ತೀರ್ಥಹಳ್ಳಿಯ ತಹಶೀಲ್ದಾರ್ ಹೃದಯಘಾತದಿಂದ ನಿಧನ!
ತೀರ್ಥಹಳ್ಳಿ : ತಾಲೂಕು ದಂಡಾಧಿಕಾರಿಗಳಾದ ಜಕ್ಕಣ್ಣ ಗೌಡರ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಇವರು ನ್ಯಾಯಾಲಯದ ಕೆಲಸದ ನಿಮಿತ್ತವಾಗಿ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಇರುವ ವೈಭವ ಲಾಡ್ಜ್ ನಲ್ಲಿ ತಂಗಿದ್ದರು. ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ತೀವ್ರ ತರದ ಎದೆ ನೋವು ಕಂಡು ಬಂದಿದ್ದು ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, ಹೈಕೋರ್ಟ್ ಕೆಲಸದ ನಿಮಿತ್ತ ಮಂಗಳವಾರ ಬೆಂಗಳೂರಿಗೆ ತೆರಳಿದ್ದರು. ಫೋನ್ ಸಂಪರ್ಕಕ್ಕೆ ಸಿಗದ ಹಿನ್ನಲೆಯಲ್ಲಿ ನೌಕರರು ಸಂಪರ್ಕ ಸಾಧಿಸುವ ಪ್ರಯತ್ನ ನಡೆಸಿದ್ದಾರೆ.
ಹೃದಯಾಘಾತದಿಂದ ನಿಧನ ಆಗಿರಬಹುದು ಎಂದು ಹೇಳಲಾಗುತ್ತಿದೆ. ಈಗಾಗಲೇ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ. ಮೃತಪಟ್ಟಿರುವ ವಿಷಯವನ್ನು ಶಿವಮೊಗ್ಗ ಜಿಲ್ಲಾಧಿಕಾರಿಗಳು ದೃಡಪಡಿಸಿದ್ದಾರೆ.
ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮತ್ತು ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ತೀರ್ಥಹಳ್ಳಿ ಅಧಿಕಾರಿಗಳು, ತಹಸೀಲ್ದಾರ್ ಕಚೇರಿ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…