ಮೆಗ್ಗಾನ್ ಆಸ್ಪತ್ರೆಯಲ್ಲಿ ಉಪ್ಪಿನ ಕೊರತೆ.! – ವಿಷ ಸೇವಿಸಿದ್ದ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗದೇ ಸಾವು | ಕುಟುಂಬಸ್ಥರ ಆಕ್ರೋಶ

ಮೆಗ್ಗಾನ್ ಆಸ್ಪತ್ರೆಯಲ್ಲಿ ಉಪ್ಪಿನ ಕೊರತೆ – ವಿಷ ಸೇವಿಸಿದ್ದ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗದೇ ಸಾವು | ಕುಟುಂಬಸ್ಥರ ಆಕ್ರೋಶ

ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಉಪ್ಪಿನ ಕೊರತೆಯಿಂದ ವಿಷ ಸೇವಿಸಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಸ್ವಾಮಿನಾಥ್ (55) ಎಂಬಾತನನ್ನು ಭದ್ರಾವತಿಯಿಂದ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಿಷ ಸೇವಿಸಿ ಒದ್ದಾಡುತ್ತಿದ್ದ ವ್ಯಕ್ತಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ವೈದ್ಯರು ಮತ್ತು ಸಿಬ್ಬಂದಿ ವಿಫಲರಾಗಿದ್ದು ಆಸ್ಪತ್ರೆಗೆ ದಾಖಲಿಸಿ ಒಂದು ಗಂಟೆ ಆದರೂ ಯಾವುದೇ ಸಿಬ್ಬಂದಿ ಮತ್ತು ವೈದ್ಯರು ವ್ಯಕ್ತಿಗೆ ಚಿಕಿತ್ಸೆ ನೀಡದ ಪರಿಣಾಮ ರೋಗಿಯ ಜೀವ ಹೋಗಿದೆ.

ವಿಷಸೇವಿಸಿದ ಕೇಸ್ ಬಂದ ತಕ್ಷಣ ಕೂಡಲೇ ಅವರಿಗೆ ವಾಂತಿ ಮಾಡಿಸಬೇಕು. ಆದರೆ ವಾಂತಿ ಮಾಡಿಸಲು ಆಸ್ಪತ್ರೆಯಲ್ಲಿ ಉಪ್ಪು ಖಾಲಿ ಆಗಿದ್ದು, ಉಪ್ಪು ಇಲ್ಲದೇ ಸಿಬ್ಬಂದಿಗಳು ಪರದಾಡಿದ್ದಾರೆ. ಇನ್ನು ಉಪ್ಪು ತರಲು ಒಂದು ಗಂಟೆ ವಿಳಂಬ ಮಾಡಿದ್ದಾರೆ. ಅಷ್ಟರಲ್ಲೇ ವಿಷಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯ ಜೀವ ಹೋಗಿತ್ತು. ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲು ವೈದ್ಯರು ಮತ್ತು ಸಿಬ್ಬಂದಿಗಳು ಇರದ ಹಿನ್ನಲೆಯಲ್ಲಿ ವ್ಯಕ್ತಿಯ ಜೀವ ಹೋಗಿದೆ ಎನ್ನುವುದು ಮೃತನ ಕುಟುಂಬಸ್ಥರ ಆರೋಪವಾಗಿದೆ. ಸ್ವಾಮಿನಾಥ್ ನ ಸಾವಿಗೆ ವೈದ್ಯರು ಮತ್ತು ಜಿಲ್ಲಾಸ್ಪತ್ರೆಯ ಬೇಜವಾಬ್ದಾರಿಯೇ ಕಾರಣವಾಗಿದೆ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಮೃತನ ಕುಟುಂಬಸ್ಥರು ಮತ್ತು ಸಂಬಂಧಿಕರು ಕಣ್ಣೀರು ಹಾಕುತ್ತಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಈ ಅವ್ಯವಸ್ಥೆ ನೋಡಿದ ಮೃತನ ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿದೆ. ಆಸ್ಪತ್ರೆಯಲ್ಲಿ ಎಲ್ಲದಕ್ಕೂ ಹಣ ಕೇಳುತ್ತಾರೆ. ಸರಕಾರಿ ಆಸ್ಪತ್ರೆಯಲ್ಲಿ ಲಂಚ ಕೊಡದೇ ಇದ್ದರೇ ಯಾವುದೇ ಕೆಲಸ ಆಗುವುದಿಲ್ಲ. ಮೃತ ವ್ಯಕ್ತಿಯ ದೇಹವನ್ನು ಶವಾಗಾರಕ್ಕೆ ಶಿಫ್ಟ್ ಮಾಡಲು ಸರಕಾರಿ ಅಂಬುಲೇನ್ಸ್ ಚಾಲಕ 300 ರೂಪಾಯಿ ಪಡೆದಿದ್ದಾನಂತೆ. ಮೃತ ಪಟ್ಟ ಬಳಿಕವೂ ಮೃತನ ಸಂಬಂಧಿಗಳು ದುಡ್ಡು ಕೊಟ್ಟು ಮುಂದಿನ ಕೆಲಸ ಮಾಡಿಕೊಂಡಿದ್ದಾರೆ. ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಹಣ ಕೊಟ್ಟರೇ ಮಾತ್ರ ಚಿಕಿತ್ಸೆ ಮತ್ತು ಸೌಲಭ್ಯಗಳು ಸಿಗಲು ಸಾಧ್ಯ. ಸರಕಾರಿ ಆಸ್ಪತ್ರೆಗೆ ಬಡರೋಗಿಗಳು ಬಂದರೆ ಅವರನ್ನು ದೇವರೇ ಕಾಪಡುವಂತ ಸ್ಥಿತಿ ನಿರ್ಮಾಣವಾಗಿದೆ.

ತುರ್ತು ಚಿಕಿತ್ಸಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಮತ್ತು ಸಿಬ್ಬಂದಿಗಳ ವಿರುದ್ಧ ವೈದ್ಯಾಧಿಕಾರಿಗಳು ಕ್ರಮ ವಹಿಸಬೇಕಿದೆ. ಸ್ವಾಮಿನಾಥ್ಗೆ ಸೂಕ್ತ ಸಮಯದಲ್ಲಿ ಯಾಕೇ ಚಿಕಿತ್ಸೆ ಕೊಟ್ಟಿಲ್ಲ. ಆತನ ಸಾವಿಗೆ ಯಾರು ಕಾರಣ ಎನ್ನುವ ಕುರಿತು ಸೂಕ್ತ ತನಿಖೆಯಾಗಬೇಕೆಂದು ಮೃತನ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

4 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

17 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

19 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

22 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

22 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

22 hours ago