ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ
ಆಂಬುಲೆನ್ಸ್ ಡಿಕ್ಕಿಯಾಗಿ ಹೊಸನಗರ ಮೂಲದ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿಲುವಾಗಿಲು ಬಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೊನಲೆ ಗ್ರಾಮದ ಪ್ರವೀಣ್ (30) ಎಂದು ಗುರುತಿಸಲಾಗಿದೆ.
ನಿಲುವಾಗಿಲು ಬಳಿಯಲ್ಲಿ ಬೈಕ್ ಹಾಗೂ ಆಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪ್ರವೀಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸೇರಿದ ಆಂಬುಲೆನ್ಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದ ಪ್ರವೀಣ್ ಹಲವು ವರ್ಷಗಳ ಹಿಂದೆಯೇ ತಂದೆಯನ್ನು ಕಳೆದುಕೊಂಡಿದ್ದು ತಾಯಿ ಕಲ್ಪನಾ ಮತ್ತು ತಂಗಿ ಸೌಮ್ಯ ಜೊತೆ ವಾಸವಿದ್ದನು, ಆದರೆ ಕಳೆದ ವರ್ಷ ಆತನ ತಂಗಿ ಸೌಮ್ಯ ಹೆರಿಗೆ ಸಂಧರ್ಭದಲ್ಲಿ ತೀರಿಕೊಂಡ ನಂತರ ಬೆಂಗಳೂರಿನ ಖಾಸಗಿ ಕಂಪನಿಯ ಕೆಲಸ ಬಿಟ್ಟು ಸೊನಲೆಯಲ್ಲಿ ತಾಯಿಯೊಂದಿಗೆ ಇದ್ದು ತಮ್ಮ ಜಮೀನನ್ನು ನೋಡಿಕೊಂಡಿದ್ದನು.
ಈಗಾಗಲೇ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಕಲ್ಪನಾ ರವರು ಕಳೆದ ವರ್ಷ ತನ್ನ ಮಗಳನ್ನು ಕಳೆದುಕೊಂಡಿದ್ದು , ಈಗ ಮಗನನ್ನು ಕಳೆದುಕೊಂಡು ಅನಾಥವಾಗಿದ್ದಾರೆ!
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್