ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಕಾರ್ಯಕ್ರಮ: ಎಂ ಎನ್ ಸುಧಾಕರ್
ಹೊಸನಗರ: ಯಾವುದೇ ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಒಂದು ಒಳ್ಳೆಯ ಕಾರ್ಯಕ್ರಮವಾಗಿದೆ ಈ ನಿಟ್ಟಿನಲ್ಲಿ ಹೊಸನಗರ ಜಿಮ್ಮಿ ಜಾರ್ಜ್ ವಾಲಿಬಾಲ್ ಸಂಸ್ಥೆ ರಾಷ್ಟ್ರೀಯ ತರಬೇತುದಾರರಾದ ದಿವಂಗತ ಜಾನ್ ವಿಲ್ಸನ್ ಗೋನ್ ಸಾಲ್ವಿಸ್ ಅವರು ಸ್ಮರಣಾರ್ಥ ಈ ಒಂದು ವಾಲಿಬಾಲ್ ತರಬೇತಿ ಶಿಬಿರವನ್ನ ಹಮ್ಮಿಕೊಳ್ಳಲಾಗಿದೆ ಎಂದು ಜಿಮ್ಮಿ ಜಾರ್ಜ್ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷರಾದ ಎಂ ಎನ್ ಸುಧಾಕರ್ ತಿಳಿಸಿದರು.
ಉಚಿತ ವಾಲಿಬಾಲ್ ತರಬೇತಿ ಶಿಬಿರಕ್ಕೆ ಚಾಲನೆಯನ್ನು ನೀಡಿದ ಬಳಿಕ ಮಾತನಾಡಿದ ಅವರು ಬಹಳಷ್ಟು ವರ್ಷಗಳಿಂದ ಹೊಸನಗರ ಜಿಮ್ಮಿ ಜಾರ್ಜ್ ವಾಲಿಬಾಲ್ ಸಂಸ್ಥೆ ಇಂತಹ ಹಲವಾರು ಕ್ರೀಡಾಪಟುಗಳಿಗೆ ಪೂರಕವಾಗುವಂತಹ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಲೇ ಬಂದಿದೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಿ ಯಶಸ್ವಿ ಆದಂತಹ ಈ ಸಂಸ್ಥೆ ಇದರ ಪದಾಧಿಕಾರಿಗಳು ಸದಸ್ಯರು ಹಾಗೂ ಹಲವು ದಾನಿಗಳ ಸಹಕಾರದಿಂದ ಇಂತಹ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದೆ.
ಪೋಷಕರು ಸಹ ಶಿಕ್ಷಣಕ್ಕೆ ಎಷ್ಟು ಆದ್ಯತೆಯನ್ನು ನೀಡುತ್ತಾರೆ ಕ್ರೀಡೆಗೂ ಸಹ ಅಷ್ಟೇ ಆದ್ಯತೆಯನ್ನು ನೀಡಬೇಕು ದೇಶದ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿರುವವರಲ್ಲಿ ಕ್ರೀಡಾಪಟುಗಳು ಬಹಳಷ್ಟು ಇದ್ದಾರೆ ಇದನ್ನು ಪೋಷಕರು ಮನಗೊಳ್ಳಬೇಕು. ಈ ನಿಟ್ಟಿನಲ್ಲಿ ಸಂಸ್ಥೆ ಪ್ರತಿ ವರ್ಷವೂ ಇಂತಹದೊಂದು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ರಶ್ಮಿ ಹೆಚ್, ಜಿಮ್ಮಿ ಜಾರ್ಜ್ ಸಂಸ್ಥೆಯ ಮಾಜಿ ಅಧ್ಯಕ್ಷ ಇಲಿಯಾಸ್, ಎಂಪಿ ಸುರೇಶ್, ಪಟ್ಟಣ ಪಂಚಾಯಿತಿ ಸದಸ್ಯ ಗುರುರಾಜ್, ನಾಗೇಶ್, ಉಷಾ ಗೋನ್ ಸಾಲ್ವಿಸ್ ಮುಂತಾದವರು ಉಪಸ್ಥಿತರಿದ್ದರು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…