Breaking
12 Jan 2026, Mon

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ

ನ.28 ,29 ಮತ್ತು 30 ರಂದು ಅದ್ದೂರಿ ಸಿದ್ದತೆ | ಕೆಸರುಗದ್ದೆ ಓಟದ ಸ್ಪರ್ಧೆ , ಬಿಜೂ ಸ್ಮರಣಾರ್ಥ ವಾಲಿಬಾಲ್ ಪಂದ್ಯಾವಳಿ , ಪಟ್ಲ ಸತೀಶ್ ನೇತ್ರತ್ವದಲ್ಲಿ ಯಕ್ಷಗಾನ

ರಿಪ್ಪನ್‌ಪೇಟೆ : 31 ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 69ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಪಿ. ಸುಧೀರ್ ಆಯ್ಕೆಯಾಗಿದ್ದಾರೆ.

ಕಳೆದ ಸಾಲಿನ ಅಧ್ಯಕ್ಷರಾದ ಲೀಲಾ ಉಮಾಶಂಕರ್ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಇತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಕಲಾ ಕೌಸ್ತುಭ ಕನ್ನಡ ಸಂಘ 31ನೇ ವರ್ಷದ ವಾರ್ಷಿಕೋತ್ಸವ ಮತ್ತು 69ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಬರುವ ನವೆಂಬರ್ 28 ರಿಂದ 30 ರವರೆಗೆ ಮೂರು ದಿನಗಳ ಕಾಲ ಅದ್ದೂರಿಯಾಗಿ ಆಚರಿಸುವ ಬಗ್ಗೆ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.

ಕಲಾ ಕೌಸ್ತುಭ ಕನ್ನಡ ಸಂಘದ ನೂತನ ಅಧ್ಯಕ್ಷ ರವೀಂದ್ರ ಕೆರೆಹಳ್ಳಿ ಮತ್ತು ಪ್ರಧಾನ ಕಾರ್ಯದರ್ಶಿ ಪಿ.ಸುಧೀರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ನವೆಂಬರ್ 28 ರಂದು ಕನ್ನಡ ತಾಯಿ ಭುವನೇಶ್ವರಿಯ ಭವ್ಯ ಮೆರವಣಿಗೆ ಹೆಸರಾಂತ ಕಲಾತಂಡಗಳ ಮೆರಗಿನನೊಂದಿಗೆ ಶಾಲಾ-ಕಾಲೇಜ್ ವಿದ್ಯಾರ್ಥಿಗಳೊಂದಿಗೆ ನಡೆಯಲಿದೆ. ನಂತರ ಕನ್ನಡ ಧ್ವಜಾರೋಹಣ ಹಾಗೂ ವಿವಿಧ ಸ್ಪರ್ಧಾ ಕಾರ್ಯಕ್ರಮ ಜರುಗಲಿದ್ದು ಸಂಜೆ 8.30ಕ್ಕೆ ಪಟ್ಲ ಸತೀಶ್ ನೇತೃತ್ವದಲ್ಲಿ ಕಾಲಮಿತಿ ಯಕ್ಷಗಾನ ಪ್ರದರ್ಶನ ಜರುಗಲಿದೆ ಎಂದರು.

ನ. 28 ರಂದು ಕೆಸರುಗದ್ದೆ ಓಟದ ಸ್ಪರ್ಧೆ, ಮಹಿಳೆಯರಿಗೆ ಹಗ್ಗ ಜಗ್ಗಾಟ, ರಾತ್ರಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ನ. 30 ರಂದು ಇತ್ತೀಚೆಗೆ ಅಕಾಲಿಕವಾಗಿ ನಿಧನ ಹೊಂದಿದ ಹಿರಿಯ ವಾಲಿಬಾಲ್ ಕ್ರೀಡಾಪಟು ಬಿಜು ಮಾರ್ಕೊಸ್ ಸ್ಮರಣಾರ್ಥ ಹೊಸನಗರ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿ ಹಾಗೂ ವಿವಿಧ ಕ್ರೀಡಾ ಸ್ಪರ್ಧೆಗಳು ಮತ್ತು ರಾತ್ರಿ ಸಮಾರೋಪ ಸಮಾರಂಭ ನಂತರ ಮಂಗಳೂರಿನ ಅರೆಹೊಳೆ ಪ್ರತಿಷ್ಠಾನದವರಿಂದ ನೃತ್ಯ ವೈಭವ ಕಾರ್ಯಕ್ರಮ ಜರುಗಲಿದ್ದು ಸಕಲ ಕನ್ನಾಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಸಹಕಾರಿಯಾಗುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಮುಖಂಡರಾದ ಎಂ.ಬಿ.ಮಂಜುನಾಥ, ಎಂ.ಸುರೇಶ್‌ಸಿಂಗ್, ಪದ್ಮಾ ಸುರೇಶ್, ರಾಮಚಂದ್ರ, ರಾಘವೇಂದ್ರ ಆರ್ಟಿಸ್ಟಿ, ಶೈಲಾ ಆರ್.ಪ್ರಭು, ಸೀತಾರಾಜು, ರೇಖಾ ರವಿ, ಪಿ.ಜೆ.ವರ್ಗೀಸ್, ಇನ್ನಿತರರು ಇದ್ದರು.

31 ನೇ ವರ್ಷದ ಕಲಾ ಕೌಸ್ತುಭ ಕನ್ನಡ ಸಂಘದ ಪಧಾಧಿಕಾರಿಗಳು ;

ಲೀಲಾ ಉಮಾಶಂಕರ್ (ಗೌರವಾಧ್ಯಕ್ಷರು),

ರವೀಂದ್ರ ಕೆರೆಹಳ್ಳಿ (ಅಧ್ಯಕ್ಷ)

ಮುರುಳಿಧರ ಕೆರೆಹಳ್ಳಿ, ರಾಮಚಂದ್ರ ಬಳೆಗಾರ್, ರಾಘವೇಂದ್ರ , ಅಶ್ವಿನಿ ರವಿಶಂಕರ್, ಡಾ.ಶಿವಾಜಿರಾವ್, ಶೈಲಾ ಆರ್.ಪ್ರಭು, ಎಸ್.ದಾನಪ್ಪ (ಉಪಾಧ್ಯಕ್ಷರು),

ಪಿ.ಸುಧೀರ್ (ಪ್ರಧಾನ ಕಾರ್ಯದರ್ಶಿ),

ಪ್ರವೀಣ್ ಆಚಾರ್, ಲಕ್ಷ್ಮಿ ಶ್ರೀನಿವಾಸ್ ಆಚಾರ್, ಆಶಾ ಬಸವರಾಜ್, ಗೀತಾ ಅಣ್ಣಪ್ಪ, ಸೀತಮ್ಮ (ಕಾರ್ಯದರ್ಶಿ),

ಸಂದೀಪ್‌ಶೆಟ್ಟಿ, ಶ್ರೀನಿವಾಸ್ (ಗ್ಯಾರೇಜ್), ರವಿ ಆಚಾರ್, ರಾಕೇಶ್, ಸೂರ್ಯಗೌಡ, ರಾಘವೇಂದ್ರ ಎಸ್.ಎಂ, ರಾಘವೇಂದ್ರ (ಸಹಕಾರ್ಯದರ್ಶಿ),

ಗೀತಾ ಕರಿಬಸಪ್ಪ, ಪದ್ಮಕುಮಾರ್ (ಖಜಾಂಚಿ),

ಗಣೇಶ ಕುಕ್ಕಳಲೇ, ರಾಘವೇಂದ್ರ ಚಿಪ್ಳಿ, ರೇಖಾರವಿ, ನವೀನ್ (ಸಂಘಟನಾ ಕಾರ್ಯದರ್ಶಿ),

ಭೀಮರಾಜ್, ವರ್ಗೀಶ್ ಪಿ.ಜೆ. (ಕ್ರೀಡಾ ಕಾರ್ಯದರ್ಶಿ)

ಕೆ.ಎಂ.ಬಸವರಾಜ್, ರಫಿ ರಿಪ್ಪನ್‌ಪೇಟೆ, ಸಬಾಸ್ಟೀನ್ ಮ್ಯಾಥ್ಯೂಸ್ (ಪ್ರಚಾರ ಸಮಿತಿ)

ಸಲಹಾ ಸಮಿತಿ ಸದಸ್ಯರು ;

ಟಿ.ಆರ್.ಕೃಷ್ಣಪ್ಪ, ಎಂ.ಸುರೇಶ್‌ಸಿಂಗ್, ಎಂ.ಬಿ.ಮಂಜುನಾಥ, ಆರ್.ರಾಘವೇಂದ್ರ, ಪದ್ಮಾ ಸುರೇಶ್, ಉಮಾ ಸುರೇಶ್,
ಎನ್.ಸತೀಶ್, ಪರಶುರಾಮ, ಸಿ.ಚಂದ್ರುಬಾಬು, ಅರುಣ್ ಕಾಳಮುಖಿ, ನರಸಿಂಹ, ಹಿರಿಯಣ್ಣ ಭಂಡಾರಿ, ಎನ್.ವರ್ತೇಶ್, ಪ್ರವೀಣ್, ಸುಧೀಂದ್ರ ಪೂಜಾರಿ, ಲಕ್ಷ್ಮಣ ಆಟೋ, ನಿರೂಪ್ ಕುಮಾರ್

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version