ಶಾಂತಿ ಸೌಹಾರ್ಧತೆಯಿಂದ ಐಕ್ಯತೆ ಸಾಧ್ಯ – ಸೊನಲೆ ಶ್ರೀನಿವಾಸ್

ರಿಪ್ಪನ್‌ಪೇಟೆ : ಶಾಂತಿ, ಸೌಹಾರ್ಧತೆಯನ್ನು ಬೆಳೆಸಿದರೆ ಮಾತ್ರ ದೇಶದಲ್ಲಿ ಐಕ್ಯತೆ ಸಾಧ್ಯ. ಜತೆಗೆ ಸರ್ವರೂ ಸಮನ್ವಯತೆಯಿಂದ ಬದುಕಬಹುದು ಎಂದು ಇತಿಹಾಸಕಾರ ಸೊನಲೆ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಆವರಣದ ಕೂರ ತಂಝಲ್ ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ಆಯೋಜಿಸಿದ್ದ ಸ್ನೇಹ – ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರ್ವ ಜನಾಂಗದ ಮನಸ್ಸುಗಳನ್ನು ಗಟ್ಟಿಗೊಳಿಸಿದರೆ ದೇಶ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಮತ್ತೊಮ್ಮೆ ಪ್ರಚೋಧನಾಕಾರಿಗಳೇ ಪ್ರಜ್ವಲಿಸುತ್ತವೆ. ಇದರಿಂದ ದೇಶದಲ್ಲಿ ಅಶಾಂತಿ ಮೂಡುತ್ತದೆ. ವ್ಯಕ್ತಿ, ಕುಟುಂಬ, ಸಮಾಜ ನೆಮ್ಮದಿಯಿಂದ ಬದುಕಲು ಸಾಧ್ಯವಿಲ್ಲ. ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಾ ಹೋಗುತ್ತವೆ. ಆತಂಕವಾದಿಗಳ ಮತ್ತಷ್ಟು ಪ್ರಬಲರಾಗುತ್ತಾರೆ. ಸಮಾಜವನ್ನು ಸರ್ವನಾಶ ಮಾಡುತ್ತಾರೆ. ಇಂತಹ ಸನ್ನಿವೇಶಗಳ ನಡುವೆ ಸರ್ವಜನಾಂಗದ ಪ್ರೀತಿ, ಸಹಬಾಳ್ವೆ, ನೆಮ್ಮದಿಯ ಸಂದೇಶವನ್ನು ಸಾರುವ ಸೌಹಾರ್ಧ ಸಮ್ಮೇಳನಗಳು ಹೆಚ್ಚೆಚ್ಚು ನಡೆಯಲಿ. ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಲಿ ಎಂದರು.

