Breaking
12 Jan 2026, Mon

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಕ್ರಿಕೆಟ್ ಪ್ರೀಮಿಯರ್ ಲೀಗ್ (ಎಸ್.ಪಿ.ಎಲ್ 2024) ಟೂರ್ನಿಯ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸುವ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಹಾಗೂ ಆಹ್ವಾನ ಪತ್ರಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು.

ಶಿವಮೊಗ್ಗ ಟೈಗರ್ಸ್ ತಂಡದಲ್ಲಿ ರಿಪ್ಪನ್‌ಪೇಟೆಯ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾದ ಆಶೀಕ್ ,ವಿನಯ್ ಕುಮಾರ್ ,ಕೋಡೂರಿನ ಸನತ್ ಆಚಾರ್ಯ ಮತ್ತು ಹೊಸನಗರದ ಅವಿನಾಶ್ ಸ್ಥಾನ ಪಡೆದಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಮೊಗ್ಗ ತಂಡದ ಮಾಲಿಕ ಚೇತನ್ ದಾಸರಹಳ್ಳಿ, ಕರ್ನಾಟಕ ರಾಜ್ಯ ಸಾಫ್ಟ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ವತಿಯಿಂದ ನಡೆಸುವ ಕರ್ನಾಟಕ ಸಾಫ್ಟ್ ಬಾಲ್ ಕ್ರಿಕೆಟ್ ಪ್ರೀಮಿಯರ್ ಲೀಗ್ – 2024 ನ. 1ರಂದು ಬೆಂಗಳೂರಿನ ಸೋಲದೇವನಹಳ್ಳಿಯ ಆಚಾರ್ಯ ಮೈದಾನದಲ್ಲಿ‌ ನಡೆಯಲಿದೆ ಎಂದರು.

ಯಾರೆಲ್ಲ ಗಲ್ಲಿ ಕ್ರಿಕೆಟ್ ಆಟಗಾರರು ಹಾಗೂ ಗ್ರಾಮೀಣ ಮಟ್ಟದ ಕ್ರಿಕೆಟ್ ಪ್ರತಿಭೆಗಳಿದ್ದರುಊ ಅವರನ್ನು ಗುರುತಿಸುವ ಮತ್ತು ಒಂದು ಅದ್ಭುತವಾದ ಅವಕಾಶವನ್ನು ಕಲ್ಪಿಸುವ ಪ್ರಯತ್ನವೇ ಈ KSPL 2024 ಆಗಿದೆ.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಟಗಾರರ ಆಯ್ಕೆಯ ಟ್ರಯಲ್ಸ್ ನ್ನು KSSCA ವತಿಯಿಂದಲೆ ನಡೆಸಿ, ಅಲ್ಲಿ ಆಯ್ಕೆಯಾದ 700 ಜನ ಪ್ರತಿಭಾನ್ವಿತ ಯುವ ಕ್ರಿಡಪಟುಗಳನ್ನು ಹರಾಜು ಪ್ರಕ್ರಿಯೆಯ ಮುಖೇನ ರಾಜ್ಯದ 32 ತಂಡಗಳಿಗೆ ಆಟಗಾರರ ಆಯ್ಕೆ ಯನ್ನು ಮಾಡಲಾಯಿತು ಎಂದರು.

Karnataka Cricket Premier League ಇದರಲ್ಲಿ ಶಿವಮೊಗ್ಗ ಟೈಗರ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ 21 ಜನ ಆಟಗಾರರಲ್ಲಿ 17 ಆಟಗಾರರು ಶಿವಮೊಗ್ಗ ಜಿಲ್ಲೆಯವರರಾಗಿದ್ದಾರೆ. ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶವನ್ನು ನೀಡುವ ಪ್ರಯತ್ನ ನಮ್ಮದಾಗಿದೆ ಎಂದರು.

01 ನವೆಂಬರ್ 2024 ಇಂದ 01 ಡಿಸೆಂಬರ್ 2024 ರ ವರೆಗೆ ಒಂದು ತಿಂಗಳ ಕಾಲ ನಡೆಯಲಿದ್ದು, ಎಲ್ಲಾ ಆಟಗಳ ನೇರ ಪ್ರಸಾರವನ್ನು ದೂರ ದರ್ಶನ ಚಂದನದಲ್ಲಿ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಶಿವಮೊಗ್ಗ ತಂಡದ ಪಂದ್ಯ ನ.‌24ರಂದು ಹಾವೇರಿ, 25ರಂದು ಬೆಂಗಳೂರು ಗ್ರಾಮಾಂತರ, 27ರಂದು ಗದಗ್ ತಂಡದ ಜೊತೆ ನಡೆಯಲಿದೆ ಎಂದರು.

ತಂಡದ ಆಟಗಾರರ ಪಟ್ಟಿ :

1. ಬಸವರಾಜು (ಶಿವಮೊಗ್ಗ) – ನಾಯಕ

2. ಸಚಿನ್ (ತೀರ್ಥಹಳ್ಳಿ) – ಉಪ ನಾಯಕ

3. ಎಂ.ಡಿ ಸಿರಾಜ್ (ಬೀದರ್)

4. ಕಿರಣ್ (ಭದ್ರಾವತಿ)

5. ವಿನಯ್ (ರಿಪ್ಪನ್‌ಪೇಟೆ)

6. ಸೈಯದ್ ಖಾಷಿಫ್ (ಶಿವಮೊಗ್ಗ)

7. ಸನತ್ ಆಚಾರ್ಯ (ಕೊಡೂರು)

8. ಆಶಿಕ್ (ರಿಪ್ಪನ್‌ಪೇಟೆ)

9. ಗಂಗಾಧರ (ಶಿವಮೊಗ್ಗ)

10. ತೌಫಿಕ್ (ತೀರ್ಥಹಳ್ಳಿ)

11. ಶ್ರೀನಿವಾಸ್ (ಶಿವಮೊಗ್ಗ)

12. ಪ್ರತಾಪ್ (ಶಿವಮೊಗ್ಗ)

13. ಚೇತನ್ (ಶಿವಮೊಗ್ಗ)

14. ಪ್ರಜ್ವಲ್ ಗಂಗೊಳ್ಳಿ (ಕುಂದಾಪುರ)

15. ನಿಯಾಸ್ (ಭಧ್ರಾವತಿ)

16. ರಾಘವೇಂದ್ರ (ಶಿವಮೊಗ್ಗ)

17. ವಿಕ್ರಮ್ ಗೌಡ (ತೀರ್ಥಹಳ್ಳಿ)

18. ಅವಿನಾಶ್ ಆಚಾರ್ಯ (ಹೊಸನಗರ)

19. ಸ್ವಸ್ತಿಕ್ ನಾಗರಾಜ್ (ಬೆಂಗಳೂರು)

20. ಸುಧಾಕರ್ (ಸೊರಬ)

21. ಉಮೇಶ್ (ತುಮಕೂರು)

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version