ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್ಐ ಪ್ರವೀಣ್ ಎಸ್ ಪಿ
ರಿಪ್ಪನ್ಪೇಟೆ : ಪ್ಲಾಸ್ಟಿಕ್ ಬಳಕೆಯಿಂದಾಗಿ ಪರಿಸರ ಸಮತೋಲನ ಕಳೆದುಕೊಂಡು ಅಪಾಯದ ಮಟ್ಟ ತಲುಪಿದೆ. ಶುದ್ಧ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಪ್ಲಾಸ್ಟಿಕ್ ಬಳಕೆ ತ್ಯಜಿಸುವಂತೆ ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು.
ಕೊಪ್ಪ ಸೈಕ್ಲಿಂಗ್ ಕ್ಲಬ್ ನವರು ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಅಭಿಯಾನದಡಿಯಲ್ಲಿ ಹಮ್ಮಿಕೊಂಡಿರುವ ಕೊಪ್ಪ – ಸೈಕಲ್ ಜಾಥಾ ರಿಪ್ಪನ್ಪೇಟೆ ಪಟ್ಟಣಕ್ಕೆ ಆಗಮಿಸುತಿದ್ದಂತೆ ಅವರನ್ನು ಸ್ವಾಗತಿಸಿ ಮಾತನಾಡಿದ ಅವರು ಪ್ಲಾಸ್ಟಿಕ್ ಬದಲಿಗೆ ಪರಿಸರ ಸ್ನೇಹಿ ಕಾಗದ ಆಥವಾ ಬಟ್ಟೆ ಉತ್ಪನ್ನ ಬಳಸುವುದರೊಂದಿಗೆ ಪರಿಸರ ಸಮತೋಲನಕ್ಕೆ ಎಲ್ಲರೂ ಕೈಜೋಡಿಸುವ ಅಗತ್ಯವಿದೆ ಹಾಗೂ ಇಂತಹ ಜಾಥಾಗಳು ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದರು.
ವಿಷಕಾರಿ ಆಗಿರುವ ಪ್ಲಾಸ್ಟಿಕ್ ಮಣ್ಣಿನಲ್ಲಿ ಸೇರಿದರೆ ನೂರಾರು ವರ್ಷ ಕರಗದೆ ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತದೆ. ಭೂಮಿಯಲ್ಲಿ ಸೇರುವುದರಿಂದ ನೀರು ಇಳಿದಂತೆ ಮಾಡುತ್ತದೆ. ಮೂಕ ಪ್ರಾಣಿಗಳು ತಿಂದರೆ ಸಾಯುತ್ತವೆ. ಪ್ಲಾಸ್ಟಿಕ್ ಸುಡುವುದರಿಂದ ಓಝೋನ್ ಪದರಕ್ಕೆ ಹಾನಿ ಆಗುವುದರ ಜೊತೆಗೆ ಪರಿಸರ ಮಾಲಿನ್ಯಕ್ಕೂ ಕಾರಣವಾಗುತ್ತದೆ. ಬಳಸಿದ ಪ್ಲಾಸ್ಟಿಕ್ ಹೊರಗೆ ಎಸೆಯದೆ ಮನೆಯಲ್ಲಿಯೇ ಸಂಗ್ರಹಿಸಬೇಕು ಬಳಸಿದ ಪ್ಲಾಸ್ಟಿಕ್ ಹಾಗೂ ತ್ಯಾಜ್ಯ ವಸ್ತುಗಳನ್ನು ಪುನರ್ ಬಳಕೆ ಕೇಂದ್ರಕ್ಕೆ ಕಳುಹಿಸಬೇಕು. ಪ್ಲಾಸ್ಟಿಕ್ ಬದಲಾಗಿ ಬಟ್ಟೆ ಚೀಲಗಳನ್ನು ಮತ್ತು ಕಾಗದ ಚೀಲಗಳನ್ನು ಬಳಸಿ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಬೇಕಾಗಿದೆ ಎಂದರು.
ಈ ಸಂಧರ್ಭದಲ್ಲಿ ಕೊಪ್ಪ ಸೈಕ್ಲಿಂಗ್ ಕ್ಲಬ್ ನ ನರೇಂದ್ರ ಕಾಮತ್ ,ಸಂತೋಷ್ ಕುಮಾರ್ , ರಾಜೇಷ್ ಭಟ್ , ನವೀನ್ ,ಗುರುಸ್ವಾಮಿ ರಕ್ಷಣಾ ಇಲಾಖೆಯ ಉಮೇಶ್ , ಸಂತೋಷ್ ಹಾಗೂ ಮಧುಸೂಧನ್ ಇದ್ದರು.
ರಿಪ್ಪನ್ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…