ನಿಟ್ಟೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ನಿಲ್ಸ್ ಕಲ್ ಮಾತನಾಡಿ ಮಹಮ್ಮದ್ ಪೈಗಂಬರ್ ರವರು ಅರಸರಾದಾಗಲೂ ಅವರು ಬಡತನದ ಜೀವನವನ್ನೇ ನಡೆಸಿದರು. ಯಾರಾದರೂ ಎದ್ದು ನಿಂತು ತನಗೆ ಗೌರವ ಸೂಚಿಸುವುದನ್ನೂ ಅವರು ಇಷ್ಟಪಡುತ್ತಿರಲಿಲ್ಲ. ತಮ್ಮನ್ನು ಯಾರಾದರೂ ಅತಿಯಾಗಿ ಹೊಗಳಿದರೆ ತುಂಬಾ ಕಸಿವಿಸಿಗೊಳ್ಳುತ್ತಿದ್ದರು. ದೇವರ ದಾಸ ಎಂದು ಮಾತ್ರ ತನ್ನನ್ನು ಗುರುತಿಸಿಕೊಳ್ಳಲು ಇಷ್ಟಪಡುತ್ತಿದ್ದ ಅವರು ಸಾವನ್ನಪ್ಪಿದಾಗ ಕೆಲವೇ ಕೆಲವು ನಾಣ್ಯಗಳು ಮಾತ್ರ ಅವರ ಸಂಪತ್ತಾಗಿದ್ದವು. ಮದೀನಾದ ಅಧಿಪತಿಯಾದ ಅವರು ವಿನಮ್ರತೆ ಮತ್ತು ಸರಳತೆಯ ಮೂಲಕ ಆಳುವವರು ತಮ್ಮ ಬದುಕನ್ನು ಹೇಗೆ ಒಪ್ಪಗೊಳಿಸಿಕೊಳ್ಳಬಹುದು ಎಂಬುದಕ್ಕೆ ಒಂದು ಉದಾಹರಣೆಯಂತಿದ್ದರು. ಇಷ್ಟು ಬಡತನವನ್ನು, ಸರಳತೆಯನ್ನು ಮತ್ತು ವಿನಮ್ರತೆಯನ್ನು ಬದುಕಿದ ಅರಸ ಯಾವುದೇ ಕಾಲದ, ಯಾವುದೇ ನಾಡಿನ ಚರಿತ್ರೆಯಲ್ಲಿ ಮತ್ತೊಬ್ಬರು ಸಿಗಲು ಸಾಧ್ಯವೇ ಇಲ್ಲ.ಮಾನವ ಕುಲ ತಾನೊಂದೆವಲಂ ಅಥವಾ ವಸುದೈವ ಕುಟುಂಬಕಂ ಎಂಬ ತತ್ತ್ವ ಪೈಗಂಬರರ ಮಾತು ಮತ್ತು ಕೃತಿಯಲ್ಲಿ ಧಾರಾಳವಾಗಿ ಬೆರೆತಿದೆ. ಅರಬ್ಬಿ-ಅರಬಿಯೇತರ, ಬಿಳಿಯ-ಕರಿಯ ಇವರಲ್ಲಿ  ಯಾರು ಶ್ರೇಷ್ಠರೂ ಅಲ್ಲ, ಯಾರು ಕನಿಷ್ಠರೂ ಅಲ್ಲ. ಭೂಮಿಯಲ್ಲಿರುವ ಎಲ್ಲ ಮಾನವರು ಒಂದೇ ತಾಯ್ತಂದೆಯರ ಮಕ್ಕಳೆಂದು ಅವರು ಹೇಳುತ್ತಿದ್ದರು. ಅವರ ನುಡಿ ಮತ್ತು ನಡೆ ಎರಡೂ ಒಂದೇ ಆಗಿದ್ದವು. ಯಹೂದಿಯೊಬ್ಬನ ಶವವನ್ನು ಸಂಸ್ಕಾರಕ್ಕೆ ತೆಗೆದು ಕೊಂಡು ಹೋಗುವುದನ್ನು ಕಂಡಾಗ ಪ್ರವಾದಿ ಎದ್ದು ನಿಂತು ಗೌರವ ಸೂಚಿಸಿದ್ದರು. ಅವರು ಆ ವ್ಯಕ್ತಿಯಲ್ಲಿ ಮನುಷ್ಯನನ್ನು ಕಾಣುತ್ತಿದ್ದರೇ ಹೊರತು ಜಾತಿ ಮತ ಪಂಥವನ್ನಲ್ಲ ಅಂತಹ ವ್ಯಕ್ತಿ ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದರು.

ಇದೇ ಸಂಧರ್ಭದಲ್ಲಿ ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಯನ್ನು ಪಡೆದ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರಾದ ವಾಸುದೇವ್ ಕೆ ಹೆಚ್ ರವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊಹಿಯುದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷ ಹಸನಬ್ಬ ಬಾವಬ್ಯಾರಿ ವಹಿಸಿದ್ದರು.

ಈ ಸಂಧರ್ಭದಲ್ಲಿ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ,ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ, ಗ್ರಾಪಂ ಸದಸ್ಯರಾದ ಆಸೀಫ಼್ ಬಾಷಾ , ನಿರೂಪ್ ಕುಮಾರ್, ಪಿಡಿಓ ಮಧುಸೂಧನ್ ,SYS ಸಂಘಟನೆಯ ಅಧ್ಯಕ್ಷ ಮಹಮ್ಮದ್ ಹನೀಫ಼್ , ಮಿಲಾದ್ ಸಮಿತಿ ಅಧ್ಯಕ್ಷ ನಾಸೀರ್ ಹಮೀದ್ ಸಾಬ್ , SSF ಅಧ್ಯಕ್ಷ ಅಜ್ಮಲ್ ಹಾಗೂ ಇನ್ನಿತರರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

15 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

17 hours ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

2 days ago