಾಲ್ ತರಬೇತಿ ಶಿಬಿರಕ್ಕೆ ಚಾಲನೆಯನ್ನು ನೀಡಿದ ಬಳಿಕ ಮಾತನಾಡಿದ ಅವರು ಬಹಳಷ್ಟು ವರ್ಷಗಳಿಂದ ಹೊಸನಗರ ಜಿಮ್ಮಿ ಜಾರ್ಜ್ ವಾಲಿಬಾಲ್ ಸಂಸ್ಥೆ ಇಂತಹ ಹಲವಾರು ಕ್ರೀಡಾಪಟುಗಳಿಗೆ ಪೂರಕವಾಗುವಂತಹ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಲೇ ಬಂದಿದೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಿ ಯಶಸ್ವಿ ಆದಂತಹ ಈ ಸಂಸ್ಥೆ ಇದರ ಪದಾಧಿಕಾರಿಗಳು ಸದಸ್ಯರು ಹಾಗೂ ಹಲವು ದಾನಿಗಳ ಸಹಕಾರದಿಂದ ಇಂತಹ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದೆ.


ಪೋಷಕರು ಸಹ ಶಿಕ್ಷಣಕ್ಕೆ ಎಷ್ಟು ಆದ್ಯತೆಯನ್ನು ನೀಡುತ್ತಾರೆ ಕ್ರೀಡೆಗೂ ಸಹ ಅಷ್ಟೇ ಆದ್ಯತೆಯನ್ನು ನೀಡಬೇಕು ದೇಶದ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿರುವವರಲ್ಲಿ ಕ್ರೀಡಾಪಟುಗಳು ಬಹಳಷ್ಟು ಇದ್ದಾರೆ ಇದನ್ನು ಪೋಷಕರು ಮನಗೊಳ್ಳಬೇಕು. ಈ ನಿಟ್ಟಿನಲ್ಲಿ ಸಂಸ್ಥೆ ಪ್ರತಿ ವರ್ಷವೂ ಇಂತಹದೊಂದು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.


ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ರಶ್ಮಿ ಹೆಚ್, ಜಿಮ್ಮಿ ಜಾರ್ಜ್ ಸಂಸ್ಥೆಯ ಮಾಜಿ ಅಧ್ಯಕ್ಷ ಇಲಿಯಾಸ್, ಎಂಪಿ ಸುರೇಶ್, ಪಟ್ಟಣ ಪಂಚಾಯಿತಿ ಸದಸ್ಯ ಗುರುರಾಜ್, ನಾಗೇಶ್, ಉಷಾ ಗೋನ್ ಸಾಲ್ವಿಸ್ ಮುಂತಾದವರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

17 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

17 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

19 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago