ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಸರ್ವರ್ ದೋಷ – ಗ್ರಾಹಕರ ಆಕ್ರೋಶ

ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳ ಮುಂದೆ ಜನಸ್ತೋಮ ಪಡಿತರಕ್ಕಾಗಿ ನಿಂತು ಹೈರಾಣಾಗಿದೆ.ಶುಕ್ರವಾರದಿಂದ ಪಡಿತರ ವಿತರಣೆ ಮಾಡುತ್ತಿದ್ದರೂ, ಎಲ್ಲಾ ಗ್ರಾಹಕರಿಗೆ ಪಡಿತರ ತಲುಪಿಸಲು ಸಾಧ್ಯವಾಗಿಲ್ಲ… ಇದರಿಂದಾಗಿ ಸಾರ್ವಜನಿಕರು ಸಂಬಂಧಿಸಿದವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.ಇದಕ್ಕೆಲ್ಲ ಕಾರಣವಾಗಿದ್ದು ಗ್ರಾಹಕರ ಬೆರಳಚ್ಚು (ಬಯೋಮೆಟ್ರಿಕ್) ಪಡೆಯುವ ಸರ್ವರ್ ಗಳ ದೋಷ , ಇದರಿಂದಾಗಿ ಜನರ ನರಳಾಟ…. ಸರ್ವರ್ ವೈಫಲ್ಯದಿಂದಾಗಿ ಜನರು ನ್ಯಾಯಬೆಲೆ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಲ್ಲುವಂತಾಗಿದೆ…

ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿರುವ ಪುರುಷೋತ್ತಮ್ ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲಿ ಪಡಿತರಕ್ಕಾಗಿ ದೂರದ ಹಳ್ಳಿಗಳಿಂದ ಬಂದಿದ್ದ ವಯೋ ವೃದ್ದರು ,ಬಡವರು , ಶ್ರಮಿಕರು ಪರದಾಡುತ್ತಿರುವ ಸ್ಥಿತಿ ಕಂಡುಬಂದಿದೆ.ಸ್ಥಳಕ್ಕೆ ತೆರಳಿದ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ಅಧಿಕಾರಿಗಳನ್ನು ಫೋನ್ ಮೂಲಕ ಸಂಪರ್ಕಿಸಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಪಡಿತರ ಮಳಿಗೆಗಳಲ್ಲಿ ಇ-ಪಿಒಎಸ್ (ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್) ಯಂತ್ರಗಳ ಕಾರ್ಯಾಚರಣೆಗೆ ಅನುಕೂಲವಾಗುವ ಆನ್‌ಲೈನ್ ವ್ಯವಸ್ಥೆಯಲ್ಲಿನ ಸರ್ವರ್ ದೋಷದಿಂದಾಗಿ ರಾಜ್ಯದಲ್ಲಿ ಸಾರ್ವಜನಿಕ ವಿತರಣೆಯು ಬಿಕ್ಕಟ್ಟಿನಲ್ಲಿ ಮುಳುಗಿದೆ.
ಹಲವು ದಿನಗಳಿಂದ ತೊಂದರೆಯಾಗುತ್ತಿರುವುದರಿಂದ ಕೆಲವು ಕಡೆ ಪಡಿತರ ವಿತರಕರು ತಮ್ಮ ಅಂಗಡಿಯ ಬಾಗಿಲುಗಳನ್ನು ಮುಚ್ಚಿ ಪಡಿತರ ಪೂರೈಕೆಯನ್ನೆ ಸ್ಥಗಿತಗೊಳಿಸಿದ್ದಾರೆ.

ತಾಲೂಕಿನ ಬಹುತೇಕ ಭಾಗಗಳಲ್ಲಿ  ಪಡಿತರ ಚೀಟಿದಾರರು, ತಮ್ಮ ಆಹಾರ ಪದಾರ್ಥಗಳನ್ನು ಪಡೆಯಲು ಅರ್ಧ ಗಂಟೆಗೂ ಹೆಚ್ಚಿನ ಅವಧಿ ಕಾಯುವಂತಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ದಾರರು ತಿಂಗಳ ಪಡಿತರವನ್ನೆ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದರೆ  ಬಯೋಮೆಟ್ರಿಕ್ ಸರ್ವರ್ ದೋಷದಿಂದಾಗಿ ಬಡಜನರು ದುಡಿಮೆಯನ್ನು ಬಿಟ್ಟು ಪಡಿತರಕ್ಕಾಗಿ ಕಾದು ಕೂರುವಂತಾಗಿದೆ.

ಕೆಲವೆಡೆ ಫಲಾನುಭವಿಗಳು ಗಂಟೆಗಳ ಕಾಲ ಪಡಿತರ ಅಂಗಡಿಗಳ ಹೊರಗೆ ಕಾದು ಬರಿಗೈಯಲ್ಲಿ ಹಿಂದಿರುಗಿದ ಘಟನೆ ನಡೆದಿದೆ.  e-PoS ಯಂತ್ರಗಳು ಪ್ರಾರಂಭದಲ್ಲಿ ಆಗಾಗ್ಗೆ ಆಫ್‌ಲೈನ್‌ಗೆ ಹೋಗುತ್ತವೆ ಎಂದು ಪಡಿತರ ವಿತರಕರು ದೂರಿದ್ದಾರೆ. ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸರ್ವರ್ ಸಮಸ್ಯೆ ಬಗೆಹರಿಸುವುದಕ್ಕೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ, ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವ ಬದಲು ನ್ಯಾಯಬೆಲೆ ಅಂಗಡಿಗಳನ್ನೆ ನಡೆಸುವುದು ಕಷ್ಟಕರವಾಗಿದೆ ಎಂದು ಪಡಿತರ ವಿತರಕರು ಅಳಲು ವ್ಯಕ್ತಪಡಿಸಿದ್ದಾರೆ.
ಆಹಾರ ಸರಬರಾಜು ಇಲಾಖೆಯ ಬಾಲಚಂದ್ರ ರವರು ಇಲಾಖೆಯಲ್ಲಿ ದತ್ತಾಂಶ ಕೇಂದ್ರದ ಸೆಂಟ್ರಲ್ ಸರ್ವರ್‌ನಲ್ಲಿನ ದೋಷದಿಂದಾಗಿ ಸಮಸ್ಯೆ ಉಂಟಾಗಿದೆ. ಇದರಿಂದ ವಿವಿಧ ಇಲಾಖೆಗಳ ಕಾರ್ಯನಿರ್ವಹಣೆಗೆ ತೊಂದರೆಯಾಗಿದೆ ಎಂದು ಹೇಳಿದ್ದಾರೆ.

ಸರ್ಕಾರ ಬಯೋಮೆಟ್ರಿಕ್ ಸರ್ವರ್ ದೋಷವನ್ನು ಕೂಡಲೇ ಸರಿಪಡಿಸಿ ಬಡವರು, ಶ್ರಮಿಕರು ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಕಾದು ನಿಲ್ಲುವ ಶಿಕ್ಷೆಯಿಂದ ಮುಕ್ತಿ ನೀಡಬೇಕಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

2 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

15 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

17 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

20 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

20 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

20 hours ago