ರಿಪ್ಪನ್ ಪೇಟೆಯಲ್ಲಿ ನ.01ಕ್ಕೆ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ
ರಿಪ್ಪನ್ಪೇಟೆ;- ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ದಿ.ಪುನೀತ್ರಾಜ್ ಆಭಿಮಾನಿ ಬಳಗದ 4 ನೇ ವರ್ಷದ ವಾರ್ಷೀಕೋತ್ಸವ ಮತ್ತು ನವಂಬರ್ 01 ರಂದು ಕನ್ನಡ ರಾಜ್ಯೋತ್ಸವವನ್ನು ಈ ಭಾರಿ ಆದ್ದೂರಿಯಾಗಿ ಆಚರಿಸುವ ಬಗ್ಗೆ ನಿರ್ಧರಿಸಲಾಗಿದ್ದು ಅದರನ್ವಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಇದರೊಂದಿಗೆ ದಿ.ಪುನೀತ್ರಾಜ್ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಸಿದ್ದಿವಿನಾಯಕ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಆಧ್ಯಕ್ಷರಾದ ಧನಲಕ್ಷ್ಮಿ ಗಂಗಾಧರ್ ಮತ್ತು ಆರ್.ಎ.ಚಾಬುಸಾಬ್ ಹಾಗೂ ಮೆಣಸೆ ಆನಂದ್ ಜಂಟಿ ಸುದ್ದಿಗೋಷ್ಠಿ ಯಲ್ಲಿ ತಿಳಿಸಿದರು.
ರಿಪ್ಪನ್ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಆಕ್ಟೋಬರ್ 31 ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ಮತ್ತು ಶಾಲಾ ಮಕ್ಕಳಿಗಾಗಿ ಆಟೋಟ ಸ್ಫರ್ಧೆಗಳನ್ನು ಮತ್ತು ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ.ಆರತಿ ತಟ್ಟೆ ಅಲಂಕಾರ ಹಾಗೂ ಸಂಗೀತಾ ಕುರ್ಚಿ ನಂತರ ಮಧ್ಯಾಹ್ನ 02 ಗಂಟೆಗೆ ಥ್ರೋಬಾಲ್ ಮತ್ತು ವಾಲಿಬಾಲ್ ಪಂದ್ಯಾವಳಿ ಪುರುಷರಿಗಾಗಿ ವಾಲಿಬಾಲ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದೆ.
ನವಂಬರ್ 01 ರಂದು ಬುಧವಾರ ಬೆಳಗ್ಗೆ 09 ಗಂಟೆಗೆ ವಿವಿಧ ಮಹಿಳಾ ಸಂಘದವರಿಂದ ಪೂರ್ಣ ಕುಂಭ ಸ್ವಾಗತದೊಂದಿಗೆ ಶಾಲಾ ಮಕ್ಕಳ ವಿವಿಧ ವೇಷ ಭೂಷಣದೊಂದಿಗೆ ಹೆಸರಾಂತ ಕಲಾ ತಂಡಗಳ ಕಲಾ ಮೆರಗಿನೊಂದಿಗೆ `ತಾಯಿ ಭುವನೇಶ್ವರಿಯ ಅಲಂಕೃತ ಭಾವಚಿತ್ರ ಮೆರವಣಿಗೆ’ 10 ಗಂಟೆಗೆ ಕನ್ನಡ ದ್ವಜಾರೋಹಣ,11 ಗಂಟೆಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಜರುಗಲಿದೆ.
ರಾಜ್ಯೋತ್ಸವದ ಆಂಗವಾಗಿ ಶಾಲಾ ಕಾಲೇಜ್ ವಿದ್ಯಾಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಸಂಜೆ ಸಮಾರೋಪ ಸಮಾರಂಭ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ನಂತರ ರಾತ್ರಿ 07 ಗಂಟೆಗೆ ಝೀ ಕನ್ನಡ ವಾಹಿನಿಯ ಸರಿಗಮಪ ಖ್ಯಾತಿಯ ಕು.ದಿಯಾ ಹೆಗಡೆ ,ಪ್ರಖ್ಯಾತ ಗಾಯನ ಕಲಾವಿದರಾದ ಮೆಹಬೂಬ್ಸಾಬ್,ಎದೆ ತುಂಬಿ ಹಾಡುವೆನು ಖ್ಯಾತಿಯ ಸಾನ್ವಿ ಜಿ.ಭಟ್ ಹಾಗೂ ನಾಗರಾಜ್ ತೊಂಬ್ರಿ ಇವರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಕಸ್ತೂರಿ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ನಿರ್ಮಲ ಹರೀಶ್, ಮಹಮ್ಮದ್ ಹುಸೇನ್ ,ಮುಖಂಡರಾದ ಜಿ ಎಸ್ ವರದರಾಜ್ ,ಗಣಪತಿ ಗವಟೂರು, ರಮೇಶ್ ಫ್ಯಾನ್ಸಿ,ಶ್ರೀಧರ್ , ಯೋಗೇಂದ್ರಪ್ಪ ಗೌಡ, ಆರ್.ಡಿ.ಶೀಲಾ,ಶ್ವೇತಾ ನಿಶಾಂತ್ , ಸೀಮಾ ಭಾಸ್ಕರ್ ಇನ್ನಿತರರು ಹಾಜರಿದ್ದರು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…