ತೀರ್ಥಹಳ್ಳಿಯ ತಹಶೀಲ್ದಾರ್ ಹೃದಯಘಾತದಿಂದ ನಿಧನ!
ತೀರ್ಥಹಳ್ಳಿ : ತಾಲೂಕು ದಂಡಾಧಿಕಾರಿಗಳಾದ ಜಕ್ಕಣ್ಣ ಗೌಡರ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಇವರು ನ್ಯಾಯಾಲಯದ ಕೆಲಸದ ನಿಮಿತ್ತವಾಗಿ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಇರುವ ವೈಭವ ಲಾಡ್ಜ್ ನಲ್ಲಿ ತಂಗಿದ್ದರು. ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ತೀವ್ರ ತರದ ಎದೆ ನೋವು ಕಂಡು ಬಂದಿದ್ದು ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, ಹೈಕೋರ್ಟ್ ಕೆಲಸದ ನಿಮಿತ್ತ ಮಂಗಳವಾರ ಬೆಂಗಳೂರಿಗೆ ತೆರಳಿದ್ದರು. ಫೋನ್ ಸಂಪರ್ಕಕ್ಕೆ ಸಿಗದ ಹಿನ್ನಲೆಯಲ್ಲಿ ನೌಕರರು ಸಂಪರ್ಕ ಸಾಧಿಸುವ ಪ್ರಯತ್ನ ನಡೆಸಿದ್ದಾರೆ.
ಹೃದಯಾಘಾತದಿಂದ ನಿಧನ ಆಗಿರಬಹುದು ಎಂದು ಹೇಳಲಾಗುತ್ತಿದೆ. ಈಗಾಗಲೇ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ. ಮೃತಪಟ್ಟಿರುವ ವಿಷಯವನ್ನು ಶಿವಮೊಗ್ಗ ಜಿಲ್ಲಾಧಿಕಾರಿಗಳು ದೃಡಪಡಿಸಿದ್ದಾರೆ.
ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮತ್ತು ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ತೀರ್ಥಹಳ್ಳಿ ಅಧಿಕಾರಿಗಳು, ತಹಸೀಲ್ದಾರ್ ಕಚೇರಿ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…