ಬಟ್ಟೆಮಲ್ಲಪ್ಪ ಸಮೀಪದಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು

RIPPONPETE | ಇಲ್ಲಿನ ಬಟ್ಟೆಮಲ್ಲಪ್ಪ ಸಮೀಪದ ಹಲುಸಾಳೆ ಮಳವಳ್ಳಿ ಗ್ರಾಮದ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ಮಳವಳ್ಳಿ ಗ್ರಾಮದ ದಿನೇಶ್ ಎಂಬುವವರು ಇಂದು ಬೆಳಿಗ್ಗೆ ಹಾಲು ತರಲು ತೆರಳುತಿದ್ದ ವೇಳೆಯಲ್ಲಿ ಗ್ರಾಮದ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ.ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದೆ.

ಚಿರತೆ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಿಗೆ ಭಯ ಮೂಡಿಸಿದ್ದು ಸಾಕು ಪ್ರಾಣಿಗಳು ಹಾಗೂ ದನಕರುಗಳಿಗೆ ಕಂಟಕವಾಗುವ ಭೀತಿ ಎದುರಾಗಿದೆ.ಚಿರತೆ ಕೆಲ ಗ್ರಾಮಸ್ಥರಿಗೆ ಕಂಡಿದೆಯಾದರೂ ಅರಣ್ಯ ಇಲಾಖೆ ಸಿಬ್ಬಂದಿಗೆ ಜಾಡು ಹಿಡಿಯಲು ಅಸಾಧ್ಯವಾದ ಕಾರಣ ಗ್ರಾಮಸ್ಥರೇ ಚಿರತೆ ಹೆಜ್ಜೆ ಫೊಟೋ‌ ತೆಗೆದು ವಲಯ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ದಯವಿಟ್ಟು ಚಿರತೆಯನ್ನು ಸೆರೆ ಹಿಡಿಯಿರಿ ಅಥವಾ ಓಡಿಸಿ ಎಂದು ಅರಣ್ಯಾಧಿಕಾರಿಗಳಲ್ಲಿ ಹಲುಸಾಲೆ ಮಳವಳ್ಳಿ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಮಸ್ಕಾರ, ನಾನು ರಫಿ ರಿಪ್ಪನ್‌ಪೇಟೆ. ​'ಪೋಸ್ಟ್‌ಮ್ಯಾನ್ ನ್ಯೂಸ್' ಮಾಧ್ಯಮದ ಹಿಂದಿರುವ ಓರ್ವ ಅಪ್ಪಟ ಸುದ್ದಿಪ್ರೇಮಿ ಹಾಗೂ ಪತ್ರಕರ್ತ. "ನಮ್ಮೂರ ಸುದ್ದಿಗಳು ಜಗತ್ತಿಗೆ ತಲುಪಬೇಕು" ಎಂಬ ಆರು ವರ್ಷಗಳ ಕನಸಿನ ಕೂಸೇ ಈ ನಮ್ಮ ಪೋಸ್ಟ್‌ಮ್ಯಾನ್ ನ್ಯೂಸ್. ​ಸ್ಥಳೀಯ ಪತ್ರಿಕೆಗಳಿಂದ ಹಿಡಿದು ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೂ ಮಾಧ್ಯಮದ ನಾನಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದು. ಆದರೆ, ಈ ಪಯಣದಲ್ಲಿ ನನಗೊಂದು ಕೊರತೆ ಸದಾ ಕಾಡುತ್ತಿತ್ತು; ಅದೇನೆಂದರೆ, 'ನಿಜವಾದ ಸ್ಥಳೀಯ ಧ್ವನಿಗೆ ಅಲ್ಲಿ ಸೂಕ್ತ ವೇದಿಕೆ ಇರಲಿಲ್ಲ'. ಆ ಶೂನ್ಯವನ್ನು ತುಂಬಲು ಹುಟ್ಟಿಕೊಂಡ ಪರ್ಯಾಯ ವೇದಿಕೆಯೇ “ಪೋಸ್ಟ್‌ಮ್ಯಾನ್ ನ್ಯೂಸ್.” ​ಇಲ್ಲಿ 'ಸುದ್ದಿ' ಎಂದರೆ ಕೇವಲ ಸುದ್ದಿ ಮಾತ್ರ. ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಅತ್ಯಂತ ಸ್ಪಷ್ಟ: "ಸುದ್ದಿಯನ್ನು ಪ್ರಾಮಾಣಿಕವಾಗಿ ಹೇಳಬೇಕು, ತೀರ್ಪು ಕೊಡುವ ಕೆಲಸ ನಮಗಲ್ಲ." ಕೆಲವೊಮ್ಮೆ ನಮ್ಮ ವರದಿಗಳಿಗೆ ಬರುವ ಪ್ರತಿಕ್ರಿಯೆಗಳು ಬೇರೆಯದೇ ಬಣ್ಣ ಪಡೆಯಬಹುದು, ಆದರೆ ಅದಕ್ಕೆ ನನ್ನ ಏಕೈಕ ಉತ್ತರ ಕೇವಲ ನನ್ನ ಕೆಲಸದ ಮೂಲಕ ಮಾತ್ರ. ​'ಪೋಸ್ಟ್‌ಮ್ಯಾನ್ ನ್ಯೂಸ್' ಇಂದು ಕೇವಲ ಒಂದು ಸುದ್ದಿ ಪುಟವಾಗಿ ಉಳಿದಿಲ್ಲ, ಅದೊಂದು ಜಾಗೃತಿಯ ಚಳವಳಿಯಾಗಿ ರೂಪುಗೊಳ್ಳುತ್ತಿದೆ. ಕೇವಲ ವರದಿ ಮಾಡುವುದಷ್ಟೇ ನಮ್ಮ ಉದ್ದೇಶವಲ್ಲ; ನಮ್ಮೂರಿನ ಘಟನೆಗಳು, ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು, ಜ್ವಲಂತ ಸಮಸ್ಯೆಗಳು ಮತ್ತು ಸಾಧನೆಗಳನ್ನು ಹೊರಲೋಕಕ್ಕೆ ಪರಿಚಯಿಸುವ 'ಸೇತುವೆ'ಯಾಗಬೇಕೆಂಬುದು ನಮ್ಮ ಹೆಬ್ಬಯಕೆ. ಹಣ ಪಡೆದು, ಕಾಸಿಗಾಗಿ ಸುದ್ದಿ ಮಾಡುವ ಅಭ್ಯಾಸವೂ ನಮಗಿಲ್ಲ, ಆ ಹವ್ಯಾಸವೂ ನಮಗಿಲ್ಲ. ಸತ್ಯ ಮತ್ತು ನೈಜತೆಯೇ ನಮ್ಮ ಬಂಡವಾಳ. ​ನಮ್ಮ ಅಂತಿಮ ಗುರಿ ಒಂದೇ — "ಸಣ್ಣ ಊರುಗಳ ಸತ್ಯ ಕಥೆಗಳು, ಅತಿ ದೊಡ್ಡ ಮಟ್ಟದಲ್ಲಿ ಜಗತ್ತಿನ ಕಿವಿಗೆ ತಲುಪಬೇಕು." ​ತಮ್ಮ ಪ್ರೀತಿ ಮತ್ತು ಬೆಂಬಲ ಸದಾ ಹೀಗೆಯೇ ಇರಲಿ. ​ಸ್ನೇಹಪೂರ್ವಕವಾಗಿ, ರಫಿ ರಿಪ್ಪನ್‌ಪೇಟೆ ಸಂಪಾದಕರು, ಪೋಸ್ಟ್‌ಮ್ಯಾನ್ ನ್ಯೂಸ್ 🌐 [www.postmannewskannada.com]

Recent Posts

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…

6 hours ago

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…

7 hours ago

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…

7 hours ago

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…

1 day ago

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…

1 day ago

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

2 days ago