HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು
ಹೊಸನಗರ ಪಟ್ಟಣದ ಹೊರ ವಲಯದ ಕುವೆಂಪು ಶಾಲೆಯ ಹತ್ತಿರ ನೇಣು ಬಿಗಿದ ಸ್ಥಿತಿಯಲ್ಲಿ ಹಸುವಿನ ಶವವೊಂದು ಪತ್ತೆಯಾದ ಘಟನೆ ನಡೆದಿದೆ.
ಪಟ್ಟಣದಲ್ಲಿರುವ ಗೋಶಾಲೆಯಲ್ಲಿ 10-20 ಬೀದಿ ಹಸುಗಳು ಇದರ ಜೊತೆಗೆ ಅಪಘಾತದಲ್ಲಿ ಕಾಲು ಮುರಿದುಕೊಂಡ ಹಸು, ಕರುಗಳನ್ನು ಬಿಡಾಡಿ ದನಗಳನ್ನು ಸಾಕುತ್ತಿದ್ದರು. ಭಾನುವಾರ ರಾತ್ರಿ 12 ಗಂಟೆಯವರೆಗೆ ಗೋ ಶಾಲೆಯ ಗೋ ಸೇವಕರು ದನ-ಕರುಗಳಿಗೆ ಆಹಾರ ಹಾಕಿ ಮನೆಗೆ ಹೋದ ಸಂದರ್ಭದಲ್ಲಿ ಕಿಡಿಗೇಡಿಗಳು ದನದ ಕೊಟ್ಟಿಗೆಗೆ ಹೋಗಿ ಒಂದು ದನವನ್ನು ಎಳೆದುಕೊಂಡು ಹೋಗಿ ಅಲ್ಲೇ ಸಮೀಪವಿದ್ದ ದನಗಳಿಗೆ ನೀರುಣಿಸುವ ಬಾವಿಗೆ ನೇತು ಹಾಕಿ ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸರ್ಕಲ್ ಇನ್ಸ್ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ರವರ ಹಾಗೂ ಸಬ್ ಇನ್ಸ್ ಪೆಕ್ಟರ್ ಶಂಕರಗೌಡ ಪಾಟೀಲ್ ನೇತೃತ್ವದ ಪೋಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ನೇಣು ಬಿಗಿದ ಸ್ಥಿತಿಯಲ್ಲಿರುವ ದನದ ಶವವಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಅಗ್ನಿಶಾಮಕ ಸಿಬ್ಬಂದಿಯಾದ ಕೆ.ಟಿ ರಾಜಪ್ಪ, ರಾಜೇಶ್, ಸುರೇಶ, ಶಿವರಾಜ್ ಬಿ.ಜೆ, ಕೃಷ್ಣಚಾರಿ ಹೇಮಾಂತ್ಕುಮಾರ್ರವರ ಸಹಾಯದಿಂದ ನೇಣು ಹಾಕಿರುವ ಕುಣಿಕೆ ತಪ್ಪಿಸಿ ಬಾವಿಯಿಂದ ದನವನ್ನು ಮೇಲೆತ್ತಲಾಯಿತು.
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…