HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು
ಹೊಸನಗರ ಪಟ್ಟಣದ ಹೊರ ವಲಯದ ಕುವೆಂಪು ಶಾಲೆಯ ಹತ್ತಿರ ನೇಣು ಬಿಗಿದ ಸ್ಥಿತಿಯಲ್ಲಿ ಹಸುವಿನ ಶವವೊಂದು ಪತ್ತೆಯಾದ ಘಟನೆ ನಡೆದಿದೆ.
ಪಟ್ಟಣದಲ್ಲಿರುವ ಗೋಶಾಲೆಯಲ್ಲಿ 10-20 ಬೀದಿ ಹಸುಗಳು ಇದರ ಜೊತೆಗೆ ಅಪಘಾತದಲ್ಲಿ ಕಾಲು ಮುರಿದುಕೊಂಡ ಹಸು, ಕರುಗಳನ್ನು ಬಿಡಾಡಿ ದನಗಳನ್ನು ಸಾಕುತ್ತಿದ್ದರು. ಭಾನುವಾರ ರಾತ್ರಿ 12 ಗಂಟೆಯವರೆಗೆ ಗೋ ಶಾಲೆಯ ಗೋ ಸೇವಕರು ದನ-ಕರುಗಳಿಗೆ ಆಹಾರ ಹಾಕಿ ಮನೆಗೆ ಹೋದ ಸಂದರ್ಭದಲ್ಲಿ ಕಿಡಿಗೇಡಿಗಳು ದನದ ಕೊಟ್ಟಿಗೆಗೆ ಹೋಗಿ ಒಂದು ದನವನ್ನು ಎಳೆದುಕೊಂಡು ಹೋಗಿ ಅಲ್ಲೇ ಸಮೀಪವಿದ್ದ ದನಗಳಿಗೆ ನೀರುಣಿಸುವ ಬಾವಿಗೆ ನೇತು ಹಾಕಿ ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸರ್ಕಲ್ ಇನ್ಸ್ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ರವರ ಹಾಗೂ ಸಬ್ ಇನ್ಸ್ ಪೆಕ್ಟರ್ ಶಂಕರಗೌಡ ಪಾಟೀಲ್ ನೇತೃತ್ವದ ಪೋಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ನೇಣು ಬಿಗಿದ ಸ್ಥಿತಿಯಲ್ಲಿರುವ ದನದ ಶವವಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಅಗ್ನಿಶಾಮಕ ಸಿಬ್ಬಂದಿಯಾದ ಕೆ.ಟಿ ರಾಜಪ್ಪ, ರಾಜೇಶ್, ಸುರೇಶ, ಶಿವರಾಜ್ ಬಿ.ಜೆ, ಕೃಷ್ಣಚಾರಿ ಹೇಮಾಂತ್ಕುಮಾರ್ರವರ ಸಹಾಯದಿಂದ ನೇಣು ಹಾಕಿರುವ ಕುಣಿಕೆ ತಪ್ಪಿಸಿ ಬಾವಿಯಿಂದ ದನವನ್ನು ಮೇಲೆತ್ತಲಾಯಿತು.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…