ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು
ತೀರ್ಥಹಳ್ಳಿ : ಹಲವಾರು ಅಪರಾಧಗಳಲ್ಲಿ ಭಾಗಿಯಾಗಿ ಬೆಂಗಳೂರಿನಲ್ಲಿ ಚಿನ್ನವನ್ನು ಕದ್ದು ತೀರ್ಥಹಳ್ಳಿಯ ತನ್ನ ಮನೆಯ ಹಿಂದೆ ಹೂತಿಟ್ಟಿದ್ದ ಆರೋಪಿಯನ್ನು ಮಾಗಡಿ ಪೊಲೀಸರು ತೀರ್ಥಹಳ್ಳಿಗೆ ಕರೆ ತಂದು ಕೆಜಿ ಗಟ್ಟಲೆ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಹಮೀದ್ ಹಂಜ ಎಂಬ ಆರೋಪಿ ಬೆಂಗಳೂರಿನ ಮಾಗಡಿಯಲ್ಲಿ ಕಳ್ಳತನ ಮಾಡಿ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ತಮ್ಮ ಮನೆಯ ಹಿತ್ತಲಿನಲ್ಲಿ ತಂದು ಹೂತಿಟ್ಟಿದ್ದ.
ಬೆಂಗಳೂರಿನಿಂದ ತೀರ್ಥಹಳ್ಳಿಗೆ ಆರೋಪಿಯನ್ನು ಕರೆ ತಂದಿದ್ದ ಮಾಗಡಿ ಪೊಲೀಸರು ಸುಮಾರು 1 ಕೆಜಿಗೂ ಜಾಸ್ತಿ ಆಗುವಷ್ಟು ಚಿನ್ನವನ್ನು ವಶ ಪಡಿಸಿಕೊಂಡಿದ್ದಾರೆ.
ಮೂಲತಃ ಆಗುಂಬೆ ಸಮೀಪದ ಗುಡ್ಡೇಕೇರಿಯವನಾದ ಹಂಜನ ಮೇಲೆ 70 ರಿಂದ 80 ಕ್ಕೂ ಹೆಚ್ಚು ಕೇಸ್ ಗಳಿದ್ದು ಆಗುಂಬೆ ಸಮೀಪದಲ್ಲಿ ನಡೆದಿದ್ದ ಹೊಸಳ್ಳಿ ವೆಂಕಟೇಶ್ ಕೊಲೆ ಪ್ರಕರಣದಲ್ಲೂ ಹಂಜ ಭಾಗಿಯಾಗಿದ್ದ.ಕೊಲೆ, ವಸೂಲಿ, ವಂಚನೆ ಪ್ರಕರಣಗಳಲ್ಲಿ ಈತ ಭಾಗಿಯಾಗಿರುವುದು ತಿಳಿದು ಬಂದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್