RIPPONPETE | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ

RIPPONPET | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ

ರಿಪ್ಪನ್‌ಪೇಟೆ : ಪಟ್ಟಣದ ಹೆಮ್ಮೆಯ ವಾಲಿಬಾಲ್ ಆಟಗಾರ ಬಿಜೂ ಮಾರ್ಕೋಸ್ (56) ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಹಾಲುಗುಡ್ಡೆ ನಿವಾಸಿಯಾಗಿದ್ದ ಬಿಜೂ ಮಾರ್ಕಸ್ (56) ಅಲ್ಪ ಕಾಲದ ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಹೊಸನಗರ ತಾಲೂಕಿನಾದ್ಯಂತ ಅದೆಷ್ಟೋ ಯುವಕರಿಗೆ ವಾಲಿಬಾಲ್ ಕ್ರೀಡಾಸಕ್ತಿಯನ್ನು ಬೆಳೆಸುವ ಮೂಲಕ ಅನೇಕ ರಾಷ್ಟಮಟ್ಟದ ಕ್ರೀಡಾಪಟುಗಳನ್ನು ತಯಾರಿಸಿದ ಕೀರ್ತಿ ಬಿಜೂ ಮಾರ್ಕಸ್ ಗೆ ಸಲ್ಲುತ್ತದೆ.

ಕೇರಳದ ವಿಶ್ವವಿದ್ಯಾಲಯ ಮಟ್ಟದ ಆಟಗಾರನಾಗಿ ರಾಷ್ಟಮಟ್ಟದಲ್ಲಿ ವಾಲಿಬಾಲ್ ಆಡಿದ್ದ ಬಿಜೂ 1996 -97 ರಲ್ಲಿ ರಿಪ್ಪನ್‌ಪೇಟೆಗೆ ತಮ್ಮ ಕುಟುಂಬದೊಂದಿಗೆ ವಲಸೆ ಬಂದಿದ್ದಾರೆ. ಆ ಸಮಯದಲ್ಲಿ ರಿಪ್ಪನ್‌ಪೇಟೆಯಲ್ಲಿ ರಾಜ್ಯದಲ್ಲಿಯೇ ಉತ್ತಮ ಹೆಸರು ಗಳಿಸಿದ್ದ ವಾಲಿಬಾಲ್ ಕ್ರೀಡಾಪಟುಗಳಿದ್ದು ಬಿಜೂ ಗೆ ಮತ್ತಷ್ಟು ತರಬೇತಿ ನೀಡಿ ಉತ್ತಮವಾಗಿ ಅಣಿಗೊಳಿಸಿದ್ದರು. ಅನಂತರದಲ್ಲಿ ಯೂನಿಯನ್ ಕ್ಲಬ್ ಮೂಲಕ ರಾಜ್ಯಾದ್ಯಂತ ತಮ್ಮ ಆಟವನ್ನು ಪ್ರದರ್ಶಿಸಿ ಜನ ಮೆಚ್ಚುಗೆ ಗಳಿಸಿದ್ದ ಬಿಜೂ ಇನ್ನೂ ನೆನಪು ಮಾತ್ರ…

ಪಂದ್ಯಾವಳಿಗಳಲ್ಲಿ ಎಷ್ಟೇ ಎತ್ತರದವರು ತಡೆ ಹಾಕಲಿ, ಅದನ್ನು ಬೇಧಿಸಿ ಎದುರಾಳಿಯನ್ನು ತಬ್ಬಿಬ್ಬುಗೊಳಿಸುವ ಆಟ ಬಿಜೂ ಮಾರ್ಕಸ್ ನದ್ದು. ಕೌಂಟರ್‌ ಅಟ್ಯಾಕ್‌, ಸೆಕೆಂಡ್‌ ಪಾಸ್‌, ಬ್ಯಾಕ್‌ಲೈನ್‌ಗಳಲ್ಲಿ ಜಿಮ್ಮಿಗೆ ಪಾಸ್‌ ನೀಡಿದರೆ ಮುಗಿದೇ ಹೋಯಿತು ಎದುರಾಳಿ ಕಥೆ. ಆ ಕೈಯಲ್ಲಿ ಅದೇನೋ ಮ್ಯಾಜಿಕ್‌ ಇತ್ತೋ ಏನೋ. ಬ್ಲಾಕ್‌ ಮಾಡಿದರೆ ಟಚ್‌ ಔಟ್‌ನಲ್ಲಿ ಅಂಕ ಕಸಿಯುತ್ತಿದ್ದ ಬಿಜೂ ಓಪನ್‌ ಬಿಟ್ಟರಂತೂ ಅಟ್ಯಾಕ್‌ ಲೈನ್‌ಗೆ ಚೆಂಡನ್ನು ಬಡಿದು ಮೀಸೆ ಮರೆಯಲ್ಲಿ ನಗುತ್ತಿದ್ದ. ಆ ಚಲನೆಯಾದರೂ ಎಂತಹದ್ದು? ಎದುರಾಳಿಗಳು ಈತ ಎಲ್ಲಿಗೆ ಹೊಡೆಯುತ್ತಾನೆಂದು ಬ್ಲಾಕ್‌ಗೆ ತಯಾರಾಗಿರುತ್ತಿದ್ದರೋ ಇವನು ಅದಾಗಲೇ ಚೆಂಡನ್ನು ಎದುರಾಳಿ ಅಂಕಣದೊಳಗೆ ಚಿಮ್ಮಿಸಿಯಾಗುತ್ತಿತ್ತು. ವಾಲಿಬಾಲ್‌ ಯಾವತ್ತೂ ತಂಡವಾಗಿ ಆಡಿದರಷ್ಟೇ ಗೆಲುವು. ಕಾಂಬಿನೇಶನ್‌ ಅನ್ನುವುದು ಅತ್ಯಗತ್ಯ. ಪಾಸರ್‌ ಮತ್ತು ಆಟಗಾರರ ಸಮನ್ವಯತೆ ಇದ್ದರಷ್ಟೇ ಅಂಕ. ಅಂತಹದರಲ್ಲಿ ಈತ ಏಕಾಂಗಿಯಾಗಿ ಪಂದ್ಯಗಳನ್ನು ಗೆಲ್ಲಿಸಿಕೊಡುವ ಅಪ್ರತಿಮ ಆಟಗಾರರಾಗಿದ್ದರು ಬಿಜೂ ಮಾರ್ಕಸ್..

ಅಪ್ರತಿಮ ವಾಲಿಬಾಲ್ ಪಟು ,ಉತ್ತಮ ವ್ಯಕ್ತಿತ್ವದ ,ಅಜಾತ ಶತ್ರು ಬಿಜೂ ಮಾರ್ಕಸ್ ಆತ್ಮಕ್ಕೆ ಶಾಂತಿ ದೊರೆಯಲೆಂದು ಪೋಸ್ಟ್ ಮ್ಯಾನ್ ನ್ಯೂಸ್ ತಂಡ ಪ್ರಾರ್ಥಿಸುತ್ತದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

17 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

17 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

19 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago